ಮೇ 22 ವಿಶ್ವ ಜೀವವೈವಿಧ್ಯ ದಿನ. ಜೀವ ವೈವಿಧ್ಯತೆಯ ಮಹತ್ವವನ್ನು ಅರ್ಥ ಮಾಡಿಸಲು ವಿಶ್ವ ಸಂಸ್ಥೆ ಈ ದಿನವನ್ನು ಮುಡಿಪಾಗಿಟ್ಟಿದೆ. ಕೊರೊನಾ ಕಾಡುತ್ತಿರುವ ಹೊತ್ತಿನಲ್ಲಿಈ ದಿನ ಪ್ರಸ್ತುತ. ‘‘ಇನ್ನಾದರೂ ನಮ್ಮ ಜೀವವೈವಿಧ್ಯವನ್ನು ಅರ್ಥ ಮಾಡಿಕೊಂಡು ಅದನ್ನ ಉಳಿಸಲು ಪಣ ತೊಡದಿದ್ದರೆ ಮಾನವನೂ ಸರ್ವನಾಶವಾಗುವ ದಿನ ದೂರವಿಲ್ಲ,’’ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಹೆಚ್ಚುತ್ತಿರುವ ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿಈ ಮಾತು. ಭೂಮಿಯಲ್ಲಿ ಗಿಡಮೂಲಿಕೆ, ಕ್ರಿಮಿಕೀಟಗಳೂ ಸೇರಿದಂತೆ ಕೋಟ್ಯಂತರ ಜೀವಿಗಳಿವೆ. ಇವುಗಳ ಜೀವನ ಒಂದಕ್ಕೊಂದು ಹೆಣೆದುಕೊಂಡಿವೆ. ಆಹಾರ […]
Read More
ರಾಜ್ಯ ಕಾನೂನು ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಕೋಲಾರದಲ್ಲಿ ಸಮಸ್ಯೆ ಹೇಳಿಕೊಳ್ಳಲು ಬಂದ ರೈತ ಮಹಿಳೆಯರಿಗೆ ಅವಾಚ್ಯ ಪದ ಬಳಸಿ ನಿಂದಿಸಿ ಸುದ್ದಿಯಾಗಿದ್ದಾರೆ. ಇದು ರಾಜ್ಯ ರೈತ ಸಂಘದವರ ಪ್ರತಿಭಟನೆ, ಪ್ರತಿಪಕ್ಷಗಳ ತೀವ್ರ ಟೀಕೆಗಳಿಗೂ ಕಾರಣವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಮಾಧುಸ್ವಾಮಿಯವರ ನಡೆಯನ್ನು ಖಂಡಿಸಿದ್ದಾರೆ. ತದನಂತರ ಮಾಧುಸ್ವಾಮಿ ಅವರು ಕ್ಷಮೆ ಕೇಳಿದ್ದು, ಅಲ್ಲೂಕೂಡ ತಮ್ಮ ವರ್ತನೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ಅವರು ಕೆಲವು ಒರಟು ಮಾತನಾಡಿದ ಉದಾಹರಣೆ ಇವೆ. ಒಟ್ಟಾರೆಯಾಗಿ ಇದು ಜವಾಬ್ದಾರಿಯುತ ಜನ ಪ್ರತಿನಿಧಿಯೊಬ್ಬರು ನಡೆದುಕೊಳ್ಳಬೇಕಾದ […]
Read More
– ಡಾ. ಮಲ್ಲಿಕಾರ್ಜುನ ಗುಮ್ಮಗೋಳ. ಅನ್ಯರಿಗೆ ಇರಸುಮುರಸು ಆಗುವ ಧ್ವನಿವರ್ಧಕ ಬಳಕೆಯನ್ನು ಮಸೀದಿಗಳು ನಿಲ್ಲಿಸಬೇಕು ಎಂದು ಲೇಖಕ, ಚಿತ್ರ ಸಾಹಿತಿ ಜಾವೇದ್ ಅಕ್ತರ್ ಟ್ವೀಟ್ ಮಾಡಿದ್ದಾರೆ. ‘‘ಯಾವ ಧರ್ಮವೂ ಧ್ವನಿವರ್ಧಕದ ಮೂಲಕ ಪ್ರಾರ್ಥನೆ ಮಾಡಬೇಕೆಂದು ಪ್ರತಿಪಾದಿಸುವುದಿಲ್ಲ. ಆದ್ದರಿಂದ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಬೇಕು,’’ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶದ ಬೆನ್ನಲ್ಲೆ ಬಂದಿರುವ ಈ ಟ್ವೀಟ್ಗೆ ಹೆಚ್ಚಿನ ಮಹತ್ವವಿದೆ. ಅದೇ ಸಮುದಾಯದ ಮತಧರ್ಮದ ಬಗ್ಗೆ ಹೆಚ್ಚು ತಿಳಿದುಕೊಂಡ ವ್ಯಕ್ತಿ, ಈ ಆಚರಣೆಗಳಲ್ಲಿ ಅರ್ಥವಿಲ್ಲ ಎಂದು ಹೇಳುವುದರಲ್ಲಿ ಅರ್ಥವಿದೆ. ಧಾರ್ಮಿಕ […]
Read More
(ಆತ್ಮ ನಿರ್ಭರ ಭಾರತ್ ಭಾಗ 3) ಲಾಕ್ಡೌನ್ನಿಂದಾಗಿ ಕಾರ್ಮಿಕರು ಕಾಲ್ನಡಿಗೆಯಲ್ಲೇ ಹಳ್ಳಿಗಳಿಗೆ ಸಾಮೂಹಿಕ ವಲಸೆ ಹೊರಟಾಗ ಸಂಕೀರ್ಣ ಸಮಸ್ಯೆಯ ಸರಣಿ ಉದ್ಭವಿಸಿತು. ಆತ್ಮನಿರ್ಭರ ಭಾರತ್ ಪ್ಯಾಕೇಜಿನ ಎರಡನೇ ಕಂತಿನಲ್ಲಿ ವಲಸಿಗರಿಗೆ ಆದ್ಯತೆ ನೀಡಲಾಗಿತ್ತು. ವಲಸಿಗರಿಗೆ ಉಚಿತ ಆಹಾರ ವ್ಯವಸ್ಥೆ ಸಕಾಲಿಕ. ಜತೆಗೆ ನೇರ ನಗದು ಕಲ್ಪಿಸಬೇಕು ಎನ್ನುತ್ತಾರೆ ತಜ್ಞರು. ಕೊರೊನಾ ಬಿಕ್ಕಟ್ಟಿನ ಪರಿಣಾಮ ನಗರ ಮತ್ತು ಪಟ್ಟಣಗಳಲ್ಲಿ ಹಠಾತ್ ಕೆಲಸ ಕಳೆದುಕೊಂಡು ಪರದಾಡಿದ ಕೋಟ್ಯಂತರ ವಲಸಿಗ ಕಾರ್ಮಿಕರು ಹಳ್ಳಿಗಳತ್ತ ಸಾಮೂಹಿಕ ವಲಸೆ ಹೋಗಿದ್ದಾರೆ. ವಲಸಿಗರಿಂದ ಕೊರೊನಾ ಹರಡುವ […]
Read More
ಭಾರತ ಜತೆ ನೇರವಾಗಿ ಮುಖಾಮುಖಿಯಾಗದ ಚೀನಾ ದೇಶವು ನೇಪಾಳ, ಪಾಕಿಸ್ತಾನಗಳ ಮೂಲಕ ಗಡಿಯಲ್ಲಿ ತಂಟೆಯನ್ನು ಜೀವಂತವಾಗಿಟ್ಟಿರುತ್ತದೆ. ಭಾರತದಲ್ಲಿರುವ ಗಡಿಗಳನ್ನು ತನ್ನದೆಂದು ನೇಪಾಳ ಹೊಸ ನಕಾಶೆಯನ್ನು ಬಿಡುಗಡೆ ಮಾಡಿದ್ದು, ಈ ನಡೆಯ ಹಿಂದೆ ಚೀನಾದ ಕುಮ್ಮಕ್ಕಿದೆ ಎಂಬ ವಿಶ್ಲೇಷಣೆ ನಡೆಯುತ್ತಿದೆ. ಭಾರತದ ಗಡಿಯಲ್ಲಿರುವ ಲಿಪುಲೇಖ, ಕಾಲಾಪಾನಿ ಮತ್ತು ಲಿಂಪಿಯಧುರಾ ಪ್ರದೇಶಗಳನ್ನು ತನ್ನದೆಂದು ಸಾಬೀತುಪಡಿಸಲು ಈ ಪ್ರದೇಶಗಳನ್ನು ಒಳಗೊಂಡ ಹೊಸ ರಾಜಕೀಯ ನಕಾಶೆಯನ್ನು ನೇಪಾಳ ಬಿಡುಗಡೆ ಮಾಡಿದೆ. ಈ ಮೂಲಕ ಭಾರತ ಮತ್ತು ನೇಪಾಳ ಮಧ್ಯೆ ಗಡಿ ಸಮಸ್ಯೆ ತಲೆದೋರಿದೆ. […]
Read More
ಹೊಸದಿಲ್ಲಿ: ಬಡ ಕುಟುಂಬಗಳ ಆರೋಗ್ಯ ರಕ್ಷಣೆಯ ಮಹಾತ್ವಾಕಾಂಕ್ಷೆಯೊಂದಿಗೆ 2018ರಲ್ಲಿಶುರುವಾದ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಚಿಕಿತ್ಸೆ ಪಡೆದ ಫಲಾನುಭವಿಗಳ ಸಂಖ್ಯೆ 1 ಕೋಟಿಯ ಮೈಲುಗಲ್ಲುದಾಟಿದೆ. 53 ಕೋಟಿ ಜನರು ಆಯುಷ್ಮಾನ್ ಕಾರ್ಡ್ ಪಡೆದುಕೊಂಡಿದ್ದಾರೆ. ದೇಶದ 21,565 ಆಸ್ಪತ್ರೆಗಳಲ್ಲಿಈ ಯೋಜನೆಯಡಿ ಉಚಿತ ಆರೋಗ್ಯ ಸೇವೆ ಪಡೆದ ಫಲಾನುಭವಿಗಳ ಸಂಖ್ಯೆ ಒಂದು ಕೋಟಿ ದಾಟುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಷಯವನ್ನು ಟ್ವಿಟರ್ ಮೂಲಕ ಪ್ರಕಟಿಸಿ ಜನರ ಆರೋಗ್ಯ ರಕ್ಷಣೆ ಬಗ್ಗೆ ಸರಕಾರಕ್ಕಿರುವ ಆದ್ಯತೆಯನ್ನು ಇದು ತೋರಿಸುತ್ತದೆ […]
Read More
– ಲಾಕ್ಡೌನ್ ಮತ್ತಷ್ಟು ಸಡಿಲ | ಮೇ 25 ರಿಂದ ದೇಶೀಯ ವಿಮಾನ ಹಾರಾಟ – ಕೈಗಾರಿಕೆಗಳಿಗೆ 9.25% ಬಡ್ಡಿಯಲ್ಲಿ ಸಾಲ | ವಯೋವಂದನಾ ವಿಸ್ತರಣೆ. ಹೊಸದಿಲ್ಲಿ: ಹಂತ ಹಂತವಾಗಿ ಲಾಕ್ಡೌನ್ ಸಡಿಲಿಕೆಯ ಭಾಗವಾಗಿ ಸರಕಾರ ಮತ್ತಷ್ಟು ಉಪಕ್ರಮಗಳನ್ನು ಪ್ರಕಟಿಸಿದೆ. ಇದರ ಭಾಗವಾಗಿ ಸೋಮವಾರದಿಂದ (ಮೇ 25) ದೇಶಾದ್ಯಂತ ದೇಶೀಯ ವಿಮಾನಗಳ ಸೇವೆ ಆರಂಭವಾಗಲಿದೆ. ‘‘ಹಂತ ಹಂತವಾಗಿ ವಿಮಾನಯಾನ ಆರಂಭವಾಗಲಿದೆ. ಈ ಬಗ್ಗೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಮತ್ತು ಏರ್ಪೋರ್ಟ್ಗಳಿಗೆ ಮಾಹಿತಿ ನೀಡಿ, ಸೋಮವಾರದ ವೇಳೆಗೆ ಹಾರಾಟಕ್ಕೆ […]
Read More
ಸಣ್ಣ ಮತ್ತು ಮಧ್ಯಮ ಉದ್ದಿಮೆ ಎನಿಸಿಕೊಳ್ಳಲು ಹೂಡಿಕೆ ಮತ್ತು ವಹಿವಾಟು ಅರ್ಹತೆಯ ಮಿತಿಯನ್ನು ಗಮನಾರ್ಹವಾಗಿ ವಿಸ್ತರಿಸುವ ಮೂಲಕ ‘ಆತ್ಮನಿರ್ಭರ ಭಾರತ್ ಪ್ಯಾಕೇಜ್’ನಲ್ಲಿ ಇಂಡಸ್ಟ್ರಿಯ ಭವಿಷ್ಯದ ವಿಕಾಸಕ್ಕೆ ಉತ್ತೇಜನ ನೀಡಲಾಗಿದೆ. ಹೀಗಿದ್ದರೂ, ವರ್ತಮಾನದ ಕೊರೊನಾ ಬಿಕ್ಕಟ್ಟು ಎದುರಿಸಲು ನೇರ ನೆರವನ್ನೂ ಹೆಚ್ಚಿಸಬಹುದಿತ್ತು ಎನ್ನುತ್ತಾರೆ ತಜ್ಞರು. – ಶೇ.30.54 ಜಿಡಿಪಿಯಲ್ಲಿ ಎಂಎಸ್ಎಂಇ ಪಾಲು – 11 ಕೋಟಿ ಎಂಎಸ್ಎಂಇ ವಲಯ ಸೃಷ್ಟಿಸಿರುವ ಉದ್ಯೋಗ (ಆತ್ಮ ನಿರ್ಭರ್ ಭಾರತ್- ಭಾಗ 2) ‘ಸಣ್ಣದಾಗಿರುವುದು ಚೆಂದ’ ನುಡಿಗಟ್ಟು ಸಣ್ಣ ಉದ್ದಿಮೆಗಳ ಬೆಳವಣಿಗೆಯ ದೃಷ್ಟಿಯಿಂದ […]
Read More
– ಚೀನಾಗೆ ಮಣಿದರೆ ಅನುದಾನ ಬಂದ್ ಎಚ್ಚರಿಕೆ – 30 ದಿನಗಳ ಗಡುವು ನೀಡಿದ ಟ್ರಂಪ್. ವಾಷಿಂಗ್ಟನ್: ಕೊರೊನಾ ಸಂಕಷ್ಟದ ಆರಂಭದಿಂದಲೂ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ವಿರುದ್ಧ ಹರಿಹಾಯುತ್ತಿರುವ ಅಮೆರಿಕವು, ಡಬ್ಲ್ಯುಎಚ್ಒ ಚೀನಾ ಹಿಡಿತದಿಂದ ಹೊರಬರದಿದ್ದರೆ ತನ್ನ ಪಾಲಿನ ಅನುದಾನ ಶಾಶ್ವತವಾಗಿ ಸ್ಥಗಿತಗೊಳಿಸುವ ಎಚ್ಚರಿಕೆ ರವಾನಿಸಿದೆ. ಅಲ್ಲದೇ ಇದೇ ರೀತಿಯ ವರ್ತನೆ ತೋರಿದರೆ ಸದಸ್ಯತ್ವದಿಂದ ಹೊರಬರುವ ಸುಳಿವು ನೀಡಿದೆ. ಇದರೊಂದಿಗೆ ಅಮೆರಿಕ ಮತ್ತು ಚೀನಾ ನಡುವಿನ ಸಮರ ಇನ್ನಷ್ಟು ತೀವ್ರಗೊಂಡಿದೆ. ಪದೇಪದೆ ಕೊರೊನಾ ನಿಯಂತ್ರಣ ವಿಚಾರದಲ್ಲಿ […]
Read More
– ಅಕ್ಕಿ, ತರಕಾರಿ, ಹಾಲು ಇತ್ಯಾದಿ ಆಹಾರ ಉತ್ಪನ್ನಗಳಿಗಿಲ್ಲ ಬೇಡಿಕೆ. ಯಳನಾಡು ಮಂಜು, ದಾವಣಗೆರೆ. ಲಾಕ್ಡೌನ್ ಮುಗಿದ ನಂತರ ಬಹುತೇಕ ವಸ್ತುಗಳ ಬೆಲೆ ಗಗನ ಮುಖಿ ಆಗುತ್ತಿದೆ. ಸಿಮೆಂಟ್, ಕಬ್ಬಿಣ ಇತ್ಯಾದಿ ನಿರ್ಮಾಣ ಸಾಮಗ್ರಿಗಳಿಂದ ಹಿಡಿದು ಮೊಬೈಲ್ ಇತ್ಯಾದಿ ಎಲೆಕ್ಟ್ರಾನಿಕ್ ಸಾಮಗ್ರಿಗಳ ತನಕ ಪ್ರಮುಖ ಉತ್ಪನ್ನಗಳ ದರ ಜಂಪ್ ಆಗಿದೆ. ಆದರೆ ಆಹಾರ ಉತ್ಪನ್ನಗಳ ಬೆಲೆ ಮಾತ್ರ ಕುಸಿಯತ್ತಿದ್ದು, ಕೃಷಿ ಕ್ಷೇತ್ರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಬಹುತೇಕ ಕೊರೊನಾ ನಿರ್ಬಂಧ ತೆರವಾದರೂ ಹೋಟೆಲ್ ಉದ್ಯಮಕ್ಕೆ […]
Read More