ರಾಜಕಾರಣಿಗಳ ಬಗ್ಗೆ ಜನರಲ್ಲಿ ಯಾಕಿಷ್ಟು ಆಕ್ರೋಶ? ಮರಳುಗಾಡಿನಲ್ಲಿ ಓಯಸಿಸ್ನಂತೆ ರವಿಯಂತಹ ಒಬ್ಬ ದಕ್ಷ, ಜನಾನುರಾಗಿ ಅಧಿಕಾರಿ ಸಿಕ್ಕರೆ ಜನರು ಯಾಕಿಷ್ಟು ಆರಾಧಿಸುತ್ತಾರೆ ಮತ್ತು ಮನೆಮಗನಂತೆ ಪ್ರೀತಿಸುತ್ತಾರೆಂಬುದನ್ನು ಒಂದು ಕ್ಷಣವಾದರೂ ಆಲೋಚನೆ ಮಾಡುತ್ತೀರಾ ಮುಖ್ಯಮಂತ್ರಿಗಳೇ? ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೇ… ಈ ಸಂದರ್ಭದಲ್ಲಿ ಬೇರಿನ್ನೇನನ್ನೂ ಬರೆಯುವ ಮನಸ್ಥಿತಿಯಲ್ಲಿ ನಾವಿಲ್ಲ್ಲ. ಇಲ್ಲಿ ನಾವು ಅಂದರೆ ಪತ್ರಕರ್ತ ಸಮುದಾಯದವರು. ದಕ್ಷ ಐಎಎಸ್ ಅಧಿಕಾರಿ ಎಂದೇ ಹೆಸರಾಗಿದ್ದ ಡಿ.ಕೆ ರವಿ ಅವರ ಅಕಾಲಿಕ ಸಾವು ಉಂಟುಮಾಡಿರುವ ನೋವಿನ ಪರಿಣಾಮವದು. ಬಹುಶಃ ಬೇರೆ ಪತ್ರಕರ್ತರ ಮನಸ್ಥಿತಿಯೂ […]