ಕನ್ನಡ ಮಾಧ್ಯಮ ಶಾಲೆ ಬಲಗೊಳಿಸಲು ಇದು ಸಕಾಲ

– ಮಾತೃಭಾಷೆಯೇ ಬೋಧನಾ ಮಾಧ್ಯಮ ಎಂಬ ಆಂಧ್ರ ಹೈಕೋರ್ಟ್ ತೀರ್ಪು ಕಣ್ಣು ತೆರೆಸಲಿ -ನಿರಂಜನಾರಾಧ್ಯ ವಿ.ಪಿ. ಆಂಧ್ರಪ್ರದೇಶ ಸರಕಾರವು ತನ್ನ ರಾಜ್ಯದಲ್ಲಿನ ಎಲ್ಲಾ ಮಾತೃಭಾಷಾ ಮಾಧ್ಯಮದ ಶಾಲೆಗಳನ್ನು ಆಂಗ್ಲಭಾಷೆಯ ಬೋಧನಾ ಮಾಧ್ಯಮದ ಶಾಲೆಗಳನ್ನಾಗಿ ಪರಿವರ್ತಿಸುವ ಮಹತ್ವದ ಎರಡು ಸರಕಾರಿ ಆದೇಶಗಳನ್ನು ಆಂಧ್ರಪ್ರದೇಶದ ಹೈಕೋರ್ಟ್ ರದ್ದುಪಡಿಸಿ, ಏಪ್ರಿಲ್ 15ರಂದು ಐತಿಹಾಸಿಕ ತೀರ್ಪು ನೀಡಿದೆ. ವಿಪುಲವಾಗಿ ಲಭ್ಯವಿರುವ ಐತಿಹಾಸಿಕ ಪುರಾವೆ, ಸಂಶೋಧನೆ ಹಾಗೂ ಕಾನೂನಿನ ಅಂಶಗಳನ್ನು ಕಡೆಗಣಿಸಿ, ಕೇವಲ ಮತ ಬ್ಯಾಂಕ್ ರಾಜಕಾರಣಕ್ಕಾಗಿ ಮನಬಂದಂತೆ ನೀತಿಗಳನ್ನು ರೂಪಿಸುವ ಸರಕಾರಗಳಿಗೆ ಈ […]

Read More

ಸಮರ್ಪಕ ಜಾರಿ ಅಗತ್ಯ – ಹಲ್ಲೆ ತಪ್ಪಿಸಲು ಕೇಂದ್ರ, ರಾಜ್ಯದಿಂದ ಸುಗ್ರೀವಾಜ್ಞೆ

ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಪೊಲೀಸರು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ತೊಡಗಿಸಿಕೊಂಡಿದ್ದಾರೆ. ಆದರೆ, ಕರ್ನಾಟಕವೂ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ಈ ‘ಕೊರೊನಾ ವಾರಿಯರ್ಸ್’ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿವೆ. ಆದರೆ, ಇಂಥ ಸಂದರ್ಭವನ್ನು ಎದುರಿಸುವ ಸಮರ್ಪಕ ಕಾನೂನು ಬಲ ನಮ್ಮ ಸರಕಾರಗಳಿಗೆ ಇರಲಿಲ್ಲ. ಆ ಕೊರತೆಯನ್ನು ಕೇಂದ್ರ ಮತ್ತು ಕರ್ನಾಟಕ ಸರಕಾರಗಳು ಸುಗ್ರೀವಾಜ್ಞೆಗಳ ಮೂಲಕ ತುಂಬಿಕೊಳ್ಳುತ್ತಿವೆ. ಕೊರೊನಾ ಸೇನಾನಿಗಳ ಮೇಲೆ ಹಲ್ಲೆ ಮಾಡುವವರನ್ನು ಹೆಡೆಮುರಿ […]

Read More

ಕಡಿಮೆಯಾಗುತ್ತಿದೆ ಸೋಂಕು ಆದರೆ, ಹೆಚ್ಚಾಗುತ್ತಿದೆ ಸಾವಿನ ಪ್ರಮಾಣ

ಕೊರೊನಾ ವೈರಸ್(ಕೋವಿಡ್ 19) ಸೃಷ್ಟಿಸಿರುವ ತಲ್ಲಣಕ್ಕೆ ಇಡೀ ಜಗತ್ತೇ ಸ್ತಬ್ಧವಾಗಿದೆ. ಚೀನಾ, ಅಮೆರಿಕ, ಇಟಲಿ, ಜರ್ಮನಿ ಹಾಗೂ ಸ್ಪೇನ್‌ನಂಥ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಕೋವಿಡ್ 19 ಎದುರಿಸಲಾಗಿದೇ ಮಕಾಡೆ ಮಲಗಿವೆ. ಈ ದೇಶಗಳಲ್ಲಿ ಸೋಂಕಿಗೆ ಒಳಗಾಗುವವರು ಮತ್ತು ಸೋಂಕಿನಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ಲಕ್ಷ ಮತ್ತು ಸಾವಿರ ಲೆಕ್ಕದಲ್ಲಿದೆ. ಆದರೆ, ಅಭಿವೃದ್ಧಿಶೀಲ ರಾಷ್ಟ್ರವಾದ ಭಾರತದಲ್ಲಿ ಈ ಕೊರೊನಾ ಉಪಟಳವನ್ನು ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಗ್ಗೂಡಿ ಹೋರಾಡುತ್ತಿದ್ದು, ಅದರ ಫಲ ಈಗ ನಿಚ್ಚಳವಾಗುತ್ತಿದೆ. ಲಾಕ್‌ಡೌನ್‌ ಹೆಚ್ಚು ಪರಿಣಾಮಕಾರಿಯಾಗುತ್ತಿದೆ […]

Read More

ಸಾಮೂಹಿಕ ಥಳಿತ, ಹತ್ಯೆ ನಿಲ್ಲಲಿ – ಪಾಲ್ಘರ್ ಘಟನೆಯ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಡಚಿಂಚಲೆಯಲ್ಲಿ ಇಬ್ಬರು ಸಾಧುಗಳು ಮತ್ತು ಅವರ ಕಾರು ಚಾಲಕನನ್ನು ಸಾಮೂಹಿಕವಾಗಿ ಥಳಿಸಿ, ಭೀಕರವಾಗಿ ಕೊಲೆ ಮಾಡಿದ ಘಟನೆ ಮತ್ತೆ ಸದ್ದು ಮಾಡುತ್ತಿದೆ. ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈ ಘಟನೆ ಸಂಬಂಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿ, ಉನ್ನತ ತನಿಖೆಗೆ ಆದೇಶಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಕ್ಕೂ ಹೆಚ್ಚು ಜನರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಆದರೆ, ಮಹಾರಾಷ್ಟ್ರದಲ್ಲಿ […]

Read More

ಆರ್ಥಿಕ ಪುನಶ್ಚೇತನಕ್ಕೆ ಇದು ಸರಿಯಾದ ಕಾಲ

– ಕಿರಣ್‌ಕುಮಾರ್ ಡಿ.ಕೆ. ಹದಗೆಟ್ಟ ಅರ್ಥವ್ಯವಸ್ಥೆಯನ್ನು ಹಿಡಿತಕ್ಕೆ ತೆಗೆದುಕೊಳ್ಳುವಲ್ಲಿ ಹರಸಾಹಸಪಡುತ್ತಿದ್ದ ಕೇಂದ್ರ ಸರಕಾರಕ್ಕೆ ಮತ್ತೆ ಪುಟಿದೇಳಲು ಕೊರೊನಾ ಲಾಕ್‌ಡೌನ್ ಅವಕಾಶ ನೀಡಿದೆ! ಕೊರೊನಾ ವೈರಸ್ ನಿಯಂತ್ರಣ ಹಾಗೂ ಆರ್ಥಿಕ ಪುನಶ್ಚೇತನ ಈ ಎರಡೂ ಸವಾಲುಗಳನ್ನು ಮೆಟ್ಟಿನಿಲ್ಲುವುದು ಸುಲಭವಲ್ಲವಾದರೂ ದೇಶಾದ್ಯಂತ ಸೋಂಕಿನ ಪ್ರಮಾಣ ಸಂಪೂರ್ಣ ನಿಯಂತ್ರಣಕ್ಕೆ ಬರುವ ಮೊದಲೇ ಆರ್ಥಿಕತೆಗೆ ಚೇತರಿಕೆ ನೀಡುವತ್ತ ಗಂಭೀರವಾಗಿ ಹೆಜ್ಜೆ ಇರಿಸಲು ಕೇಂದ್ರ ಸರಕಾರ ಮುಂದಡಿ ಇಡಲಾರಂಭಿಸಿದೆ. ದೇಶಾದ್ಯಂತ ಉತ್ಪಾದಕತೆಗೇ ಬ್ರೇಕ್ ಬಿದ್ದಿದೆ. ಹಣಕಾಸಿನ ಹರಿವು ಸಂಪೂರ್ಣ ಸ್ತಬ್ಧ ಎನ್ನುವಂತಾಗಿದೆ. ಹೀಗಿರುವಾಗ ಕೊರೊನಾ […]

Read More

ಸಂಘಟಿತ ಅಪರಾಧ ಸೂಚನೆ – ಸಾಮೂಹಿಕ ಹೊಣೆಗಾರಿಕೆಯೇ ಪರಿಹಾರ

ಕೊರೊನಾ ವೈರಸ್ ಹರಡುವಿಕೆ ಕಾರಣದಿಂದಾಗಿ ಇಡೀ ದೇಶವೇ ತುರ್ತು ಸ್ಥಿತಿಗೆ ಸಿಲುಕಿದೆ. ಈ ಸಂಕಟದ ಸಮಯದಲ್ಲಿ ಜಾತಿ, ಧರ್ಮ, ನಂಬಿಕೆಗಳು ಮೇಲುಗೈ ಸಾಧಿಸಬಾರದು. ಮಂದಿರ, ಮಸೀದಿ, ಚರ್ಚುಗಳ ಚಟುವಟಿಕೆಗಳು ಸ್ತಬ್ಧವಾಗಿ, ಧಾರ್ಮಿಕ ಆಚರಣೆಗಳೆಲ್ಲ ಹೊಸ್ತಿಲೊಳಗೆ ಸೀಮಿತವಾಗಿವೆ. ಕೊರೊನಾ ಸೇನಾನಿಗಳು ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಇದು ಇಡೀ ಭಾರತ ಕೊರೊನಾ ಮಹಾಮಾರಿ ವಿರುದ್ಧ ತೋರುತ್ತಿರುವ ಒಗ್ಗಟ್ಟಿನ ಝಲಕ್. ಆದರೆ, ಭಾನುವಾರ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಘಟನೆ ಒಗ್ಗಟ್ಟಿನ ಹೋರಾಟಕ್ಕೆ ಭಂಗ ತರಲು ಕಾರಣವಾಗಿದೆ. […]

Read More

ಕ್ವಾರಂಟೈನ್‌ ಒಪ್ಪದೆ ದಾಂಧಲೆ- ಪಾದರಾಯನಪುರದಲ್ಲಿ ಪೊಲೀಸ್‌ ಕ್ಯಾಂಪ್‌, ಅಧಿಕಾರಿಗಳ ಮೇಲೆ ಕಿಡಿಗೇಡಿಗಳ ದಾಳಿ

– ಬ್ಯಾರಿಕೇಡ್‌ ಕಿತ್ತೆಸೆದು ಅಟ್ಟಹಾಸ ಮೆರೆದ 200 ಜನರ ತಂಡ, ಸೋಂಕು ತಡೆಗೆ ಅಸಹಕಾರ ಬೆಂಗಳೂರು: ಸೀಲ್‌ಡೌನ್‌ ಆದ ಬೆಂಗಳೂರಿನ ಪಾದರಾಯನಪುರ ವಾರ್ಡ್‌ನಲ್ಲಿ ನೂರಾರು ಕಿಡಿಗೇಡಿಗಳು ಬ್ಯಾರಿಕೇಡ್‌ ಹಾಗೂ ಕಬ್ಬಿಣದ ತಗಡುಗಳನ್ನು ಕಿತ್ತೆಸೆದು ದಾಂಧಲೆ ನಡೆಸಿದ್ದಾರೆ. ಕೊರೊನಾ ಸೋಂಕಿತರ ದ್ವಿತೀಯ ಸಂಪರ್ಕದಲ್ಲಿದ್ದ 58 ಶಂಕಿತರನ್ನು ಕ್ವಾರಂಟೈನ್‌ನಲ್ಲಿಡಲು ಬಿಬಿಎಂಪಿ ಹಾಗೂ ಆರೋಗ್ಯಾಧಿಕಾರಿಗಳು ಭಾನುವಾರ ಸ್ಥಳಕ್ಕೆ ತೆರಳಿದ ವೇಳೆ ಉದ್ರಿಕ್ತ ಗುಂಪು ಪೊಲೀಸರಿಗೇ ಸವಾಲು ಹಾಕಿ ಅಟ್ಟಹಾಸ ಮಾಡಿದೆ. ಈಗಾಗಲೇ ವಾರ್ಡ್‌ನಲ್ಲಿ11 ಮಂದಿ ಕೋವಿಡ್‌-19 ಸೋಂಕಿತರಿದ್ದು, ಅವರೊಂದಿಗೆ ದ್ವಿತೀಯ ಸಂಪರ್ಕದಲ್ಲಿದ್ದ […]

Read More

ಕೋವಿಡ್‌ ಎದುರಿಸಲು ಬೇಕು ಬಲವಾದ ಕಾನೂನು – ಅರುಣ್‌ ಶಾಮ್‌

ಚೀನಾ ವೈರಸ್ ಎಂದೇ ಕರೆಸಿಕೊಳ್ಳುವ ಕೋವಿಡ್-19 ಜಗತ್ತಿನಾದ್ಯಂತ ವ್ಯಾಪಿಸುತ್ತಿದೆ. ಹಿಂದೆಂದೂ ಕಂಡರಿಯದ ಸಾವು-ನೋವು, ಕಷ್ಟ-ನಷ್ಟ ಎದುರಾಗಿದೆ. ಪರಿಸ್ಥಿತಿಯನ್ನು ನಿಭಾಯಿಸುವುದು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಜಗತ್ತಿನ ಎಲ್ಲಾ ವೈದ್ಯಕೀಯ ಹಾಗೂ ವೈರಾಣು ತಜ್ಞರು, ವಿಜ್ಞಾನಿಗಳು ಬಹಳಷ್ಟು ತಲೆಕೆಡಿಸಿಕೊಂಡು ಈ ಸಮಸ್ಯೆಯ ಪರಿಹಾರಕ್ಕೆ ಮಾರ್ಗೋಪಾಯ ಕಂಡುಹಿಡಿಯುವಲ್ಲಿ ನಿರತರಾಗಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯನ್ನು ಸವಾಲಾಗಿ ಸ್ವೀಕರಿಸಿ ನಿರೀಕ್ಷೆಗೂ ಮೀರಿ ಎದುರಿಸುತ್ತಿರುವ ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. ಸಕಾಲಿಕ ಹಾಗೂ ಸಮರ್ಪಕ ನಿರ್ಧಾರಗಳನ್ನು […]

Read More

ವೈರಸ್ ಮಾನವ ಸೃಷ್ಟಿ? ಚೀನಾ ಸೃಷ್ಟಿಸಿದ ಆತಂಕಕ್ಕೆ ಜಗತ್ತೇ ತತ್ತರ

ಇಡೀ ವಿಶ್ವವೇ ತತ್ತರಿಸಿಹೋಗುವಂತೆ ಮಾಡಿರುವ ಕೊರೊನಾ ವೈರಸ್ ಪ್ರಾಕೃತಿಕವಾದುದ್ದಲ್ಲ, ಅದು ಮಾನವ ಸೃಷ್ಟಿಯಾಗಿರಬಹುದು ಎಂಬ ಒಂದು ವಾದ ಆರಂಭದಿಂದಲೇ ಚಾಲ್ತಿಯಲ್ಲಿತ್ತು. ಆದರೆ ಅದಕ್ಕೆ ಯಾರೂ ಹೆಚ್ಚು ಕಿವಿಗೊಟ್ಟಿರಲಿಲ್ಲ. ಈಗ ಫ್ರಾನ್ಸ್‌ನ ವೈದ್ಯಕೀಯ ತಜ್ಞ ಡಾ. ಲಕ್ ಮಾಂಟೆಗ್ನೈರ್ ಎಂಬುವರು, ಚೀನಾದ ವುಹಾನ್‌ನಲ್ಲಿನ ‘ನ್ಯಾಷನಲ್ ಬಯೋಸೇಫ್ಟಿ’ ಪ್ರಯೋಗಾಲಯದಲ್ಲಿಯೇ ಕೊರೊನಾ ವೈರಾಣು ಸೃಷ್ಟಿಯಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಕೊರೊನಾ ವೈರಾಣು ಕಣಗಳ ಅಧ್ಯಯನ ನಡೆಸಿರುವ ಅವರು “ಕೊರೊನಾ ವೈರಾಣು ರಚನೆಯನ್ನು ಗಮನಿಸಿದರೆ ಅದರಲ್ಲಿ ಎಚ್‌ಐವಿ ಮತ್ತು ಮಲೇರಿಯಾ ಕ್ರಿಮಿಯ ರಚನೆಗಳು […]

Read More

ಕೊರೊನಾ ವೈರಾಣು ಮಾನವ ನಿರ್ಮಿತ ವುಹಾನ್ ಲ್ಯಾಬ್‌ನಲ್ಲಿ ಸೃಷ್ಟಿ | ನೊಬೆಲ್ ಪುರಸ್ಕೃತ ಫ್ರಾನ್ಸ್ ವಿಜ್ಞಾನಿ ವಾದ

ಹೊಸದಿಲ್ಲಿ: ವಿಶ್ವಾದ್ಯಂತ ತಲ್ಲಣ ಮೂಡಿಸಿ ಇದುವರೆಗೆ 1.61 ಲಕ್ಷ ಜನರನ್ನು ಬಲಿ ಪಡೆದಿರುವ ಮಹಾಮಾರಿ ಕೊರೊನಾ ವೈರಾಣು ಮಾನವ ನಿರ್ಮಿತ ಎಂದು ನೊಬೆಲ್ ಪುರಸ್ಕೃತ ಫ್ರಾನ್ಸ್‌ನ ವೈದ್ಯಕೀಯ ತಜ್ಞ ಡಾ. ಲಕ್ ಮಾಂಟೆಗ್ನೈರ್ ಆರೋಪಿಸಿದ್ದಾರೆ. ಕೊರೊನಾದಲ್ಲಿರುವ ವೈರಾಣು ಕಣಗಳ ಅಧ್ಯಯನ ನಡೆಸಿರುವ ಅವರು, ವುಹಾನ್‌ನಲ್ಲಿನ ‘ನ್ಯಾಷನಲ್ ಬಯೋಸೇಫ್ಟಿ’ ಪ್ರಯೋಗಾಲಯದಲ್ಲಿಯೇ ಕೊರೊನಾ ವೈರಾಣು ಸೃಷ್ಟಿಯಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಕೊರೊನಾ ವೈರಾಣು ರಚನೆಯನ್ನು ಗಮನಿಸಿದರೆ ಅದರಲ್ಲಿ ಎಚ್‌ಐವಿ ಮತ್ತು ಮಲೇರಿಯಾ ಕ್ರಿಮಿಯ ರಚನೆಗಳು ಹಾಗೂ ಕೆಲವು ಸೂಕ್ಷ್ಮಾಣು ಅಂಶಗಳು […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top