ಬೇರೆ ರಾಜ್ಯಗಳಲ್ಲಿ ಹೇಗಿದೆ ಭೂ ಖರೀದಿ?

ಕರ್ನಾಟಕದಲ್ಲಿ ಕೃಷಿಕರಲ್ಲದವರಿಗೆ ಕೃಷಿಭೂಮಿ ಕೊಳ್ಳಲು ಅನುಕೂಲವಾಗುವಂತೆ 1961ರ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ರಾಜ್ಯ ಸರಕಾರ ಇತ್ತೀಚಿಗೆ ನಿರ್ಧರಿಸಿದೆ. ಈ ಬೆಳವಣಿಗೆ ಸಂಚಲನ ಸೃಷ್ಟಿಸಿರುವ ಸಂದರ್ಭ ದೇಶದ ಇತರ ರಾಜ್ಯಗಳ ಭೂ ಸುಧಾರಣೆ ನೀತಿಗಳ ಅವಲೋಕನ ಇಲ್ಲಿದೆ. 1. ತಮಿಳುನಾಡು ತಮಿಳುನಾಡಿನಲ್ಲಿ 1961ರ ಭೂಸುಧಾರಣೆ ಕಾಯಿದೆಗೆ ಹಲವಾರು ಸಲ ತಿದ್ದುಪಡಿಗಳಾಗಿದೆ. ಕೃಷಿಕರಲ್ಲದವರೂ ಕೃಷಿ ಭೂಮಿ ಖರೀದಿಸಬಹುದು. ಕೃಷಿ ಉದ್ದೇಶಕ್ಕಾಗಿಯೇ ಕೊಳ್ಳುವುದಿದ್ದರೆ ಕುಟುಂಬವೊಂದು ಗರಿಷ್ಠ 59.95 ಎಕರೆಯಷ್ಟು ಪಡೆಯಬಹುದು. ಬಂಜರು ಭೂಮಿಯಾಗಿದ್ದರೆ ಜಿಲ್ಲಾಧಿಕಾರಿ ಅನುಮೋದನೆ ಪಡೆದು ಕೃಷಿಯೇತರ […]

Read More

ಕೃಷಿ, ಉದ್ಯಮ ಜಂಟಿ ಹೆಜ್ಜೆ

– ಭೂಸುಧಾರಣೆ ಕಾಯಿದೆ ತಿದ್ದುಪಡಿಯ ಒಳಿತು-ಕೆಡುಕಿನ ವಾದ ತಾರಕಕ್ಕೆ – ಕೃಷಿ ಕೃಶವಾಗದಿರಲಿ, ಕೈಗಾರಿಕೆಗಳಿಗೂ ಅವಕಾಶ ಸಿಗಲಿ ಎಂಬ ಆಶಯ. ವಿಕ ಸುದ್ದಿಲೋಕ, ಬೆಂಗಳೂರು. ರಾಜ್ಯ ಸರಕಾರದ ಉದ್ದೇಶಿತ ಭೂಸುಧಾರಣೆ ಕಾಯಿದೆ ತಿದ್ದುಪಡಿ ಪ್ರಸ್ತಾಪದ ಪರ ವಿರೋಧ ಚರ್ಚೆ ತೀವ್ರವಾಗಿದೆ. ಕಾಯಿದೆ ತಿದ್ದುಪಡಿಯಿಂದ ಕರ್ನಾಟಕದಲ್ಲಿ ರೈತರಿಗೆ, ಕೃಷಿ ವಲಯಕ್ಕೆ ಯಾವುದೇ ಹಿನ್ನಡೆ ಆಗದೆ ಕೈಗಾರಿಕಾ ಕ್ರಾಂತಿಗೆ ಅನುವು ಮಾಡಿಕೊಡುತ್ತದೆ ಎನ್ನುವುದು ಸರಕಾರದ ನಿಲುವು. ಇದೇ ವೇಳೆ ಈ ತಿದ್ದುಪಡಿ ರಾಜ್ಯದ ರೈತರಿಗೆ ಮಾರಕ ಎಂಬ ವಾದವನ್ನು ಪ್ರತಿಪಕ್ಷ […]

Read More

ಇದು ವಿಜಯ ಕರ್ನಾಟಕ ಹೇಳಿದ್ದಲ್ಲ, ಕೇಂದ್ರ‌ ಸರಕಾರ‌ ಬಿಡುಗಡೆ ಮಾಡಿದ ಮಾಹಿತಿ…

ದೇಶದ 30% ಸೋಂಕಿಗೆ ತಬ್ಲಿಘಿ ಸಮಾವೇಶ ಲಿಂಕ್‌ – ದೇಶಾದ್ಯಂತ ಪತ್ತೆಯಾದ ಒಟ್ಟು ಕೊರೊನಾ ಪ್ರಕರಣಗಳು 14,378 – ತಬ್ಲಿಘಿ ಜಮಾತ್‌ ಸಮಾವೇಶದ ನಂಟಿರುವ ಸೋಂಕಿತರು 4,291 – ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಧಿಕೃತ ಮಾಹಿತಿ ಏಜೆನ್ಸೀಸ್‌ ಹೊಸದಿಲ್ಲಿ ದೇಶದಲ್ಲಿ ದಾಖಲಾದ ಕೊರೊನಾ ಸೋಂಕು ಪ್ರಕರಣಗಳಲ್ಲಿ ಶೇಕಡಾ 30ಕ್ಕೆ ತಬ್ಲಿಕ್‌ ಜಮಾತ್‌ ಸಮಾವೇಶದ ನಂಟು ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ‘‘ದೇಶಾದ್ಯಂತ ಶನಿವಾರ ಮಧ್ಯಾಹ್ನದವರೆಗಿನ ವರದಿ ಪ್ರಕಾರ ಒಟ್ಟು 14,378 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, […]

Read More

ಇದೊಂದು ಇರ್ಲಿಲ್ಲಾ ಅಂದ್ರೆ ಭಾರತ ಸೇಫಾಗಿತ್ತು..

ತಬ್ಲಿಘಿ ನಂಜೇ ಸಾವಿರ! – 17 ರಾಜ್ಯಗಳಲ್ಲಿನ 1023 ಕೇಸಿಗೆ ನಿಜಾಮುದ್ದೀನ್‌ ನಂಟು – 22 ಸಾವಿರ ಜನರು ಕ್ವಾರಂಟೈನ್‌ – ಶತಕದ ಬಾಗಿಲಿಗೆ ಬಂದ ಸಾವಿನ ಸಂಖ್ಯೆ – ರಾಜ್ಯದಲ್ಲೂ16 ಹೊಸ ಕೇಸ್‌ ಪತ್ತೆ ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಮೂರು ಸಾವಿರದ ಗಡಿ ದಾಟಿದೆ. ಆದರೆ, ಸೋಂಕಿನ ಪ್ರಮಾಣದಲ್ಲಿ ಸಿಂಹಪಾಲು ಪ್ರಕರಣಗಳು ನೇರವಾಗಿ ದಿಲ್ಲಿಯಲ್ಲಿ ನಡೆದ ತಬ್ಲಿಘಿ ಸಮಾವೇಶದೊಂದಿಗೆ ನಂಟು ಹೊಂದಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ, ತಮಿಳುನಾಡು, […]

Read More

ಸಾಮಾಜಿಕ ಹೊಣೆಗಾರಿಕೆ ಇರಲಿ: ಸಮುದಾಯ ಕಾಯಿಲೆ ಹರಡುವಿಕೆ ತಡೆಯಬೇಕು

ದಿಲ್ಲಿಯ ನಿಜಾಮುದ್ದೀನ್‌ ತಬ್ಲಿಘ್‌-ಇ-ಜಮಾತ್‌ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿರುವುದು ದೇಶದ ಆತಂಕಕ್ಕೆ ಕಾರಣವಾಗಿದೆ. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಇತರ ರಾಜ್ಯಗಳಿಗೆ ಸೇರಿದ ಸಾವಿರಾರು ಮಂದಿ ಜಮಾತ್‌ ಸಭೆಯಲ್ಲಿ ಭಾಗವಹಿಸಿ ವಾಪಸಾಗಿ ನಾನಾ ಕಡೆ ಸಂಚರಿಸಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ. ತಬ್ಲಿಘ್‌-ಇ-ಜಮಾತ್‌ ಸಭೆಯಲ್ಲಿ ಭಾಗವಹಿಸಿ ವಾಪಸಾದ ಕರ್ನಾಟಕದ ಸಿರಾದ ವೃದ್ಧ, ಆಂಧ್ರ ಮತ್ತು ತೆಲಂಗಾಣದ ತಲಾ ಓರ್ವರು ಸೇರಿ ಒಟ್ಟು ಹತ್ತಕ್ಕೂ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top