ಹಿಂದೆಂದೂ ವೈದ್ಯಲೋಕ ಇಂಥದೊಂದು ಕಠೋರ, ನಿರ್ದಯಿ ವ್ಯವಸ್ಥೆಗೆ ಸಾಕ್ಷಿಯಾಗಿರಲಿಲ್ಲ. ಬೆಂಗಳೂರಿನಲ್ಲಿ ಈಗ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಹೊತ್ತುಕೊಂಡು ಆಸ್ಪತ್ರೆಗೆ ಹೋದರೂ, ಮೊದಲು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಬನ್ನಿ, ಇಲ್ಲವೇ ಸಾಯಿರಿ ಎಂಬರ್ಥದ ಉತ್ತರಗಳೇ ಸಿಗುತ್ತಿವೆ. ರಾಜ್ಯದ ಇತರ ಕಡೆಗಳ ಆಸ್ಪತ್ರೆಗಳೂ ಇದೇ ಮಾದರಿಯನ್ನು ಅನುಸರಿಸಲಾರಂಭಿಸಿವೆ. ಶುಲ್ಕದ ಮಾತು, ಪರೀಕ್ಷೆ ನಂತರ; ರೋಗಿಯ ಪ್ರಾಣ ಉಳಿಸುವ ಹೊಣೆಯನ್ನು ಮೊದಲು ಹೊರಬೇಕಾದ ಆಸ್ಪತ್ರೆಗಳು ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿವೆ. ಇದರಿಂದಾಗಿ ಕಳೆದ ಒಂದು ತಿಂಗಳಿನಲ್ಲಿ ಹತ್ತಾರು ರೋಗಿಗಳು ಆಸ್ಪತ್ರೆಗಳಿಗೆ […]
Read More
ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿಗೆ ನಮ್ಮ ದೇಶದ ಎಲ್ಲ ವಲಯಗಳೂ ಸ್ತಬ್ಧವಾಗಿವೆ. ಕೈಗಾರಿಕೆ, ಆಟೊಮೊಬೈಲ್, ಸಾರಿಗೆ, ರಿಯಲ್ ಎಸ್ಟೇಟ್ ವಲಯಗಳು ಮತ್ತು ಸೇವಾ ಕ್ಷೇತ್ರಗಳು ತತ್ತರಿಸಿದ್ದರೆ; ಉತ್ಪಾದನೆ, ಬೇಡಿಕೆ, ಪೂರೈಕೆ, ಅನುಭೋಗ, ಉಪಭೋಗ, ಹಣದುಬ್ಬರ… ಹೀಗೆ ಅರ್ಥಶಾಸ್ತ್ರದ ಎಲ್ಲ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಭಾರತದ ಜಿಡಿಪಿ ಕೂಡ ಋುಣಾತ್ಮಕವಾಗಿ ಸಾಗಲಿದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆಗಳು ಎಚ್ಚರಿಸಿವೆ. ಹೀಗಿದ್ದೂ ಭಾರತೀಯರಾದ ನಾವು ಸ್ವಲ್ಪ ಮಟ್ಟಿಗೆ ಖುಷಿ ಕೊಡುವ ಸಂಗತಿಯೊಂದಿದೆ. ಅದರಲ್ಲೂ ವಿಶೇಷವಾಗಿ ಕರ್ನಾಟಕದ ಮಟ್ಟಿಗೆ ಇದು ಧನಾತ್ಮಕವಾದ ವಿಚಾರ. ಯಾಕೆಂದರೆ, ಕರ್ನಾಟಕದಲ್ಲಿ […]
Read More
ಕೋವಿಡ್ ಸೋಂಕಿನಿಂದ ಮೃತಪಟ್ಟ ಕನಕಪುರದ ವ್ಯಕ್ತಿರೊಬ್ಬರ ಅಂತ್ಯ ಸಂಸ್ಕಾರವನ್ನು ನಗರಸಭೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದೊಂದಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ತರಬೇತಿ ಪಡೆದು ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ನಡೆಸುತ್ತಿದ್ದು, ಭಾನುವಾರ ಕೂಡ ಮೂವರ ಶವಸಂಸ್ಕಾರ ನಡೆಸಿದ್ದಾರೆ. ಕೋವಿಡ್ನಿಂದ ಯಾರೇ ಮೃತಪಟ್ಟರೂ, ಅವರ ಅಂತ್ಯಸಂಸ್ಕಾರ ನಡೆಸಲು ಪ್ರತಿ […]
Read More
ಕೊರೊನಾ ಸೋಂಕಿನ ಆತಂಕದಿಂದ ಸ್ಥಗಿತಗೊಂಡಿರುವ ಶೈಕ್ಷಣಿಕ ರಂಗಕ್ಕೆ ಮರುಜೀವ ತುಂಬುದು ನಿಜಕ್ಕೂ ಒಂದು ಸವಾಲಿನ ಕೆಲಸ. ಈ ಬಗ್ಗೆ ‘ವಿಜಯ ಕರ್ನಾಟಕ’ ನಡೆಸಿದ ವೆಬಿನಾರ್ನಲ್ಲಿ ಮಹತ್ವದ ಅಭಿಪ್ರಾಯಗಳು ಹಾಗೂ ಭರವಸೆಯ ಆಶಾಕಿರಣಗಳು ಮೂಡಿಬಂದಿವೆ. ಆನ್ಲೈನ್ ಮತ್ತು ಆಫ್ಲೈನ್ ಬೆಸೆದ ಸಂಯೋಜಿತ ಶಿಕ್ಷಣ ಭವಿಷ್ಯದ ದೃಷ್ಟಿಯಿಂದಲೂ ಅನಿವಾರ್ಯವಾಗಿರುವುದರಿಂದ ಎರಡಕ್ಕೂ ಒತ್ತು ನೀಡುವ ಹೊಸ ಸಂಯೋಜನೆಯನ್ನು ರೂಪಿಸಬೇಕು ಎಂಬುದು ಈ ಕಾರ್ಯಕ್ರಮದಲ್ಲಿ ಮೂಡಿಬಂದ ಮುನ್ನೋಟ. ಆನ್ಲೈನ್ ಶಿಕ್ಷಣ ಹಳ್ಳಿ ಹಳ್ಳಿಗೆ ತಲುಪಬೇಕೆಂದರೆ, ಇನ್ನಷ್ಟು ಇಂಟರ್ನೆಟ್ ಕ್ರಾಂತಿ ಆಗಬೇಕಾದುದು ಅಗತ್ಯ. ಅದಕ್ಕೆ […]
Read More
ದಿನ ಕಳೆದಂತೆ ಕೊರೊನಾ ಸೋಂಕಿನ ಬಗ್ಗೆ ಹೊಸ ಹೊಸ ಮಾಹಿತಿಗಳು ದೊರೆಯುತ್ತಿವೆ. ದೊರೆಯುತ್ತಿರುವ ಅಂಕಿ- ಅಂಶ, ಮಾಹಿತಿಗಳನ್ನು ಬಗೆದು ನೋಡಿದರೆ ನಾವು ಇದುವರೆಗೆ ಕೋವಿಡ್ ಬಗ್ಗೆ ನಂಬಿಕೊಂಡು ಬಂದಿರುವ ಹಲವು ಸಂಗತಿಗಳನ್ನೇ ನಿರಾಕರಿಸಬಹುದಾದ ಹಾಗಿದೆ. ಉದಾಹರಣೆಗೆ, ಕೋವಿಡ್ ಪಾಸಿಟಿವ್ ಬಂದ ಎಲ್ಲರನ್ನೂ ಸಾಂಸ್ಥಿಕ ಕ್ವಾರಂಟೈನ್ ಮಾಡಬೇಕು ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ ಈಗ ನಮ್ಮ ರಾಜ್ಯ ಸರಕಾರ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಕೂಡ, ಲಕ್ಷಣಗಳಿಲ್ಲದ ಸೋಂಕಿತರು ಅಷ್ಟೇನೂ ಅಪಾಯದ ಅಂಚಿನಲ್ಲಿರುವವರಲ್ಲ, ಹಾಗಾಗಿ ಅವರು ಮನೆ ಕ್ವಾರಂಟೈನ್ನಲ್ಲಿದ್ದರೆ […]
Read More
ಕೊರೊನಾ ಸೋಂಕು ಪತ್ತೆ ಹಾಗೂ ಸಾವಿನ ಪ್ರಕರಣಗಳಲ್ಲಿ ಕಳೆದ ಹದಿನೈದು ದಿನಗಳಿಂದ ಪ್ರತಿದಿನವೂ ಒಂದೊಂದು ಹೊಸ ದಾಖಲೆ ಸೃಷ್ಟಿಯಾಗುತ್ತಲೇ ಇದೆ. ಬುಧವಾರ ರಾಜ್ಯದಲ್ಲಿ ಒಟ್ಟಾರೆ 87 ಸಾವು ಹಾಗೂ ರಾಜಧಾನಿಯಲ್ಲೇ 60 ಮಂದಿ ಸತ್ತಿರುವುದು ವರದಿಯಾಗಿದೆ. ಈ ಸಾವುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಇವರಲ್ಲಿ ಎಲ್ಲರೂ ಒಂದಲ್ಲ ಒಂದು ಕೋಮೋರ್ಬಿಡಿಟೀಸ್ ಅಥವಾ ಪೂರ್ವಕಾಯಿಲೆಗಳಿಂದ ನರಳುತ್ತಿದ್ದುದು ಖಚಿತವಾಗಿದೆ. ಹೆಚ್ಚಿನ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕಿಡ್ನಿ ಸಮಸ್ಯೆ ಮತ್ತು ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದವರಿಗೆ ಕೊರೊನಾ ಸೋಂಕಿನ ಪರಿಣಾಮ ಈ ಕಾಯಿಲೆಗಳು ಉಲ್ಬಣಾವಸ್ಥೆಗೇರಿ […]
Read More
ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನದಲ್ಲಿ ಕಳೆದ ವರ್ಷಕ್ಕಿಂತ ಶೇ.9ರಷ್ಟು ಹೆಚ್ಚಿನ ಹಾಗೂ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಕಡಿಮೆ ಫಲಿತಾಂಶ ಬಂದಿದೆ. ಈ ಬಾರಿ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚು ಕಡಿಮೆ ಹತ್ತಿರದಲ್ಲೇ ಗ್ರಾಮೀಣ ವಿದ್ಯಾರ್ಥಿಗಳು ಸಹ ಫಲಿತಾಂಶ ಪಡೆದಿರುವುದು ಒಂದು ಅಚ್ಚರಿಯ ಹಾಗೂ ಶ್ಲಾಘನೀಯ ವಿಚಾರ. ರೂಢಿಯಂತೆ ಕರಾವಳಿಯ ಜಿಲ್ಲೆಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿವೆ. ಗ್ರಾಮೀಣ […]
Read More
ಗಡಿಯಲ್ಲಿ ಚೀನಾ ಬೆದರಿಕೆ, ಗಡಿಯೊಳಕ್ಕೆ ಕೊರೊನಾ ವೈರಸ್ ಹಾವಳಿ ಉಂಟು ಮಾಡಿರುವ ನಕಾರಾತ್ಮಕ ಪರಿಣಾಮಗಳ ನಡುವೆಯೇ ಭಾರತದ ಆರ್ಥಿಕತೆಗೆ ಹೊಸ ಹುಮ್ಮಸ್ಸು ತರುವ ಬೆಳವಣಿಗೆ ಕಂಡು ಬಂದಿದೆ. ಜಗತ್ತಿನ ಅತಿದೊಡ್ಡ ಟೆಕ್ ಕಂಪನಿ ಗೂಗಲ್ ಮುಂಬರುವ 5ರಿಂದ 7 ವರ್ಷಗಳಲ್ಲಿ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ಘೋಷಣೆ ಮಾಡಿದೆ. ಸೋಮವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಮೂಲದವರೇ ಆದ ಗೂಗಲ್ ಸಿಇಒ ಸುಂದರ್ ಪಿಚೈ ಜೊತೆ ನಡೆಸಿದ ಮಾತುಕತೆಯ ಬೆನ್ನೆಲ್ಲೇ ಆ […]
Read More
ಕಳೆದ ವಾರ ಉತ್ತರ ಪ್ರದೇಶದಲ್ಲಿ ಎಂಟು ಪೊಲೀಸರನ್ನು ಹತ್ಯೆಗೈದಿದ್ದ ಕುಖ್ಯಾತ ಗ್ಯಾಂಗ್ಸ್ಟರ್ ವಿಕಾಸ್ ದುಬೆಯನ್ನು ಶುಕ್ರವಾರ ಬೆಳಗ್ಗೆ ಹೊಡೆದುರುಳಿಸಲಾಗಿದೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸಿಕ್ಕಿಬಿದ್ದ ದುಬೆಯನ್ನು ಕಾನ್ಪುರಕ್ಕೆ ಕರೆತರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರಿನಿಂದ ತಪ್ಪಿಸಿಕೊಂಡು ಪೊಲೀಸರ ಗನ್ ಸೆಳೆದು ಅವರ ಮೇಲೆ ಗುಂಡಿಕ್ಕಿ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಗುಂಡಿಕ್ಕಿ ಕೊಂದುಹಾಕಿದ್ದಾರೆ. ಪೊಲೀಸರ ಈ ನಡೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಇದೊಂದು ನಕಲಿ ಎನ್ಕೌಂಟರ್ ಎಂದು ಆರೋಪಿಸಿರುವ ಪ್ರತಿಪಕ್ಷಗಳು ಸುಪ್ರೀಂ ಕೋರ್ಟ್ ನಿಗಾದಲ್ಲಿ […]
Read More
ರಾಜ್ಯದಲ್ಲಿ ಕೊರೊನಾ ಸೋಂಕಿನ ಏರಿಕೆಯಿಂದ ಆಗಿರುವ ಹಲವು ದುಷ್ಪರಿಣಾಮಗಳ ನಡುವೆ, ವೈದ್ಯರ ಕೊರತೆಯೂ ಒಂದು ಹಾಗೂ ಹೆಚ್ಚು ಗಂಭೀರವಾದುದು. ಸರಕಾರಿ ಆಸ್ಪತ್ರೆಗಳಲ್ಲಿ ಮೊದಲೇ ವೈದ್ಯರ ಕೊರತೆಯಿದೆ. ನಿಗದಿತ ಸರಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೇವೆ ಕಡ್ಡಾಯಗೊಂಡಿರುವ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಒಂದು ವಾರ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿದರೆ ಎರಡು ವಾರ ಐಸೋಲೇಶನ್ ಆಗಬೇಕಿರುವುದರಿಂದ ವೈದ್ಯರ ಸಂಖ್ಯೆ ಸಹಜವಾಗಿಯೇ ಇಳಿಮುಖವಾಗುತ್ತದೆ. ಅದರಲ್ಲೂ ಕೆಲವು ವೈದ್ಯರಿಗೆ ಸೋಂಕು ತಗುಲಿರುವುದರಿಂದ ಕ್ವಾರಂಟೈನ್ ಆಗಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಕೆಲವೇ ಆಸ್ಪತ್ರೆಗಳು ಮಾತ್ರ […]
Read More