– ಶ್ರೀ ತರಳಬಾಳು ಜಗದ್ಗುರು ಡಾ|| ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಸಿರಿಗೆರೆ ಅಮೃತವ ಕಡೆವಲ್ಲಿ, ವಿಷವಟ್ಟಿ ಸುಡುವಲ್ಲಿ ದೇವರೆಂಬವರೆತ್ತ ಹೋದರೇನಿಂ ಭೋ? ಅಂದೊಮ್ಮೆ ಓಡಿಹೋಗಿ ಆ ಶಿವನ ಮೊರೆಯ ಹೊಗುವಂದು ದೇವರೆಂಬವರೆತ್ತ ಹೋದರೇನಿಂ ಭೋ? ಪುರಾಣ ಪ್ರಸಿದ್ಧವಾದ ಈ ಸಮುದ್ರಮಥನ ಕಥಾಪ್ರಸಂಗವನ್ನು ಉಲ್ಲೇಖಿಸಿ ಬಸವಣ್ಣನವರು ಈ ವಚನದಲ್ಲಿ ವಿಡಂಬನೆ ಮಾಡಿದ್ದಾರೆ. ದೇವತೆಗಳು ಮತ್ತು ರಾಕ್ಷಸರು ಸಮುದ್ರದ ಒಡಲಿನಲ್ಲಿದ್ದ ಅಮೃತವನ್ನು ಪಡೆಯಲು ಒಟ್ಟುಗೂಡಿ ಪ್ರಯತ್ನ ಮಾಡಿದರು ಎಂಬುದು ಪುರಾಣ ಪ್ರಸಿದ್ಧವಾದ ಕಥೆ. ಇದಕ್ಕಾಗಿ ಮಂದರಗಿರಿಯನ್ನೇ ಕಡೆಗೋಲನ್ನಾಗಿ ಮಾಡಿಕೊಂಡರು. ಸರ್ಪರಾಜನಾದ […]
Read More
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಯಾವುದೇ ಆತಂಕವಿಲ್ಲದೆ, ಸುಸಜ್ಜಿತವಾಗಿ ಹಾಗೂ ಅಹಿತಕರ ಘಟನೆಗಳಿಲ್ಲದೆ ನೆರವೇರಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮತ್ತು ಹೊರಗೆ ಸಾಮಾಜಿಕ ಅಂತರ, ಆರೋಗ್ಯ ನಿಗಾಕ್ಕೆ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಗೇಟ್ಗಳ ಬಳಿಯೇ ವಿದ್ಯಾರ್ಥಿಗಳಿಗೆ ದೇಹದ ಉಷ್ಣಾಂಶ ಪರೀಕ್ಷೆ, ಸ್ಯಾನಿಟೈಸರ್ನಿಂದ ಸ್ವಚ್ಛತೆ, ಪ್ರತಿ ವಿದ್ಯಾರ್ಥಿಗೂ ಮಾಸ್ಕ್ ಕಡ್ಡಾಯ, ಎಲ್ಲಾ ಕೊಠಡಿಗಳು ಮತ್ತು ಪೀಠೋಪಕರಣಗಳ ಸಂಪೂರ್ಣ ಸ್ಯಾನಿಟೈಸೇಷನ್, ಕಂಟೈನ್ಮೆಂಟ್ ವಲಯದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ, ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿದ್ದವರಿಗೂ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ […]
Read More
ಮುಂದಿನ ದಿನಗಳಲ್ಲಿ ಆರ್ಥಿಕತೆಯ ಉತ್ತೇಜನಕ್ಕೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕಿವಿಮಾತು ಹೇಳಿದ್ದಾರೆ. ದೇಶದಲ್ಲಿನ ಕೋವಿಡ್-19 ಪರಿಸ್ಥಿತಿ, ಅನ್ಲಾಕ್ 1.0 ಜಾರಿಯ ಪರಿಣಾಮ, ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು 15 ರಾಜ್ಯಗಳ ಸಿಎಂಗಳೊಂದಿಗೆ ಬುಧವಾರ ನಡೆಸಿದ ವಿಡಿಯೊ ಕಾನ್ಫರೆನ್ಸ್ನಲ್ಲಿ ಅವರು ಹಲವು ಸಲಹೆಗಳನ್ನು ನೀಡಿದ್ದಾರೆ. ಕೋವಿಡ್ ಸಂದರ್ಭ ಬಳಸಿಕೊಂಡು ಆರೋಗ್ಯ ಸೇವೆಗಳ ವಿಸ್ತರಣೆಗೆ ನಾವು ಒತ್ತು ನೀಡಬೇಕೆಂಬ ಆಶಯವನ್ನೂ ಅವರು ಪ್ರತಿಪಾದಿಸಿದ್ದಾರೆ. ಮತ್ತೊಮ್ಮೆ ಲಾಕ್ಡೌನ್ ಮಾಡಲಾಗುವುದಿಲ್ಲ […]
Read More
ಐದು ವಾರಗಳಿಂದ ಪೂರ್ವ ಲಡಾಖ್ ಗಡಿಯಲ್ಲಿ ನಿಂತಿದ್ದ ಭಾರತ ಮತ್ತು ಚೀನಾ ಸೇನಾಪಡೆಗಳು ಹಿಂದೆ ಸರಿಯುತ್ತಿದ್ದ ಹೊತ್ತಿನಲ್ಲಿಯೇ ಸಂಘರ್ಷ ಭುಗಿಲೆದ್ದಿದ್ದು, ಕರ್ನಲ್ ಸೇರಿದಂತೆ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಹೇಳಲಾಗಿದೆ. ಗಡಿ ಸಂಘರ್ಷ ಶಮನಗೊಳಿಸಲು ರಾಜತಾಂತ್ರಿಕ ಮತ್ತು ಸೇನಾಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಮತ್ತೆ ಉದ್ವಿಗ್ನತೆ ತಲೆದೋರಿರುವುದು ಗಡಿ ಬಿಕ್ಕಟ್ಟನ್ನು ಮತ್ತಷ್ಟು ಜಟಿಲಗೊಳಿಸಿದೆ. ಚೀನಾ ಭಾರತದ ಜೊತೆಗೆ ಗಡಿಯ ವಿಚಾರದಲ್ಲಿ ನಿತ್ಯ ರಂಪಾಟ ಮಾಡಿಕೊಂಡೇ ಬರುತ್ತಿದೆ. ಜೊತೆಗೆ, ಪಾಕಿಸ್ತಾನ ಮತ್ತು ನೇಪಾಳದಂಥ ರಾಷ್ಟ್ರಗಳನ್ನೂ ಭಾರತದ ವಿರುದ್ಧ […]
Read More
ಸೇವೆಗಳನ್ನು ಎಲ್ಲರೂ ಡಿಜಿಟಲೀಕರಣ ಮಾಡುತ್ತ ಕಾಲದಲ್ಲಿ ಮುಂದೆ ಹೋಗುತ್ತಿದ್ದರೆ, ಕರ್ನಾಟಕ ರಾಜ್ಯ ಸರಕಾರ ಮಾತ್ರ ಹಿಂದಕ್ಕೆ ಹೋಗಲು ಹೊರಟಿದೆ! ಕಂದಾಯ ದಾಖಲೆಗಳನ್ನು ಆನ್ಲೈನ್ ಮೂಲಕ ನೀಡುತ್ತಿದ್ದ ‘ಕಾವೇರಿ’ ಸೇವೆಯನ್ನು ಸ್ಥಗಿತಗೊಳಿಸಲು ಇಲಾಖೆ ನಿರ್ಧರಿಸಿದೆ. ಋುಣಭಾರ ಪ್ರಮಾಣ ಪತ್ರ (ಇಸಿ) ಹಾಗೂ ನೋಂದಾಯಿತ ದಸ್ತಾವೇಜುಗಳ ದೃಢೀಕೃತ ನಕಲು(ಆರ್ಟಿಸಿ)ಗಳನ್ನು ಈ ಕಾವೇರಿ ಸೇವೆಯ ಮೂಲಕವೇ ಹೆಚ್ಚಿನ ಗ್ರಾಹಕರು ಸುಲಭವಾಗಿ ಪಡೆಯುತ್ತಿದ್ದರು. ಹಲವೊಮ್ಮೆ ಇದು ಸರ್ವರ್ ಡೌನ್ ಸಮಸ್ಯೆಯಿಂದ ಬಳಲುತ್ತಿತ್ತು. ನೆಗಡಿಯಾದರೆ ಮೂಗು ಕೊಯ್ದರು ಎಂಬಂತೆ, ಆನ್ಲೈನ್ ಸೇವೆಯನ್ನೇ ನಿಲ್ಲಿಸುವುದು ಸರಿಯಲ್ಲ. […]
Read More
ಕರ್ನಾಟಕ ಭೂಸುಧಾರಣಾ ಕಾಯಿದೆ-1974ನ್ನು ತಿದ್ದುಪಡಿ ಮಾಡಲು ರಾಜ್ಯ ಸರಕಾರ ಮುಂದಾಗಿದ್ದು, ಸಂಪುಟ ಸಭೆ ಈ ಕುರಿತು ತೀರ್ಮಾನ ಕೈಗೊಂಡಿದೆ. ಇದರ ಮುಖ್ಯಾಂಶವೆಂದರೆ, ಕೃಷಿಕರಲ್ಲದವರೂ ಇನ್ನು ಮುಂದೆ ಕೃಷಿ ಭೂಮಿ ಖರೀದಿಸಬಹುದು. ಇದುವರೆಗೆ ಕೃಷಿಕ ಕುಟುಂಬದ ಹಿನ್ನೆಲೆ ಹೊಂದಿದವರು ಮಾತ್ರ ಕೃಷಿಭೂಮಿ ಖರೀದಿಸುವ ಅವಕಾಶವಿತ್ತು. ಈಗ ಕೃಷಿಯಲ್ಲಿ ಆಸಕ್ತಿ ಹೊಂದಿರುವ, ಆದರೆ ಕೃಷಿಭೂಮಿ ದಾಖಲೆಗಳನ್ನು ಹೊಂದಿಲ್ಲದವರು ಕೂಡ ಜಮೀನು ಖರೀದಿಸಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು ಮತ್ತು ಉದ್ಯಮಿಗಳೂ ಖರೀದಿಸಬಹುದು ಎಂಬುದು ಈ ಕಾಯಿದೆಯ ಅತ್ಯಂತ ಧನಾತ್ಮಕ ಅಂಶ. ಯಾಕೆಂದರೆ, […]
Read More
ರಾಜ್ಯದಲ್ಲಿ ಶಿಕ್ಷಣ ನೀಡುವ ಎಲ್ಲ ಶಾಲೆಗಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕು ಎಂಬ ಒಂದು ಕನಸು ಈಗಾಗಲೇ ಕುಸಿದುಬಿದ್ದಿದೆ. ಸುಪ್ರೀಂ ಕೋರ್ಟ್ ಕೂಡ, ಶಿಕ್ಷಣ ಮಾಧ್ಯಮದ ಆಯ್ಕೆ ಹೆತ್ತವರಿಗೆ ಬಿಟ್ಟದ್ದು ಎಂದು ಹೇಳುವ ಮೂಲಕ ಇದಕ್ಕೆ ತೆರೆ ಎಳೆದಿತ್ತು. ಆದರೆ, ರಾಜ್ಯದಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಂದು ಶಾಲೆಯೂ ಸ್ಥಳೀಯ ಭಾಷೆಯಾದ ಕನ್ನಡವನ್ನು ಒಂದು ಭಾಷೆಯಾಗಿ ಕಡ್ಡಾಯವಾಗಿ ಕಲಿಸಬೇಕು ಎಂಬುದನ್ನಾದರೂ ಆಗ್ರಹಪೂರ್ವಕವಾಗಿ ಸ್ಥಾಪಿಸುವ ಹಕ್ಕು ಕನ್ನಡಿಗರಿಗೆ ಇದೆ. ಇದೇ ಹಿನ್ನೆಲೆಯಲ್ಲಿ, 2026-27ನೇ ಸಾಲಿನ ಹೊತ್ತಿಗೆ ರಾಜ್ಯದ ಎಲ್ಲಾ ಶಾಲೆಗಳು […]
Read More
ಕೊರೊನಾ ಕಾರಣದಿಂದ ಮಾರ್ಚ್ ಹಾಗೂ ಏಪ್ರಿಲ್ನಲ್ಲಿ ಮಂಕಾಗಿದ್ದ ದೇಶದ ಆರ್ಥಿಕತೆ, ಚೇತರಿಕೆ ಹಾಗೂ ಉತ್ಸಾಹದ ಎಲ್ಲ ಸುಳಿವುಗಳನ್ನೂ ತೋರಿಸುತ್ತಿದೆ. ಉದಾಹರಣೆಗೆ, ಕಳೆದ ಒಂದು ವಾರದಿಂದ ಷೇರು ಮಾರುಕಟ್ಟೆಯಲ್ಲಿ ತುಂಬು ಉತ್ಸಾಹ ಕಾಣಿಸುತ್ತಿದ್ದು, ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕಗಳು ಸತತ ಏರಿಕೆ ತೋರಿಸುತ್ತಿವೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಪಿಐ) ದೇಶದಲ್ಲಿ ಜೂನ್ ಮೊದಲ ವಾರದಲ್ಲಿ 22,000 ಕೋಟಿ ರೂ.ಗಳಷ್ಟು ಹೂಡಿಕೆ ಮಾಡಿದ್ದಾರೆ. ಏಪ್ರಿಲ್ನಲ್ಲಿ ಸಂಪೂರ್ಣ ಕುಸಿದಿದ್ದ ಉದ್ಯೋಗ ಮಾರುಕಟ್ಟೆಯಲ್ಲಿ, ಮೇ ತಿಂಗಳ ಮೊದಲ ವಾರದಲ್ಲಿ 21 ದಶಲಕ್ಷ ಉದ್ಯೋಗಗಳು […]
Read More
ಎಸ್ಎಸ್ಎಲ್ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಭವಿಷ್ಯದ ಶಿಕ್ಷಣದ ಅಡಿಪಾಯವನ್ನು ಹಾಕುತ್ತದೆ. ಆದರೆ, ಕೊರೊನಾ ಎಫೆಕ್ಟ್ನಿಂದ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಬೇಕೆ, ಬೇಡವೆ ಎಂದು ತೀರ್ಮಾನಿಸವುದರಲ್ಲಿ ಕಾಲ ಕಳೆದುಹೋಯಿತು. ಕೊನೆಗೂ ಜೂ.25ರಿಂದ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಯಿತು. ಯಾವುದೇ ಕಾರಣಕ್ಕೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ಕುಮಾರ್ ಹೇಳಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ನಡೆಸುವುದು ಒಳ್ಳೆಯ ಬೆಳವಣಿಗೆಯೇ ಸರಿ. […]
Read More
ರಾಜ್ಯದಿಂದ ತೆರವಾಗಿರುವ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಅಭ್ಯರ್ಥಿಗಳ ಹೆಸರು ಬಹುತೇಕ ಅಂತಿಮಗೊಂಡಿದೆ. ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ನಿಂದ ಎಚ್.ಡಿ.ದೇವೇಗೌಡರು ಅಭ್ಯರ್ಥಿಗಳಾಗಿರುವುದರಲ್ಲಿ ಏನೂ ಅಚ್ಚರಿಯಿಲ್ಲ. ಈಗಾಗಲೇ ಇವರ ಪ್ರಾತಿನಿಧ್ಯವನ್ನು ಜನ ದಶಕಗಳಿಂದ ಕಂಡಿದ್ದಾರೆ. ಬಿಜೆಪಿಯಿಂದಲೂ ಬಲಾಢ್ಯರಾದ ಹಲವು ವ್ಯಕ್ತಿಗಳ ಹೆಸರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೇಳಿಬಂದಿತ್ತು. ಆದರೆ ಅಚ್ಚರಿ ಎನ್ನುವಂತೆ ಅನಾಮಿಕರಾದ ಇಬ್ಬರ ಆಯ್ಕೆಯಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ ಗಸ್ತಿ ಅವರಿಗೆ ಟಿಕೆಟ್ ಪ್ರಕಟಿಸಿ ಬಿಜೆಪಿ […]
Read More