ಶವಸಂಸ್ಕಾರದ ಯೋಧರು – ಕೊರೊನಾ ಸಾವಿನ ಭೀತಿ ತೊಲಗಲಿ

ಕೋವಿಡ್‌ ಸೋಂಕಿನಿಂದ ಮೃತಪಟ್ಟ ಕನಕಪುರದ ವ್ಯಕ್ತಿರೊಬ್ಬರ ಅಂತ್ಯ ಸಂಸ್ಕಾರವನ್ನು ನಗರಸಭೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದೊಂದಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(ಪಿಎಫ್‌ಐ) ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ತರಬೇತಿ ಪಡೆದು ಕೋವಿಡ್‌ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ನಡೆಸುತ್ತಿದ್ದು, ಭಾನುವಾರ ಕೂಡ ಮೂವರ ಶವಸಂಸ್ಕಾರ ನಡೆಸಿದ್ದಾರೆ. ಕೋವಿಡ್‌ನಿಂದ ಯಾರೇ ಮೃತಪಟ್ಟರೂ, ಅವರ ಅಂತ್ಯಸಂಸ್ಕಾರ ನಡೆಸಲು ಪ್ರತಿ […]

Read More

ಎಚ್‌ಸಿಎಲ್‌ಗೆ ರೋಶ್ನಿ ನಾಡಾರ್‌

ದೇಶದ ಶ್ರೀಮಂತ ಮಹಿಳೆ ಮಾತ್ರವಲ್ಲ, ಉದಾರ ಪರಂಪರೆಗೂ ಕೊಂಡಿ. – ಹ.ಚ.ನಟೇಶ ಬಾಬು. ನನಗೆ ಟೆಕ್ನಾಲಜಿ ಬಿಸಿನೆಸ್‌ನಲ್ಲಿ ಆಸಕ್ತಿಯಿಲ್ಲ, ಕನಿಷ್ಠ ನಾನು ಆ ಪ್ರಯತ್ನವನ್ನೂ ಮಾಡುವುದಿಲ್ಲ…. – ಇದು 2012ರಲ್ಲಿ ‘ಎಕನಾಮಿಕ್‌ ಟೈಮ್ಸ್‌’ ಪತ್ರಿಕೆಗೆ ನೀಡಿದ್ದ ಸಂದರ್ಶನದಲ್ಲಿ ರೋಶ್ನಿ ಮಲ್ಹೋತ್ರಾ ನಾಡಾರ್‌ ಅವರು ಹೇಳಿದ್ದ ಮಾತು. ಈಗ ದೇಶದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಎಚ್‌ಸಿಎಲ್‌ ಟೆಕ್ನಾಲಜೀಸ್‌ ಲಿಮಿಟೆಡ್‌ನ ಅಧ್ಯಕ್ಷೆ. ಬೃಹತ್‌ ಐಟಿ ಕಂಪನಿ ಮುನ್ನಡೆಸುವ ಮೊದಲ ಭಾರತೀಯ ಮಹಿಳೆಯೂ ಹೌದು. ಅಪ್ಪನ ಉತ್ತರಾಧಿಕಾರಿಯಾಗಿ ಸಹಜವಾಗಿಯೇ ಕಂಪನಿಯಲ್ಲಿ […]

Read More

ಮನುಷ್ಯ ಸಾಹಸ, ದೈವಮಾಯೆ ಮತ್ತು ವಿಷಾದ

– ಅರವಿಂದ ಚೊಕ್ಕಾಡಿ. ಭೀಮನ ಅಧೋಮುಖ ಅವರೋಹಣ, ಅರ್ಜುನನ ಊಧ್ರ್ವಮುಖ ಉಡ್ಡಯನ ಮನುಷ್ಯರೆಂಬವರ ಸಾಹಸದ ಮೂರು ಪಾತಳಿಗಳನ್ನು ಕಥಾಸೂತ್ರದಲ್ಲಿ ಒಪ್ಪಿಡಿಯಾಗಿ ಆವರಿಸಿದ್ದು ಈ ಎರಡು ಜಂಗಮಶೀಲತೆಗಳ ಸಾಂಕೇತಿಕ ಅತಿಕ್ರಮಗಳು ಎಂಬ ಎಚ್‌. ಎಸ್‌. ವೆಂಕಟೇಶಮೂರ್ತಿ ಅವರ ಮಾತುಗಳನ್ನು ಓದಿದಾಗ ತೆಲುಗಿನಲ್ಲಿ ‘ಬಾಲ ಭಾರತಂ’ ಸಿನಿಮಾದಲ್ಲಿ ಘಂಟಸಾಲ ಹಾಡಿದ ‘ಮಾನವುಡೇ ಮಹನೀಯುಡು’ ಗೀತೆ ನೆನಪಾಯಿತು. ಮಾನವ ಸಾಹಸಕ್ಕೆ ದೇವರು ಕೂಡ ಶರಣಾಗಿಬಿಡುತ್ತಾರೆ ಎಂಬ ಮಾತನ್ನು ಕಠೋಪನಿಷತ್ತಿನಲ್ಲಿ ನಚಿಕೇತನಿಗೆ ಯಮ ಹೇಳುತ್ತಾನೆ. ಹಾಗೆ ನೋಡಿದರೆ ಭಾರತದ ಉಪನಿಷತ್‌ ತತ್ವಜ್ಞಾನ ಪರಂಪರೆಯಲ್ಲೆ […]

Read More

ಕೊರೊನೋತ್ತರ ಸಾಹಿತ್ಯ: ಸೃಜನಶೀಲತೆಗೆ ಹೊಸ ಸ್ವರೂಪ

ಸಾಂಕ್ರಾಮಿಕ ಸೃಷ್ಟಿಸಿದ ತಳಮಳ ಯಾತನೆಗಳೇ ಮುಂದಿನ ಸಾಹಿತ್ಯದ ದಾರಿ ದೀವಿಗೆಗಳಾಗಬಹುದು. – ಡಾ. ರೋಹಿಣಾಕ್ಷ ಶಿರ್ಲಾಲು. ಸಾಹಿತ್ಯ ಕಾಲಕಾಲಕ್ಕೆ ಹೊಸ ಮಾರ್ಗವನ್ನು ತನಗೆ ತಾನೇ ಶೋಧಿಸಿಕೊಳ್ಳುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ನೋಡಿದರೆ ಕೊರೊನಾ ಸೋಂಕು ಕೂಡ ಸಾಹಿತ್ಯ ಅಭಿವ್ಯಕ್ತಿಗೆ ಹೊಸದೊಂದು ಮಾರ್ಗವನ್ನು ಕಂಡುಕೊಳ್ಳಲು ಅವಕಾಶವಾಗಬಹುದು. ಸಾಹಿತ್ಯ ಚರಿತ್ರೆಯ ಕಾಲ ವಿಂಗಡನೆಯ ವಿಭಾಗ ಕ್ರಮದೊಳಗೆ ಇನ್ನು ಮುಂದೆ ಕೊರೊನಾ ಪೂರ್ವದ ಸಾಹಿತ್ಯ, ಕೊರೊನೋತ್ತರ ಸಾಹಿತ್ಯ ಎಂಬ ವಿಭಾಗಕ್ರಮಗಳೂ ಸೇರಬಹುದಾಗಿದೆ. ಕೇವಲ ವಿಭಾಗ ಕ್ರಮದ ದೃಷ್ಟಿಯಿಂದ ಮಾತ್ರವಲ್ಲ, ಸಾಹಿತ್ಯ ಕೃತಿಗಳ […]

Read More

ಮನೋಬಲವೇ ಮಹಾಬಲ

– ಕೊರೊನಾಗಿಂತಲೂ ಆತಂಕ, ಆಘಾತದಿಂದಲೇ ಹೆಚ್ಚುತ್ತಿದೆ ಸಾವು – ವೈರಸ್ ಎದುರಿಸಲು ಬೇಕಿರುವುದು ಬರೀ ಆಸ್ಪತ್ರೆಗಳಲ್ಲ, ಮಾನಸಿಕ ದೃಢತೆ ವಿಕ ಸುದ್ದಿಲೋಕ ಬೆಂಗಳೂರು. ರಾಜ್ಯದಲ್ಲಿ ಕೊರೊನಾಗಿಂತಲೂ ಅದರ ಕುರಿತ ಭಯವೇ ಹೆಚ್ಚು ಹೆಚ್ಚು ಸಾವಿಗೆ ಕಾರಣವಾಗುತ್ತಿದೆ. ಸಣ್ಣಗೆ ಜ್ವರ ಬಂದರೂ ಕೊರೊನಾ ಇರಬಹುದು ಎಂಬ ಭಯ, ಸ್ವಾಬ್ ಟೆಸ್ಟ್‌ನ ಫಲಿತಾಂಶದ ನಿರೀಕ್ಷೆಯಲ್ಲೇ ಹೆಚ್ಚುವ ಆತಂಕ, ಪಾಸಿಟಿವ್ ಎಂದು ಪ್ರಕಟಿಸಿದ ಬಳಿಕದ ಉದ್ವೇಗಗಳಿಂದ ರಾಜ್ಯದಲ್ಲಿ ಈಗಾಗಲೇ 20ಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. 10ರಷ್ಟು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. […]

Read More

ತಕ್ಷಣದಿಂದಲೇ ಪದವಿ ಪ್ರವೇಶ

– ಆನ್‌ಲೈನ್‌ನಲ್ಲೇ ಉಚಿತ ಅರ್ಜಿ ವಿತರಣೆ ಮಾಡಲು ಡಿಸಿಎಂ ಸೂಚನೆ – ಸೆಪ್ಟೆಂಬರ್ 1ರಿಂದಲೇ ಆನ್‌ಲೈನ್‌ ಪಾಠ | ಅಕ್ಟೋಬರ್‌ನಿಂದ ರೆಗ್ಯುಲರ್ ಕ್ಲಾಸ್? ವಿಕ ಸುದ್ದಿಲೋಕ ಬೆಂಗಳೂರು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪದವಿ ಹಾಗೂ ಇತರೆ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ತಕ್ಷಣದಿಂದಲೇ ಆರಂಭವಾಗಲಿದೆ. ಪದವಿ ಕಾಲೇಜುಗಳಲ್ಲಿ ಸೆಪ್ಟೆಂಬರ್ 1ರಿಂದಲೇ ಆನ್‌ಲೈನ್‌ ತರಗತಿ ಆರಂಭವಾಗಲಿದೆ. ಕೊರೊನಾ ನಿಯಂತ್ರಣಕ್ಕೆ ಬಂದರೆ ಅಕ್ಟೋಬರ್‌ನಲ್ಲಿ ರೆಗ್ಯುಲರ್ ತರಗತಿಗಳು ನಡೆಯಲಿವೆ. ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶುಕ್ರವಾರ […]

Read More

ಸಮಗ್ರ ಶಿಕ್ಷಣದ ಅಗತ್ಯ – ಆನ್‌ಲೈನ್‌-ಆಫ್‌ಲೈನ್‌ ಜೊತೆಗೂಡಿಸಬೇಕು

ಕೊರೊನಾ ಸೋಂಕಿನ ಆತಂಕದಿಂದ ಸ್ಥಗಿತಗೊಂಡಿರುವ ಶೈಕ್ಷಣಿಕ ರಂಗಕ್ಕೆ ಮರುಜೀವ ತುಂಬುದು ನಿಜಕ್ಕೂ ಒಂದು ಸವಾಲಿನ ಕೆಲಸ. ಈ ಬಗ್ಗೆ ‘ವಿಜಯ ಕರ್ನಾಟಕ’ ನಡೆಸಿದ ವೆಬಿನಾರ್‌ನಲ್ಲಿ ಮಹತ್ವದ ಅಭಿಪ್ರಾಯಗಳು ಹಾಗೂ ಭರವಸೆಯ ಆಶಾಕಿರಣಗಳು ಮೂಡಿಬಂದಿವೆ. ಆನ್‌ಲೈನ್‌ ಮತ್ತು ಆಫ್‌ಲೈನ್‌ ಬೆಸೆದ ಸಂಯೋಜಿತ ಶಿಕ್ಷಣ ಭವಿಷ್ಯದ ದೃಷ್ಟಿಯಿಂದಲೂ ಅನಿವಾರ್ಯವಾಗಿರುವುದರಿಂದ ಎರಡಕ್ಕೂ ಒತ್ತು ನೀಡುವ ಹೊಸ ಸಂಯೋಜನೆಯನ್ನು ರೂಪಿಸಬೇಕು ಎಂಬುದು ಈ ಕಾರ್ಯಕ್ರಮದಲ್ಲಿ ಮೂಡಿಬಂದ ಮುನ್ನೋಟ. ಆನ್‌ಲೈನ್‌ ಶಿಕ್ಷಣ ಹಳ್ಳಿ ಹಳ್ಳಿಗೆ ತಲುಪಬೇಕೆಂದರೆ, ಇನ್ನಷ್ಟು ಇಂಟರ್ನೆಟ್‌ ಕ್ರಾಂತಿ ಆಗಬೇಕಾದುದು ಅಗತ್ಯ. ಅದಕ್ಕೆ […]

Read More

ಶಿಕ್ಷಣ ಕ್ಷೇತ್ರ ಲೈನ್‌ಗೆ ಬರುವ ಭರವಸೆ

ಕೊರೊನಾ ಕಾಲದಲ್ಲಿ ಶಿಕ್ಷಣರಂಗದ ಪುನಃಶ್ಚೇತನ, ವರ್ತಮಾನ, ಭವಿಷ್ಯದ ಸವಾಲುಗಳ ಹಾಗೂ ಆನ್‌ಲೈನ್‌ ಶಿಕ್ಷಣದ ಸಾಧಕ, ಬಾಧಕಗಳ ಕುರಿತು ವಿಜಯ ಕರ್ನಾಟಕ ಆಯೋಜಿಸಿದ್ದ ವೆಬಿನಾರ್‌ನಲ್ಲಿ ಸರಕಾರದ ಇಬ್ಬರು ಸಚಿವರು, ಶೈಕ್ಷಣಿಕ ತಜ್ಞರು, ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿ ಸುಮಾರು ಎರಡೂ ಕಾಲು ಗಂಟೆ ಸಮಾಲೋಚಿಸಿದರು. ಸರಕಾರ, ಶಿಕ್ಷಣ ಸಂಸ್ಥೆಗಳು, ಪಾಲಕರು ನಿರ್ವಹಿಸಬೇಕಾದ ಪಾತ್ರ, ವಿದ್ಯಾರ್ಥಿಗಳ ಭವಿಷ್ಯದ ಚಿಂತನ ಮಂಥನ ನಡೆಯಿತು. ಆನ್‌ಲೈನ್‌ ಶಿಕ್ಷಣದ ಸಾರ್ವತ್ರೀಕರಣಕ್ಕೆ ಎದುರಾಗಿರುವ ಸವಾಲು ಮತ್ತು ಅದನ್ನು ಎದುರಿಸುವ ಬಗೆ, ಶಾಲೆ, ಕಾಲೇಜು ಆರಂಭದ ಗೊಂದಲ, ಸಿಇಟಿ, […]

Read More

ಉಪನ್ಯಾಸಕರ ನೇಮಕ ನಿರಾಳ – ಸಿಎಂ ಅಸ್ತು | 2 ದಿನದಲ್ಲಿ ಕೌನ್ಸೆಲಿಂಗ್ ದಿನಾಂಕ ಪ್ರಕಟ

ವಿಕ ಸುದ್ದಿಲೋಕ ಬೆಂಗಳೂರು: ನೂತನವಾಗಿ ಆಯ್ಕೆಯಾಗಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಕೌನ್ಸೆಲಿಂಗ್ ನಡೆಸಲು ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಅನುಮೋದನೆ ನೀಡಿದ್ದಾರೆ. ಈ ಸಂಬಂಧ ಇನ್ನು ಎರಡು ದಿನದ ಒಳಗೆ ಕೌನ್ಸೆಲಿಂಗ್ ದಿನಾಂಕ ಘೋಷಿಸಲಾಗುತ್ತದೆ ಎಂದು ಸಿಎಂ ಅವರ ಕಚೇರಿ ಮೂಲಗಳು ಖಚಿತ ಪಡಿಸಿವೆ. ಉಪನ್ಯಾಸಕರ ಸ್ಥಳ ನಿಯುಕ್ತಿಗಾಗಿ ಕೌನ್ಸೆಲಿಂಗ್ ನಡೆಸಲು ಆರ್ಥಿಕ ಇಲಾಖೆಧಿಯಿಂದಲೂ ಹಸಿರು ನಿಶಾನೆ ದೊರೆತಿದೆ. ಇದರೊಂದಿಗೆ ಉಪನ್ಯಾಸಕರ ಹುದ್ದೆ ಭರ್ತಿಗೆ ಹಿಡಿದಿದ್ದ ಗ್ರಹಣ ಸರಿಯುವ ಕಾಲ ಸನ್ನಿಹಿತವಾಗಿದೆ. ಇದರೊಂದಿಗೆ […]

Read More

ಕೊರೊನಾ ನಡುವೆ ಶಿಕ್ಷಕರ ಸ್ಫೂರ್ತಿಯ ಸೆಲೆ

ಕೊರೊನಾ ವಿರುದ್ಧದ ಹೋರಾಟದಲ್ಲಿ ಅನೇಕರು ಯೋಧರಂತೆ ಕೆಲಸ ಮಾಡುತ್ತಿದ್ದಾರೆ. ಅಂಥವರಲ್ಲಿ ವೈದ್ಯರು, ದಾದಿಯರು, ಪೊಲೀಸರು, ಪೌರಕಾರ್ಮಿಕರು ಹಾಗೂ ಶಿಕ್ಷಕರು ಮುಂಚೂಣಿಯಲ್ಲಿದ್ದಾರೆ. ಕೊರೊನಾ ಯೋಧರ ಸಾಲಿನಲ್ಲಿ ಬರುವ ಶಿಕ್ಷಕರು ಜೀವದ ಹಂಗು ತೊರೆದು ಹೇಗೆ ಕೆಲಸ ಮಾಡುತ್ತಿದ್ದಾರೆ? ಪ್ರತಿಕೂಲ ಪರಿಸ್ಥಿತಿಯಲ್ಲೂ ಹೇಗೆ ಕೆಲಸ ನಿರ್ವಹಿಸುತ್ತಿದ್ದಾರೆ? ಶಿಕ್ಷಕರ ಸ್ಫೂರ್ತಿದಾಯಕ ಮಾತುಗಳು ಇಲ್ಲಿವೆ. ಜಾಗೃತಿ ಮೂಡಿಸಿದ ‘ಉಷಾ’ ಲಾಕ್‌ಡೌನ್‌ ಸಮಯದಲ್ಲೂ ತಮ್ಮದೇ ಆದ ಸುರಕ್ಷಾ ಮಾರ್ಗಗಳ ಮೂಲಕ ಶಾಲೆಯ ಮಕ್ಕಳು ಆಟ ಪಾಠ ಕಲಿಕೆಯಿಂದ ವಂಚಿತರಾಗದಂತೆ ನೋಡಿಕೊಂಡಿದ್ದಾರೆ. ಕೊರೊನಾ ಕುರಿತು ಮಕ್ಕಳು […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top