– ಶಶಿಧರ ಹೆಗಡೆ. ರಾಜಕೀಯ ಯಾವತ್ತೂ ನಿಂತ ನೀರಲ್ಲ. ಜಡ್ಡು ಗಟ್ಟಿದ ವ್ಯವಸ್ಥೆಯಲ್ಲೂ ಇದೊಂದು ವಲಯ ಗತಿಶೀಲವಾಗಿರುತ್ತದೆ. ರಾಜಕಾರಣದೊಂದಿಗೆ ಮಹತ್ವಾಕಾಂಕ್ಷೆಯೂ ತಳುಕು ಹಾಕಿಕೊಂಡಿರುತ್ತದೆ. ಅದು ರಾಜಕಾರಣದಲ್ಲಿ ತೊಡಗಿಸಿಕೊಂಡವರನ್ನು ಚಟುವಟಿಕೆಯಿಂದ ಇಡುತ್ತದೆ. ಇದರ ನಡುವೆ ರಾಜಕಾರಣದಲ್ಲಿ ಧಡಕಿಯಾಗುವುದೂ ಸರ್ವೇಸಾಮಾನ್ಯ. ಪರಸ್ಪರ ಟೀಕೆ, ಟಿಪ್ಪಣಿಯಿಲ್ಲದಿದ್ದರೆ ರಾಜಕಾರಣಿಗಳಿಗೂ ತಿಂದದ್ದು ಪಚನವಾಗುವುದಿಲ್ಲ. ‘ಕುಶಾಲಿ’ಗಾದರೂ ಎದುರಾಳಿಯ ವಿರುದ್ಧ ದೋಷಾರೋಪ ಹೊರಿಸಿ ತಮ್ಮವರ ವಲಯದಲ್ಲಿ ಕುಶಾಲುತೋಪು ಹಾರಿಸದಿದ್ದರೆ ರಾಜಕಾರಣಿಗಳಿಗೆ ನಿದ್ದೆಯೂ ಬಾರದು. ರಾಜಕಾರಣ ಎನ್ನುವುದೇ ಒಂದು ಬಗೆಯ ಮಾಯೆ. ಈ ಮಾಯಾಲೋಕದಲ್ಲಿ ಇರುವವರು ಅಗೋಚರ ಶಕ್ತಿಯನ್ನು […]
Read More
– ರೈತರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅಭಯ – ನನ್ನ ಬೆಳೆ, ನನ್ನ ಹಕ್ಕು ಎನ್ನುವುದೇ ಕಾಯಿದೆಯ ಆಶಯ ವಿಕ ಸುದ್ದಿಲೋಕ ಬೆಂಗಳೂರು. ‘ನನ್ನ ಬೆಳೆ. ನನ್ನ ಹಕ್ಕು’ ಎಂಬ ಆಶಯದಡಿ ರೈತರು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸ್ವಾತಂತ್ರ್ಯ ನೀಡುವ ದೃಷ್ಟಿಯಿಂದ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪದಂತೆ 2022ರ ಹೊತ್ತಿಗೆ ರೈತರ ಆದಾಯ ದ್ವಿಗುಣಗೊಳಿಸಲು ಇದು ಸಹಾಯಕವಾಗಲಿದೆ. ಇದರಿಂದ ರೈತರಿಗೆ ಅನ್ಯಾಯವಾಗುವ ಪ್ರಶ್ನೆಯೇ ಇಲ್ಲ. ಅಂತಹ ಸಂದರ್ಭ ಬಂದರೆ ಈ ಸ್ಥಾನದಲ್ಲಿಒಂದು […]
Read More
ಒಂದು ಕಾಲದಲ್ಲಿ ‘ಕಿಂಗ್ ಆಫ್ ಗುಡ್ ಟೈಮ್ಸ್’ ಎಂದು ಖ್ಯಾತನಾಗಿದ್ದ ‘ಮದ್ಯದ ದೊರೆ’ ವಿಜಯ ಮಲ್ಯ ಭಾರತೀಯ ಬ್ಯಾಂಕುಗಳಿಗೆ ಮೋಸ ಮಾಡಿ 2016ರಲ್ಲಿ ಬ್ರಿಟನ್ಗೆ ಪಲಾಯನ ಮಾಡಿದ್ದರು. ಅಂದಿನಿಂದಲೂ ಮಲ್ಯ ಅವರನ್ನು ವಾಪಸ್ ಭಾರತಕ್ಕೆ ಕರೆ ತರುವ ಪ್ರಯತ್ನವನ್ನು ಭಾರತ ಸರಕಾರ ಮಾಡುತ್ತಲೇ ಇದೆ. ಹಂತ ಹಂತವಾಗಿ ಕಾನೂನು ಹಾಗೂ ರಾಜತಾಂತ್ರಿಕ ಉಪಾಯಗಳ ಮೂಲಕ ಇದೀಗ ಮುಂದಿನ 28 ದಿನಗಳಲ್ಲಿ ಭಾರತೀಯ ಕೋರ್ಟು ಕಟಕಟೆಯಲ್ಲಿ ಮಲ್ಯ ನಿಲ್ಲಲಿದ್ದಾರೆ. ವಿಜಯ ಮಲ್ಯ ರೀತಿಯಲ್ಲೇ ಸುಸ್ತಿದಾರರಾಗಿ ದೇಶ ತೊರೆದಿರುವ ಲಲಿತ್ […]
Read More
– ಸ್ವಾವಲಂಬನೆಯೊಂದಿಗೆ ವೈಶ್ವಿಕ ಗ್ರಾಮ ಬಲಗೊಳಿಸುವ ಭಾರತೀಯ ಚಿಂತನೆ – ಹರಿಪ್ರಕಾಶ್ ಕೋಣೆಮನೆ. ಕೊರೊನಾ ವೈರಸ್ನಿಂದ ಪಾರಾಗುವುದು ಹೇಗೆ ಎಂಬುದೇ ಮೂರು ತಿಂಗಳ ಹಿಂದೆ ನಮ್ಮೆದುರಿನ ಬೃಹತ್ ಸವಾಲಾಗಿತ್ತು. ಕಾರಣ ಎದುರಾಗಿದ್ದ ಜೀವ ಭಯ! ಅದೊಂದು ಜೀವನ್ಮರಣದ ಪ್ರಶ್ನೆ ಎಂಬಂತೆಯೇ ಸರಕಾರವೂ ಯೋಚನೆಗೆ ಬಿದ್ದಿತ್ತು. ಆದರೆ ಈಗ ಅದು ನಮ್ಮ ಚಿಂತನೆಯ ಕೇಂದ್ರ ವಸ್ತುವಲ್ಲ. ಕೊರೊನಾದೊಂದಿಗೆ ಬದುಕಲು ಕಲಿಯಿರಿ ಎಂದು ಸರಕಾರ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ಹೇಳುವ ಮುನ್ನವೇ, ಅದರೊಟ್ಟಿಗೆ ಬದುಕಲು ಕಲಿಯಲಾರಂಭಿಸಿದ್ದೇವೆ. ಆದರೆ, ಈಗ […]
Read More
– ನಾ. ತಿಪ್ಪೇಸ್ವಾಮಿ. ಕೊರೊನಾ ಮಹಾಮಾರಿಯಿಂದಾಗಿ ಅಮೆರಿಕ, ರಷ್ಯಾ, ಚೀನಾ, ಸ್ಪೇನ್ ಮುಂತಾದ ಶ್ರೀಮಂತ ರಾಷ್ಟ್ರಗಳು ತತ್ತರಿಸಿ ಹೋಗಿವೆ. ಅತ್ಯಧಿಕ ಸಂಖ್ಯೆಯಲ್ಲಿಸಾವು ನೋವುಗಳು ಸಂಭವಿಸಿವೆ. ಈ ವೈರಸ್ ಭಾರತದಲ್ಲಿಯೂ ಹರಡಿದೆ. ಆದರೆ ಅಷ್ಟೊಂದು ದೊಡ್ಡ ಪ್ರಮಾಣದ ಪ್ರಾಣಹಾನಿಯನ್ನು ಮಾಡಲಿಲ್ಲ. ಇದಕ್ಕೆ ಮುಖ್ಯ ಕಾರಣ ಭಾರತದ ನಾಯಕತ್ವ ತೆಗೆದುಕೊಂಡ ನಿರ್ಣಯಗಳು ಹಾಗೂ ಈ ದೇಶದಲ್ಲಿಆಚರಣೆಯಲ್ಲಿರುವ ರೀತಿ ನೀತಿಗಳು. ಪ್ರಧಾನಿ ಮೋದಿ ಮಾ.22ರಂದು 21ದಿನಗಳ ಕಾಲ ಲಾಕ್ಡೌನ್ ಘೋಷಿಸಿದರು. ಇದು ಅನೇಕರನ್ನು ದಿಗ್ಭ್ರಮೆಗೊಳಿಸಿತು. 130 ಕೋಟಿ ಜನರಿರುವ ಭಾರತದಲ್ಲಿ ಅನೇಕ […]
Read More
(ಇಂದು ಕ್ರಾಂತಿಕಾರಿ ಸುಖದೇವ್ ಜನ್ಮದಿನ) – ಮಯೂರಲಕ್ಷ್ಮಿ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಪ್ರತಿಮ ಕ್ರಾಂತಿಕಾರಿಗಳು. ಅವರ ಬಲಿದಾನವನ್ನು ದೇಶ ಇಂದಿಗೂ ಸ್ಮರಿಸುತ್ತಿದೆ. ಈ ಮೂವರ ಪೈಕಿ ಸುಖದೇವ್ ಅವರ ಪೂರ್ತಿ ಹೆಸರು ಸುಖದೇವ್ ಥಾಪರ್. ಪಂಜಾಬಿನ ಲೂಧಿಯಾನಾದಲ್ಲಿ ಮೇ 15, 1907ರಲ್ಲಿ ರಾಮಲಾಲ್ ಥಾಪರ್ ಮತ್ತು ರಲ್ಲಿದೇವಿ ಅವರ ಪುತ್ರನಾಗಿ ಜನಿಸಿದವರು ಸುಖದೇವ್. ಪಂಜಾಬಿನ ಕ್ರಾಂತಿಕಾರಿ ಪಕ್ಷದಲ್ಲಿ ಕಾರ್ಯಕರ್ತರಾಗಿದ್ದ ರಾಮ್ಲಾಲ್ ಅವರ ನಿಧನದ ನಂತರ ಸುಖದೇವ್ ಚಿಕ್ಕಪ್ಪ ಲಾಲಾ ಅಚಿಂತ್ಯರಾಮ್ […]
Read More
ಇಡೀ ಜಗತ್ತನ್ನೇ ಕಂಗೆಡಿಸಿರುವ ಕೊರೊನಾ ವೈರಸ್(ಕೋವಿಡ್-19) ಕೂಡಲೇ ನಿರ್ನಾಮ ಆಗಲಿದೆಯೇ, ದೀರ್ಘಕಾಲದವರೆಗೆ ಇರಲಿದೆಯೇ ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ, ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್ಒ), ‘‘ಕೋವಿಡ್-19 ಕೂಡ ಎಚ್ಐವಿ ರೀತಿಯಲ್ಲಿ ದೀರ್ಘಕಾಲಿನ ಸೋಂಕು ರೋಗವಾಗಿ ಉಳಿಯುವ ಸಾಧ್ಯತೆ ಇದ್ದು, ಇದರ ಜತೆಗೇ ಜೀವನ ನಡೆಸುವ ವಿಧಾನಗಳನ್ನು ಕಂಡುಕೊಳ್ಳಬೇಕಿದೆ,’’ ಎಂದು ಹೇಳಿದೆ. ಇದೇ ರೀತಿಯ ಅಭಿಪ್ರಾಯವನ್ನು ಕೆಲವು ದಿನಗಳ ಹಿಂದೆ ಭಾರತ ಸರಕಾರದ ಆರೋಗ್ಯ ಇಲಾಖೆ ಕೂಡ ವ್ಯಕ್ತಪಡಿಸಿ, ‘‘ನಾವು ಕೊರೊನಾ ವೈರಾಣುವಿನೊಂದಿಗೆ ಬದುಕುವುದನ್ನು ಕಲಿಯಬೇಕಿದೆ,’’ ಎಂದು ಹೇಳಿತ್ತು. ಕೊರೊನಾ ವೈರಸ್ […]
Read More
– ಸಿದ್ದರಾಮಯ್ಯ ಪ್ರತಿಪಕ್ಷ ನಾಯಕ ‘ಮನೆ ಮಾಡೇ ಗರತಿ ಎಂದರೆ ಮೆಲ್ಲಗೆ ಮನೆಯೊಳಗೆ ಬಂದು ಮನೆನೇ ಮಾರಿದ್ಲಂತೆ…’ ಎಂಬ ಗಾದೆ ಮಾತನ್ನು ನಮ್ಮೂರ ಕಡೆ ಜನ ಹೇಳ್ತಿರ್ತಾರೆ. ಹಾಗಾಗಿದೆ ದೇಶದ ಸ್ಥಿತಿ. ಕೊರೊನಾ ವೈರಸ್ ದಾಳಿಯಿಂದ ತಾವು ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ ದಿವಾಳಿಯಾಗಿ ನರಳುತ್ತಿರುವ ನಮ್ಮ ರೈತ ಬಂಧುಗಳು ‘ನಮ್ಮನ್ನು ರಕ್ಷಿಸಿ, ಉಳಿಸಿ’ ಎಂದು ಗೋಗರೆಯುತ್ತಿರುವಾಗ, ಕೇಂದ್ರ ಸರಕಾರ ಅವರ ಗಾಯದ ಮೇಲೆ ಬರೆ ಎಳೆಯುವ ರೀತಿಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಗಳನ್ನು ನಾಶ ಮಾಡಲು […]
Read More
– ಸುಗ್ರೀವಾಜ್ಞೆ ಜಾರಿಗೆ ತಂದರೆ 18ರಿಂದ ಬಂದ್ ಎಚ್ಚರಿಕೆ – ಸರಕಾರದ ಮೇಲೆ ಒತ್ತಡ, ಇಂದು ಸಂಪುಟದಲ್ಲಿ ಚರ್ಚೆ ವಿಕ ಸುದ್ದಿಲೋಕ ಬೆಂಗಳೂರು ಎಪಿಎಂಸಿ ಕಾಯಿದೆ ತಿದ್ದುಪಡಿ ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ ಕಾಣಿಸಿಕೊಂಡಿದೆ. ಈ ನಡುವೆ, ರಾಜ್ಯ ಸರಕಾರವು ಕೇಂದ್ರದ ಒತ್ತಡಕ್ಕೆ ಮಣಿದು ಅವಸರದಿಂದ ಕಳುಹಿಸಿದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಬುಧವಾರ ವಾಪಸ್ ಕಳಿಸಿದ್ದಾರೆ. ಗುರುವಾರ ಸಂಪುಟದಲ್ಲಿ ಚರ್ಚೆ ನಡೆಸಿಯೇ ಸುಗ್ರೀವಾಜ್ಞೆಯನ್ನು ಅಂತಿಮಗೊಳಿಸಬೇಕಾದ ಅನಿವಾರ್ಯತೆಗೆ ಸಿಲುಕಿರುವ ಸರಕಾರದ ನಡೆ ಕುತೂಹಲ ಮೂಡಿಸಿದೆ. ಬುಧವಾರ ಎಪಿಎಂಸಿ ವರ್ತಕರು ರಾಜ್ಯದ ಬಹುತೇಕ […]
Read More
ಶ್ರೀಮಂತ ವ್ಯಾಪಾರಿಗಳು ಹಾಗೂ ಮಧ್ಯವರ್ತಿಗಳು ರೈತರನ್ನು ಸುಲಿಗೆ ಮಾಡುವುದನ್ನು ತಡೆಯಲೆಂದು ಎಪಿಎಂಸಿ ಕಾಯಿದೆ ರೂಪಿಸಿ ಜಾರಿಗೆ ತರಲಾಗಿತ್ತು. ಈಗ ಆ ಎಪಿಎಂಸಿ ಕಾಯಿದೆಯಲ್ಲಿ ದಿಢೀರ್ ತಿದ್ದುಪಡಿ ಮಾಡಲು ಸರಕಾರ ಮುಂದಾಗಿದೆ. ತಿದ್ದುಪಡಿ ಕಾಯಿದೆ ಸಂಬಂಧ ಸುಗ್ರೀವಾಜ್ಞೆ ಪ್ರಸ್ತಾಪವನ್ನು ಕೇಂದ್ರ ಸರಕಾರದ ಒತ್ತಡದ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಇದಕ್ಕೆ ಮುನ್ನ ತಿದ್ದುಪಡಿ ಸಂಬಂಧಿಸಿ ವಿಧಾನಮಂಡಲದಲ್ಲಿ ಚರ್ಚೆಯಾಗಬೇಕಿತ್ತು; ಸಂಪುಟ ಸಭೆಯಲ್ಲಿ ಅನುಮೋದನೆ ಆಗಬೇಕಿತ್ತು. ಎರಡೂ ಆಗಿಲ್ಲ. ಇಷ್ಟೊಂದು ತರಾತುರಿಯಲ್ಲಿ ಲಾಕ್ಡೌನ್ ನಡುವೆಯೇ, ಎಪಿಎಂಸಿ ಕಾಯಿದೆ ಬದಲಾಯಿಸುವ ತರಾತುರಿ ಏನಿದೆ? ಇದು […]
Read More