ಕೊರೊನಾ ಕಾಲದಲ್ಲಿ ಮಂತ್ರಿಗಳ ದಿನಚರಿ…

ಇಡೀ ವಿಶ್ವವನ್ನೇ ನಡುಗಿಸಿರುವ ಕೊರೊನಾ ರಾಜ್ಯಕ್ಕೂ ಸಂಕಷ್ಟ ತಂದಿದೆ. ಇದನ್ನೇ ಒಂದಂಶದ ಕಾರ್ಯಕ್ರಮವನ್ನಾಗಿ ಮಾಡಿಕೊಂಡಿರುವ ಸರಕಾರ ಮಾರಕ ವೈರಾಣು ನಿಯಂತ್ರಣಕ್ಕೆ ಹರಸಾಹಸ ಮಾಡುತ್ತಿದೆ. ಇಂಥ ವಿಷಮ ಸನ್ನಿವೇಶದಲ್ಲಿ ಯೋಧರಂತೆ ಕ್ರಿಯಾಶೀಲರಾಗಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ, ಜನತೆಗೆ ಯಾವ ರೀತಿ ಒತ್ತಾಸೆ ನೀಡಿದ್ದಾರೆ, ‘ಉಸ್ತುವಾರಿ’ ಎಂಬುದರ ಅರ್ಥವನ್ನು ಹೇಗೆ ವಿಸ್ತರಿಸಿದ್ದಾರೆ ಎಂಬುದರ ಕುರಿತು ವಿಕ ರಿಯಾಲಿಟಿ ಚೆಕ್. ಸಚಿವರ ಕ್ರಿಯಾಶೀಲತೆ ಬಡಿದೆಬ್ಬಿಸಿದ ಕೊರೊನಾ ಬೀದರ್‌ನಲ್ಲಿ ಪ್ರಭು ಕಾರುಣ್ಯ ಬೀದರ್: ಕೊರೊನಾ ತಡೆಯುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು […]

Read More

ವೆಚ್ಚ ಕಡಿತ ಇಲ್ಲಿಂದಲೇ ಆರಂಭವಾಗಲಿ ಸಿಎಂ ಸಾಹೇಬರೆ…

ವೆಚ್ಚ ಕಡಿತದ ಪ್ರಸ್ತಾವನೆ ಓಕೆ, ನಿಗಮ, ಮಂಡಳಿ ನೇಮಕ ಬೇಕೆ? ಕೊರೊನಾ ಮಹಾಮಾರಿ ದೇಶದ ಆರ್ಥಿಕತೆ ಮೇಲೆ ಬೀರಿರುವ ಪರಿಣಾಮ ನಿರೀಕ್ಷೆಗೂ ಮೀರಿದ್ದು. ಆರ್ಥಿಕ ಮುಗ್ಗಟ್ಟನ್ನು ನಿಭಾಯಿಸುವ ಕ್ರಮವಾಗಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರು, ಕೇಂದ್ರ ಸಚಿವರು ಹಾಗೂ ಸಂಸದರ ವೇತನವನ್ನು ಶೇ.30ರಷ್ಟು ವೇತನವನ್ನು ಒಂದು ವರ್ಷದ ಅವಧಿಗೆ ಕಡಿತ ಮಾಡುವ ತೀರ್ಮಾನವನ್ನು ಕೇಂದ್ರ ಸರಕಾರ ಪ್ರಕಟಿಸಿದೆ. ಇದೇ ಮಾದರಿಯಲ್ಲಿರಾಜ್ಯ ಸರಕಾರವೂ ಕ್ರಮಕ್ಕೆ ಮುಂದಾಗಿದೆ. ”ಸಚಿವರು, ಶಾಸಕರ ವೇತನವನ್ನು 2 ವರ್ಷದ ಅವಧಿಗೆ ಶೇ.30ರಷ್ಟು ಕಡಿತಗೊಳಿಸುವ ತೀರ್ಮಾನವನ್ನು ಸಂಪುಟ […]

Read More

ಉದ್ಯೋಗ ನಷ್ಟ ಬದುಕು ಕಷ್ಟ

ಕೊರೊನಾ ವೈರಸ್‌ನಿಂದ ಹೆಚ್ಚಿನ ಎಲ್ಲ ದೇಶಗಳು ಲಾಕ್‌ಡೌನ್, ಭಾಗಶಃ ಲಾಕ್‌ಡೌನ್ ಘೋಷಿಸಿವೆ. ಇದರಿಂದಾಗಿ ಅವಶ್ಯಕ ಸೇವೆ ಹೊರತುಪಡಿಸಿ ಉಳಿದ ಎಲ್ಲ ಉದ್ಯಮಗಳು ಮುಚ್ಚಿದ್ದು, ಇದರಿಂದ ಕೋಟ್ಯಂತರ ಮಂದಿ ಭವಿಷ್ಯದ ಕಡೆಗೆ ಶೂನ್ಯ ದೃಷ್ಟಿ ಬೀರುವಂತಾಗಿದೆ. ಯಾವ ದೇಶದಲ್ಲಿ ಏನು ಪರಿಣಾಮವಾಗಿದೆ? ಇಲ್ಲೊಂದು ನೋಟವಿದೆ. ಭಾರತದ ಸ್ಥಿತಿಗತಿ ಗಂಭೀರ ಭಾರತದಲ್ಲಿ ಸಂಸತ್ ಸದಸ್ಯರ ವಾರ್ಷಿಕ ವೇತನ, ಭತ್ಯೆ ಹಾಗೂ ಪಿಂಚಣಿಯಲ್ಲಿ ಶೇ.30ರಷ್ಟು ಕಡಿತ ಮಾಡುವ ನಿರ್ದೇಶನವನ್ನು ಸಚಿವ ಪ್ರಕಾಶ್ ಜಾವಡೇಕರ್ ನೀಡಿದ್ದಾರೆ. 2010-21 ಹಾಗೂ 2021-22ರಲ್ಲಿ ಎಂಪಿಗಳು ಬಳಸಿಕೊಳ್ಳಬೇಕಿದ್ದ […]

Read More

ಕೌಟುಂಬಿಕ ಬಜೆಟ್‌ಗೆ ಬೇಕು ಸಂಕಷ್ಟ ಸೂತ್ರ

– ಮುಂದುವರಿದ ಕೊರೊನಾ ಸೋಂಕು, ಸಾವಿನ ಸರಣಿ  ಅರ್ಥ ವ್ಯವಸ್ಥೆಗೇ ಆಪತ್ತು – ಉದ್ಯೋಗ ನಷ್ಟ ಇಲ್ಲವೇ ಸಂಬಳ ಕಡಿತ ಸಾಧ್ಯತೆ – ಬಡ ಮತ್ತು ಮಧ್ಯಮ ವರ್ಗದ ಜನರ ಜೀವನ ನಿರ್ವಹಣೆಗೆ ಎದುರಾಗಲಿದೆ ಸವಾಲು – ಕಠಿಣ ಬಜೆಟ್ ಸೂತ್ರವೇ ಸದ್ಯಕ್ಕಿರುವ ದಾರಿ – ಎ ಕೃಷ್ಣ ಭಟ್, ಬೆಂಗಳೂರು ಮಹಾಮಾರಿ ಕೊರೊನಾದ ಹೊಡೆತಕ್ಕೆ ಇಡೀ ಜಗತ್ತೇ ತತ್ತರಿಸಿದೆ. ಕೊರೊನಾ ಕೇವಲ ಆರೋಗ್ಯ ಸಮಸ್ಯೆಯಲ್ಲ. ಅರ್ಥ ವ್ಯವಸ್ಥೆಯನ್ನು ಬುಡಮೇಲುಗೊಳಿಸಿರುವ ಈ ರೋಗ ಸಾಮಾಜಿಕವಾಗಿಯೂ ಹಲವು ಸವಾಲುಗಳನ್ನು […]

Read More

ಸರಳ ಜೀವನ ಕಲಿಯೋಣ – ಸುರಂಗದ ಕೊನೆಯಲ್ಲಿ ಬೆಳಕಿದೆ

ಕೊರೊನಾ ವೈರಸ್ ಹಬ್ಬದಿರಲಿ ಎಂಬ ಮುಂದಾಲೋಚನೆಯಿಂದ ಭಾರತವೂ ಸೇರಿದಂತೆ ಹಲವು ದೇಶಗಳು ಲಾಕ್‌ಡೌನ್ ಮಾಡಿವೆ. ಕಳೆದ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಜಾಗತಿಕ ಆರ್ಥಿಕ ಹಿಂಜರಿತ ಆರಂಭವಾಗಿದ್ದ ಹೊತ್ತಿನಲ್ಲೇ ಕೋವಿಡ್ ಸೋಂಕು ಕಾಣಿಸಿಕೊಂಡು, ಜಗತ್ತಿನಾದ್ಯಂತ ವ್ಯಾಪಿಸಲು ಆರಂಭವಾಗಿತ್ತು. ಇದನ್ನು ತಡೆಗಟ್ಟುವುದು, ಅದಕ್ಕಾಗಿ ಲಾಕ್‌ಡೌನ್‌ಗಳು ಅನಿವಾರ್ಯವಾಗಿದ್ದವು. ಲಾಕ್‌ಡೌನ್‌ಗಳ ಪರೋಕ್ಷ ಪರಿಣಾಮ ಆರ್ಥಿಕತೆಯ ಮೇಲೆ ಆಗಿದ್ದು ಅಂತಾರಾಷ್ಟ್ರೀಯ ವ್ಯಾಪಾರ- ವಹಿವಾಟುಗಳು ಕುಸಿದಿವೆ. ಹಲವು ವಲಯಗಳು ಕೆಲಸ ಮಾಡುವುದನ್ನು ನಿಲ್ಲಿಸಿದ್ದು, ಕಂಪನಿಗಳು ಮುಚ್ಚಿವೆ. ಇದು ಇನ್ನಷ್ಟು ಕಾಲ ಮುಂದುವರಿಯಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. […]

Read More

ಚೀನಾದ ಕೊರೊನಾ ಹೀರೊ

​​ಚೀನಾದ ಕೊರೊನಾ ಹೀರೊ ​- ಕೇಶವ ಪ್ರಸಾದ್‌ ಬಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಕಳೆದ ಫೆಬ್ರವರಿಯಲ್ಲಿ ಕೊರೊನಾ ವೈರಸ್‌ ವಿರುದ್ಧ ಹೋರಾಟದಲ್ಲಿ ತಮ್ಮನ್ನು ತಾವೇ ‘‘ಸುಪ್ರೀಂ ಕಮಾಂಡರ್‌’’ ಎಂದು ಬೆನ್ನು ತಟ್ಟಿಕೊಂಡಿದ್ದರು. ಆದರೆ ನಿಜಕ್ಕೂ ಅಲ್ಲಿನ ಜನರ ಮನಗೆದ್ದ ಸಮರ ಸೇನಾನಿ ಅವರಲ್ಲ, ಬದಲಿಗೆ 83 ವರ್ಷದ ವೈದ್ಯ ಜಾಂಗ್‌ ನಾನ್‌ಶಾನ್‌! ​​ಇದಕ್ಕೆ ಕಾರಣಗಳೂ ಹಲವು. ಅವರು ಕೇವಲ ಹಿರಿಯ ವೈದ್ಯರಲ್ಲ, ಜ್ಞಾನ ವೃದ್ಧ, ಸತ್ಯನಿಷ್ಠ ಎಂಬ ಮಾತಿದೆ. ಜತೆಗೆ ಚೀನಾದ ನ್ಯಾಶನಲ್‌ ಪೀಪಲ್ಸ್‌ ಕಾಂಗ್ರೆಸ್‌ನ […]

Read More

ಇದೊಂದು ಇರ್ಲಿಲ್ಲಾ ಅಂದ್ರೆ ಭಾರತ ಸೇಫಾಗಿತ್ತು..

ತಬ್ಲಿಘಿ ನಂಜೇ ಸಾವಿರ! – 17 ರಾಜ್ಯಗಳಲ್ಲಿನ 1023 ಕೇಸಿಗೆ ನಿಜಾಮುದ್ದೀನ್‌ ನಂಟು – 22 ಸಾವಿರ ಜನರು ಕ್ವಾರಂಟೈನ್‌ – ಶತಕದ ಬಾಗಿಲಿಗೆ ಬಂದ ಸಾವಿನ ಸಂಖ್ಯೆ – ರಾಜ್ಯದಲ್ಲೂ16 ಹೊಸ ಕೇಸ್‌ ಪತ್ತೆ ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಮೂರು ಸಾವಿರದ ಗಡಿ ದಾಟಿದೆ. ಆದರೆ, ಸೋಂಕಿನ ಪ್ರಮಾಣದಲ್ಲಿ ಸಿಂಹಪಾಲು ಪ್ರಕರಣಗಳು ನೇರವಾಗಿ ದಿಲ್ಲಿಯಲ್ಲಿ ನಡೆದ ತಬ್ಲಿಘಿ ಸಮಾವೇಶದೊಂದಿಗೆ ನಂಟು ಹೊಂದಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ, ತಮಿಳುನಾಡು, […]

Read More

ವೈದ್ಯಕೀಯ ಸನ್ನದ್ಧತೆ ಅಗತ್ಯ: ಆರೋಗ್ಯ ಸೇವೆಯ ಗುಣಮಟ್ಟ ಪರೀಕ್ಷೆಯಾಗಲಿದೆ

ನಮ್ಮ ವೈದ್ಯಕೀಯ ವ್ಯವಸ್ಥೆ ಎಷ್ಟು ದೃಢವಾಗಿದೆ ಎಂಬ ಪರೀಕ್ಷೆಗೆ ರಂಗ ಸಜ್ಜಾಗುತ್ತಿರುವಂತಿದೆ. ಕಳೆದೆರಡು ದಿನಗಳಲ್ಲಿ ದಿನವಹಿ ಆರುನೂರಕ್ಕೂ ಹೆಚ್ಚು ಕೋವಿಡ್‌-19 ಕೇಸುಗಳು ದಾಖಲಾಗಿವೆ. ಮಾರ್ಚ್‌ 24ರಿಂದಲೇ ಲಾಕ್‌ಡೌನ್‌ ಘೋಷಿಸಿದ್ದರೂ ಈಗಾಗಲೇ ವೈರಸ್‌ ಅಜ್ಞಾತ ದಾರಿಗಳಲ್ಲಿ ಹಲವರನ್ನು ತಲುಪಿರುವ ಶಂಕೆ ಇದ್ದು, ಮುಂದಿನ ವಾರದಲ್ಲಿ ಅದರ ನಿಜಸಂಖ್ಯೆ ಗೊತ್ತಾಗಲಿದೆ. ದೇಶದಲ್ಲಿ ವೈರಸ್‌ ಹರಡುವಿಕೆ ಈ ವಾರದಲ್ಲಿ ಇಳಿಯಬಹುದೆಂಬ ಭರವಸೆ ನಮಗೆ ಅಗತ್ಯ; ಆದರೆ ಲಕ್ಷಾಂತರ ರೋಗಿಗಳ ಸಂಖ್ಯೆ ಹಾಗೂ ಅವರಿಂದ ನಮ್ಮ ಆರೋಗ್ಯ ಸೇವೆಯ ಮೇಲೆ ಆಗಬಹುದಾದ ಒತ್ತಡದ […]

Read More

ಕಣ್ಣಿಗೆ ಕಾಣದ ಶತ್ರುವಿನ ಮುಂದೆ ಸಂಘಟಿತ ಭಾರತೀಯ

ಕಣ್ಣಿಗೆ ಕಾಣದ ಶತ್ರುವಿನ ಮುಂದೆ ಸಂಘಟಿತ ಭಾರತೀಯ ಎಲ್ಲರಿಗಿಂತ ಮೊದಲು ಎಚ್ಚೆತ್ತುಕೊಂಡ ಭಾರತದ ಲಾಕ್‌ಡೌನ್‌ ನಿರ್ಧಾರ ಮೆಚ್ಚುಗೆ ಪಡೆದಿದೆ ಕೊರೊನಾ ಎಂಬ ಮಾರಕ ಸೋಂಕು ಜನರ ಜೀವವನ್ನೇ ಹಿಂಡಿ ಹಿಪ್ಪೆ ಮಾಡುತ್ತಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈಗ ನಾವು ಪಾಲಿಸುತ್ತಿರುವ ಸಾಮಾಜಿಕ ಅಂತರ, ಸ್ವಚ್ಛತೆಯ ಶಿಸ್ತು, ಅನಿವಾರ್ಯ ಮನೆವಾಸ, ಏಕಾಂಗಿತನ (ಕ್ವಾರಂಟೈನ್‌)- ಈ ಎಲ್ಲವೂ ನಿಶ್ಚಿತವಾಗಿ ನಮಗೊಂದು ದೊಡ್ಡ ಪಾಠವಾಗಲಿದೆ. ಇದು ನಮ್ಮ ಜೀವನ ಕ್ರಮ ಮತ್ತು ಆಲೋಚನಾ ವಿಧಾನದಲ್ಲಿ ಅಗಾಧ ಬದಲಾವಣೆ ತರಬೇಕಿದೆ. ಆಗ ಮಾತ್ರ […]

Read More

ವೈದ್ಯರ ಮೇಲೆ ಹಲ್ಲೆ ಖಂಡನೀಯ: ಸಮುದಾಯಕ್ಕೆ ಹಾನಿ ಮಾಡಲಿರುವ ವರ್ತನೆ

ಕೊರೊನಾ ವೈರಸ್ ಶಂಕಿತರ ಆರೋಗ್ಯ ತಪಾಸಣೆಗಾಗಿ ತೆರಳುತ್ತಿರುವ ವೈದ್ಯಕೀಯ ಸಿಬ್ಬಂದಿಯ ಮೇಲೆ ಕೆಲವರು ಗುಂಪುಗೂಡಿ ಹಲ್ಲೆ ನಡೆಸುತ್ತಿರುವ ಘಟನೆ ದೇಶದ ಕೆಲವು ಕಡೆಗಳಲ್ಲಿ ವರದಿಯಾಗಿದೆ. ಬೆಂಗಳೂರಿನ ಒಂದು ಬಡಾವಣೆಯಲ್ಲಿ ವೈದ್ಯಕೀಯ ತಪಾಸಣೆಗೆ ಹೋದ ಆಶಾ ಕಾರ್ಯಕರ್ತರ ಮೇಲೆ ಸ್ಥಳೀಯ ನಿವಾಸಿಗಳ ಗುಂಪು ಹಲ್ಲೆ ನಡೆಸಿದೆ. ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಿವಾಸಿಗಳ ತಪಾಸಣೆಗೆ ಬಂದಿದ್ದ ಆರೋಗ್ಯ ಸೇವೆ ಸಿಬ್ಬಂದಿಯನ್ನು ಸ್ಥಳೀಯರ ಗುಂಪು ಹಿಗ್ಗಾಮುಗ್ಗಾ ಥಳಿಸಿ ಓಡಿಸಿದೆ. ಮಧ್ಯಪ್ರದೇಶದ ಸಿಲಾವತ್‌ಪುರದಲ್ಲಿ, ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ, ಉತ್ತರ ಪ್ರದೇಶದ ಮೀರತ್‌ನಲ್ಲೂ ಹೀಗೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top