ಏಷ್ಯಾದ ‘ದೊಡ್ಡಣ್ಣ’ನಾಗುವ ಚಪಲಕ್ಕೆ ಬಿದ್ದಿರುವ ಚೀನಾ, ಭಾರತದ ಜೊತೆಗೆ ಗಡಿ ವಿಷಯದಲ್ಲಿ ಸದಾ ಜಗಳ ತೆಗೆಯುವ ತನ್ನ ಚಾಳಿಯನ್ನು ಮುಂದುವರೆಸಿದೆ. ಇಡೀ ಜಗತ್ತೇ ಕೊರೊನಾದಿಂದ ತತ್ತರಿಸಿರುವ ಹೊತ್ತಿನಲ್ಲಿ ಚೀನಾ ಮಾತ್ರ ಭಾರತದ ಜೊತೆಗೆ ಗಡಿ ಕ್ಯಾತೆಗೆ ಮುಂದಾಗಿದೆ ಎಂದರೆ ಆ ದೇಶದ ಅಂತರಾಳದ ಉದ್ದೇಶ ಎಲ್ಲರಿಗೂ ಅರ್ಥವಾಗುವಂಥದ್ದೇನೆ. ಕೊರೊನಾ ವೈರಸ್ ಚೀನ ನಿರ್ಮಿತ ಎಂಬುದು ಅಮೆರಿಕ ಆದಿಯಾಗಿ ಹಲವು ರಾಷ್ಟ್ರಗಳ ಅನುಮಾನ. ಕೊರೊನಾ ವೈರಸ್ಸಿಗೆ ಸಂಬಂಧಿಸಿದ ಮಾಹಿತಿಯನ್ನು ಆ ದೇಶ ಮುಚ್ಚಿಟ್ಟಿದ್ದು ಅನುಮಾನಕ್ಕೆ ಇಂಬು ನೀಡುವಂತಿದೆ. ಆ […]
Read More
– ಉಭಯ ಸೇನಾ ನಿಯೋಜನೆ ಹೆಚ್ಚಳ | ಪ್ರಧಾನಿ, ಗೃಹ ಸಚಿವರ ತುರ್ತು ಸಭೆ – ಆಕ್ರಮಣಕಾರಿ ನಡೆಗೆ ಭಾರತ ತಿರುಗೇಟು | ಸೇನೆ ಹಿಂಪಡೆಯದಿರಲು ನಿರ್ಧಾರ ಹೊಸದಿಲ್ಲಿ: ವಿಶ್ವಾದ್ಯಂತ ಕೊರೊನಾ ಮರಣಮೃದಂಗದ ನಡುವೆಯೇ ಭಾರತ-ಚೀನಾ ಗಡಿ ಬಿಕ್ಕಟ್ಟು ಉಲ್ಬಣಗೊಂಡಿದೆ. ಉಭಯ ದೇಶಗಳೂ ಲಡಾಖ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಸೇನೆ ನಿಯೋಜನೆ ಹೆಚ್ಚಿಸುವುದರೊಂದಿಗೆ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗಿದೆ. ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಸೇನಾ ಮುಖಂಡರೊಂದಿಗೆ ಪ್ರತ್ಯೇಕ ತುರ್ತು ಸಭೆಗಳನ್ನು ನಡೆಸಿರುವುದು ಪರಿಸ್ಥಿತಿಯ […]
Read More
ವಿಕ ಸುದ್ದಿಲೋಕ ಬೆಂಗಳೂರು: ಸುಮಾರು ಎರಡು ತಿಂಗಳ ಬಳಿಕ ರಾಜ್ಯಾದ್ಯಂತ ಜೂನ್ 1ರಿಂದ ದೇವಸ್ಥಾನಗಳು, ಹೋಟೆಲ್ಗಳು ಪುನರಾರಂಭಗೊಳ್ಳಲಿವೆ. ಮಾಲ್ಗಳೂ ತೆರೆಯುವ ನಿರೀಕ್ಷೆ ಇದೆ. ಕೊರೊನಾ ಸುರಕ್ಷತಾ ವ್ಯವಸ್ಥೆಯೊಂದಿಗೆ, ಸಾಮಾಜಿಕ ಅಂತರದ ಎಚ್ಚರ ಕಾಪಾಡಿಕೊಂಡು ಧಾರ್ಮಿಕ ದತ್ತಿ ಇಲಾಖೆಯ ಎಲ್ಲ ಮಂದಿರಗಳಲ್ಲಿ ಭಕ್ತರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಂಗಳವಾರ ತಿಳಿಸಿದ್ದಾರೆ. ಇದರ ಜತೆಗೆ, ಈ ಹಿಂದೆ ಘೋಷಿಸಿದಂತೆ 52 ದೇವಸ್ಥಾನಗಳಲ್ಲಿ ಆನ್ಲೈನ್ ಸೇವೆ ಮುಂದುವರಿಯಲಿದೆ ಎಂದವರು ಹೇಳಿದ್ದಾರೆ. ಸಿಎಂ ಯಡಿಯೂರಪ್ಪ ಈ […]
Read More
– ಸೋಂಕು, ಸಾವಿಗೆ ಅಂಕುಶ | ಕೇಂದ್ರದಿಂದ ಶ್ಲಾಘನೆ ಹೊಸದಿಲ್ಲಿ: ಕೊರೊನಾ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡ ದೇಶದ ನಾಲ್ಕು ಉತ್ತಮ ನಗರಗಳನ್ನು ಕೇಂದ್ರ ಸರಕಾರ ಆಯ್ಕೆ ಮಾಡಿದ್ದು, ಅದರಲ್ಲಿ ಬೆಂಗಳೂರು ಸಹ ಸೇರಿದೆ. ತಮಿಳುನಾಡಿನ ಚೆನ್ನೈ, ರಾಜಸ್ಥಾನದ ಜೈಪುರ ಮತ್ತು ಮಧ್ಯಪ್ರದೇಶದ ಇಂದೋರ್ ಇತರ ಮೂರು ನಗರಗಳು. ಈ ನಗರಗಳಲ್ಲಿ ಮರಣ ಪ್ರಮಾಣ ಕಡಿಮೆ ಇದೆ. ಅದರಲ್ಲಿಯೂ ಬೆಂಗಳೂರು ಮತ್ತು ಚೆನ್ನೈ ವೆಂಟಿಲೇಟರ್ಗಳನ್ನು ಗರಿಷ್ಠ ಸಂಖ್ಯೆಯಲ್ಲಿ ಬಳಸಿಕೊಂಡು ಸಾವಿನ ಪ್ರಮಾಣ ತಗ್ಗಿಸಿವೆ. ಜತೆಗೆ ಸೋಂಕಿತರ ಪತ್ತೆ, […]
Read More
– ಸದ್ಗುರು ಶ್ರೀ ಜಗ್ಗೀ ವಾಸುದೇವ. ಕೊರೊನಾ ವೈರಸ್ ಪರಿಸ್ಥಿತಿಯಿಂದ ಖಚಿತವಾಗಿ ಯಾವಾಗ ಹೊರಬರುತ್ತೇವೆಂದು ಹೇಳಲು ದುರದೃಷ್ಟವಷಾತ್ ನಮಗಿನ್ನೂ ಸಾಧ್ಯವಾಗಿಲ್ಲ. ಕೈಗಾರಿಕೆ ಮತ್ತು ವ್ಯಾಪಾರಗಳ ದೃಷ್ಟಿಯಲ್ಲಿ ನೋಡುವುದಾದರೆ, ಅದು ನಮ್ಮನ್ನು ಒಂದು ಸಂದಿಗ್ಧ ಸ್ಥಿತಿಗೆ ತಲುಪಿಸಿದೆ. ಜನರು, ಸಂಸ್ಥೆಗಳು, ಸಣ್ಣ ಮತ್ತು ದೊಡ್ಡ ವ್ಯಾಪಾರಗಳಿಗೆ ಹೊಡೆತ ಬಿದ್ದಿರುವುದರಲ್ಲಿ ಸಂಶಯವಿಲ್ಲ ಮತ್ತು ಹತ್ತಿರದ ಭವಿಷ್ಯದಲ್ಲಿ, ಅತೀವ ಸಂಕಟಗಳು ಕಾದಿವೆ. ಅನೇಕ ವ್ಯಾಪಾರೋದ್ಯಮಗಳು ಮತ್ತೊಮ್ಮೆ ಮೊದಲಿನಿಂದ ಪ್ರಾರಂಭಿಸಬೇಕು. ಅವು ಹೇಗೆ ಕಾರ್ಯಾಚರಿಸಬೇಕು ಎನ್ನುವುದನ್ನು ಮರುಪರಿಶೀಲಿಸಬೇಕಾಗಿದೆ. ಮೊದಲು ಹೇಗೆ ಕೆಲಸ ಮಾಡುತ್ತಿದ್ದವೋ […]
Read More
ಭಾರತದ ಮೂರು ರಾಜ್ಯಗಳಲ್ಲಿ ಮಿಡತೆಗಳ ದಾಳಿ ಭಾರಿ ಹಾವಳಿ ಎಬ್ಬಿಸಿದೆ. ಚಂಡಮಾರುತದಂತೆ ಬೀಸಿ ಬರುವ ಮಿಡತೆಗಳು ಕ್ಷಣಾರ್ಧದಲ್ಲಿ ಬೆಳೆದು ನಿಂತ ಬೆಳೆಯನ್ನು ಖಾಲಿ ಮಾಡುತ್ತಿವೆ. ಇವು ಎಲ್ಲಿಂದ ಬಂದವು? ಇವುಗಳಿಂದ ಏನು ನಷ್ಟ? ಒಂದು ಚಿತ್ರಣ ಇಲ್ಲಿದೆ. ರಾಜಸ್ಥಾನದಲ್ಲಿ ಮಿಡತೆಗಳು ಬಿರುಗಾಳಿಯಂತೆ ದಾಳಿ ಮಾಡಿವೆ. ಈ ಬಾರಿ ಗ್ರಾಮೀಣ ಪ್ರದೇಶದ ಹೊಲಗಳನ್ನೆಲ್ಲ ಮುಕ್ಕಿ ಮುಗಿಸಿ, ರಾಜಧಾನಿ ಜೈಪುರಕ್ಕೂ ದಾಳಿ ಮಾಡಿದ್ದು, ವಸತಿ ಪ್ರದೇಶಗಳಲ್ಲಿ ದೂಳಿನ ಮೋಡಗಳಂತೆ ಗುಂಪಾಗಿ ನೆರೆದಿರುವ ಚಿತ್ರಗಳು, ವಿಡಿಯೋಗಳನ್ನು ಅಲ್ಲಿನ ನಿವಾಸಿಗಳು ಹಂಚಿಕೊಳ್ಳುತ್ತಿದ್ದಾರೆ. ಅಕ್ಕಪಕ್ಕದ […]
Read More
ದಾವಣಗೆರೆಯಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇಶದಲ್ಲಿ ಅಲ್ಲಲ್ಲಿ ಹೀಗೆ ಕ್ವಾರಂಟೈನ್ನಲ್ಲಿರುವ ಕೆಲವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು ವಿರಳವಾಗಿಯಾದರೂ ವರದಿಯಾಗಿವೆ. ಕ್ವಾರಂಟೈನ್ನಲ್ಲಿದ್ದವರು ಓಡಿಹೋದ ಪ್ರಕರಣಗಳು ಸಾಕಷ್ಟಿವೆ. ಇನ್ನು ಹಲವರು ಅಂತಾರಾಜ್ಯ ವಿಮಾನ ಪ್ರಯಾಣ ಮಾಡಬೇಕಿದ್ದವರು, ತಾವು ತಲುಪಿದ ರಾಜ್ಯದಲ್ಲಿ ಕಡ್ಡಾಯ ಕ್ವಾರಂಟೈನ್ಗೆ ಒಳಗಾಗಬೇಕು ಎಂಬ ಶರತ್ತಿಗೆ ಒಪ್ಪದೆ ಹಾಗೇ ಮರಳಿದ ಘಟನೆಯೂ ನಡೆದಿದೆ. ಈ ಆತ್ಮಹತ್ಯೆಗಳು, ತಮಗೆ ಕೋವಿಡ್ ಇರಬಹುದು ಎಂಬ ಆತಂಕದಿಂದ ನಡೆದಿವೆ ಎಂದಾದರೆ ಇವರು ಅಜ್ಞಾನಕ್ಕೆ ಬಲಿಯಾಗಿದ್ದಾರೆ ಎಂದೇ ಹೇಳಬೇಕಾಗುತ್ತದೆ. […]
Read More
ಕಳೆದ ಶತಮಾನದ ಕೊನೆಯಲ್ಲಿ, ಸುಮಾರು ಐವತ್ತು ವರ್ಷಗಳ ಕಾಲ ಜಗತ್ತು ಅಮೆರಿಕ- ಸೋವಿಯತ್ ರಷ್ಯದ ಶೀತಲ ಸಮರದಿಂದ ಬಳಲಿತ್ತು. ಈಗ ಮತ್ತೊಮ್ಮೆ ಚೀನಾ ಹಾಗೂ ಅಮೆರಿಕದ ನಡುವೆ ತಿಕ್ಕಾಟ ಉಲ್ಬಣಕ್ಕೆ ಹೋಗುತ್ತಿದ್ದು, ಇನ್ನೊಂದು ಶೀತಲ ಸಮರ ಆರಂಭವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಶೀತಲ ಸಮರ ಅಂದರೇನು? ಇಪ್ಪತ್ತನೇ ಶತಮಾನದ ಉತ್ತರಾರ್ಧದಲ್ಲಿ, ಅಂದರೆ ಸುಮಾರು 1947ರಲ್ಲಿ ಎರಡನೇ ಮಹಾಯುದ್ಧ ನಿಂತ ಬಳಿಕ, ಅಮೆರಿಕ ಹಾಗೂ ಸೋವಿಯತ್ ರಷ್ಯಗಳ ನಡುವೆ ರಾಜಕೀಯ- ಆರ್ಥಿಕ ತಿಕ್ಕಾಟ ಆರಂಭವಾಯಿತು. ಮಹಾಯುದ್ಧದ ವೇಳೆ […]
Read More
– ತರುಣ್ ವಿಜಯ್. ಈ ಅಂಕಣವನ್ನು ಬರೆಯುತ್ತಿರುವಾಗ ನನ್ನ ಕಂಗಳಲ್ಲಿ ನೀರು ತುಂಬಿಕೊಳ್ಳುತ್ತಿದೆ. ಬರೆಯುವುದಕ್ಕೆ ಕಾಣುತ್ತಿಲ್ಲ ಹಾಗೂ ಕೈ ಚಲಿಸುತ್ತಿಲ್ಲ. ಒಬ್ಬಳು ವಲಸೆ ಕಾರ್ಮಿಕಳ ಚಿತ್ರ ನನ್ನ ಕಣ್ಣಿನಲ್ಲಿದೆ. ಈಕೆ ತುಂಬು ಗರ್ಭಿಣಿ, ಲಾಕ್ಡೌನ್ ಪರಿಣಾಮ ಉಂಟಾದ ಕೋಲಾಹಲದಲ್ಲಿ ತನ್ನ ಹಳ್ಳಿಗೆ ಮರಳುತ್ತಿದ್ದಳು. ದಾರಿಯಲ್ಲೇ ಹೆರಿಗೆಯಾಯಿತು. ನವಜಾತ ಶಿಶುವಿನ ರಕ್ತವು ಆಕೆಯ ಕಣ್ಣೀರಿನಲ್ಲಿ ಮರೆಯಾಗಿದ್ದಿರಬೇಕು. ಆಕೆ ಕಣ್ಣೀರಿಡುತ್ತಲೇ ತನ್ನ ನೂರ ಅರುವತ್ತು ಕಿಲೋಮೀಟರ್ ಪ್ರಯಾಣವನ್ನು ನಡೆದು ಪೂರೈಸಿದಳು. ನಾನು ನೋಡಿದ ಇನ್ನೊಂದು ಚಿತ್ರ ಎಂದರೆ ಎತ್ತಿನ ಬಂಡಿ […]
Read More
ರಾ.ನಂ. ಚಂದ್ರಶೇಖರ್. ಹೊರ ರಾಜ್ಯಗಳಿಂದ ಬಂದಿದ್ದ ವಲಸೆ ಕಾರ್ಮಿಕರು ಭಾರೀ ಸಂಖ್ಯೆಯಲ್ಲಿ ತಮ್ಮ ಊರುಗಳಿಗೆ ಮರಳಿದ್ದಾರೆ. ಕಾರ್ಖಾನೆಗಳು, ಕಟ್ಟಡ ನಿರ್ಮಾಣ, ಗ್ರಾನೈಟ್ ಉದ್ಯಮ ಸೇರಿ ನಿರ್ಮಾಣ ಕಾರ್ಯಗಳಲ್ಲಿ ಇವರ ಪಾಲು ದೊಡ್ಡದಾಗಿತ್ತು. ಜೊತೆಗೆ ಸೆಕ್ಯುರಿಟಿ, ಹೋಟೆಲ್, ಮಾಲ್ಗಳು ಸೇರಿದಂತೆ ಹಲವು ಕ್ಷೇತ್ರಗಳಿಗೂ ವ್ಯಾಪಿಸಿದ್ದರು. ಸಹಜವಾಗಿ ಈ ಎಲ್ಲ ಕ್ಷೇತ್ರಗಳಲ್ಲಿ ಕಾರ್ಮಿಕರ ಕೊರತೆ ಕಾಡಲಿದೆ. ಇಂತಹ ಪರಿಸ್ಥಿತಿ ಉದ್ಭವಿಸಿರುವುದು ಇದೇ ಮೊದಲಲ್ಲ. ಈ ಪರಿಸ್ಥಿತಿಯನ್ನು ರಾಜ್ಯ ಸರಕಾರ ಮತ್ತು ಕನ್ನಡಿಗರು ಸರಿಯಾಗಿ ಬಳಸಿಕೊಂಡರೆ ವರದಾನವಾಗಲಿದೆ. 1991ರಲ್ಲಿ ಪ್ರಕಟವಾದ ಕಾವೇರಿ […]
Read More