– ಸುಧೀಂದ್ರ ಹಾಲ್ದೊಡ್ಡೇರಿ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗದ್ವಿಖ್ಯಾತ ವಿದ್ಯಾಸಂಸ್ಥೆ ಭಾರತೀಯ ವಿಜ್ಞಾನ ಮಂದಿರ (ಐಐಎಸ್ಸಿ) ನಿಮಗೆ ಗೊತ್ತು. ನವೀನ ವಿಜ್ಞಾನ-ತಂತ್ರಜ್ಞಾನ ಕನಸುಗಳನ್ನು ಹೊತ್ತಯುವ ಪ್ರತಿಭಾವಂತರಿಗೆ ಅಗತ್ಯ ಸಂಪನ್ಮೂಲಗಳನ್ನು, ಸಾಧನ-ಸಲಕರಣೆಗಳನ್ನು ಹಾಗೂ ವಿದ್ವಜ್ಜನರ ಮಾರ್ಗದರ್ಶನವನ್ನು ನೀಡಿ, ಸಾರ್ವತ್ರಿಕ ಒಳಿತಿಗೆ ಬಳಕೆಯಾಗಬಲ್ಲ ಉತ್ಪನ್ನಗಳ ಅಭಿವೃದ್ಧಿಗೆ ನೆರವಾಗುವಉದ್ದಿಶ್ಯ ಇಲ್ಲಿನ ‘ಸೊಸೈಟಿ ಫಾರ್ ಇನ್ನೋವೇಶನ್ ಆ್ಯಂಡ್ ಡೆವಲಪ್ಮೆಂಟ್’ ಒಕ್ಕೂಟದ್ದು. ಕೆಲ ವರ್ಷಗಳ ಹಿಂದೆ ವೈಮಾಂತರಿಕ್ಷ ಕ್ಷೇತ್ರದ ಉತ್ಸಾಹಿ ಸಮೂಹವೊಂದು ದೇಶದ ಹೆಮ್ಮೆಯ ಲಘು ಯುದ್ಧ ವಿಮಾನ ‘ತೇಜಸ್’ನ ವಿನ್ಯಾಸಗಾರ ಡಾ.ಕೋಟಾ ಹರಿನಾರಾಯಣ ಅವರ […]
Read More
ಭಾರತದಲ್ಲಿ ಕೊರೊನಾ ವೈರಸ್ ಮರಣ ಮೃದಂಗ ಬಾರಿಸಲು ಆರಂಭಿಸಿದೆ. ಲಾಕ್ಡೌನ್ನ ಸಂದರ್ಭದಲ್ಲಿ ಇದ್ದುದಕ್ಕೂ ಈಗಿನ ಸನ್ನಿವೇಶಕ್ಕೂ ವ್ಯತ್ಯಾಸ ಎದ್ದು ಕಾಣುತ್ತಿದೆ. ದಿಲ್ಲಿ ಹಾಗೂ ಮಹಾರಾಷ್ಟ್ರಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯನ್ನು ನಿಭಾಯಿಸಲು ಸಾಧ್ಯವಾಗದೆ ಖಾಸಗಿ ವ್ಯವಸ್ಥೆಯ ಮೊರೆ ಹೋಗಲಾಗುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ತೀವ್ರ ಸೋಂಕಿತರಿಗೆ ಐಸಿಯುಗಳು ಸಿಗುತ್ತಿಲ್ಲ. ಇಂಥ ಸನ್ನಿವೇಶದಲ್ಲಿ ಇತರ ದೇಶಗಳಲ್ಲಿ ಪರಿಸ್ಥಿತಿ ಹೇಗಿದೆ? ಅಲ್ಲೂ ಕೊರೊನಾ ಕೇಸುಗಳಲ್ಲಿ ಏರುಮುಖವಿದೆಯೇ ಅಥವಾ ಇಳಿಮುಖವಾಗುತ್ತಿದೆಯೇ? ಅಲ್ಲಿನ ಲಾಕ್ಡೌನ್ ನಂತರದ ಸಾಮಾಜಿಕ- ಆರ್ಥಿಕ ಸನ್ನಿವೇಶಗಳು ಹೇಗಿವೆ? ಒಂದು ನೋಟ ಇಲ್ಲಿದೆ. […]
Read More
ಜಾಗತಿಕ ವಾಣಿಜ್ಯ, ಆರ್ಥಿಕ ಸಮೀಕರಣವನ್ನು ತಿದ್ದಿ ಬರೆಯುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಾಗಿದ್ದಾರೆ. ಜಿ7 ಗಂಪಿನಲ್ಲಿ ಭಾರತವನ್ನೂ ಸೇರಿಸಿಕೊಳ್ಳಬೇಕು ಎಂಬುದು ಅವರ ವಾದ. ಇದು ಯಾಕೆ ಹಾಗೂ ಇದರ ಪರಿಣಾಮಗಳೇನು? ಜಿ7 ದೇಶಗಳ ಈ ವರ್ಷದ (46ನೇ) ಶೃಂಗಸಭೆ ಜೂನ್ 10- 12ರಂದು ಅಮೆರಿಕದ ಕ್ಯಾಂಪ್ ಡೇವಿಡ್ನಲ್ಲಿ ನಡೆಯಬೇಕಿತ್ತು. ಆದರೆ ಅದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೂಡಿದ್ದಾರೆ. ಅದಕ್ಕೆ ಅವರು ನೀಡಿದ ಕಾರಣ: ‘‘ಹೊಸ ಜಾಗತಿಕ ಸನ್ನಿವೇಶದಲ್ಲಿ ಜಿ7 ಎಂಬುದು ಅಪ್ರಸ್ತುತ ಸಂಘಟನೆಯಾಗಿದೆ. ಭಾರತ, […]
Read More
ಡೋಂಟ್ ವರಿ, ಎಲ್ಲ ಬಾಗಿಲುಗಳೂ ಮುಚ್ಚಿಲ್ಲ! ಲಾಕ್ಡೌನ್ ನಡುವೆಯೂ ಹಲವು ವಲಯಗಳಲ್ಲಿ ಚುರುಕಿನ ವಹಿವಾಟು ಕೊರೊನಾಘಾತದ ನಡುವೆಯೂ ಆಶಾಕಿರಣ ನಾನಾ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಸೃಷ್ಟಿ ದಿನ ಬಳಕೆ ವಸ್ತು ತಯಾರಿ ಕಂಪನಿಗಳ ಷೇರು ವೌಲ್ಯ ವೃದ್ಧಿ, ಔಷಧ ರಫ್ತಿನಿಂದ ಭಾರಿ ಲಾಭ – ಕೇಶವ ಪ್ರಸಾದ್ ಬಿ. ಬೆಂಗಳೂರು ಕೊರೊನಾ ವೈರಸ್ ದೇಶದ ಆರ್ಥಿಕತೆ ಮೇಲೆ ಭಾರಿ ಪ್ರಹಾರ ಮಾಡಿದೆ. ಸುದೀರ್ಘ ಲಾಕ್ಡೌನ್ನಿಂದಾಗಿ ಕೈಗಾರಿಕೋದ್ಯಮಕ್ಕೆ ಗರ ಬಡಿದಂತಾಗಿರುವುದು ನಿಜ. ಹಾಗಂತ ಪೂರ್ಣ ನಿರಾಶರಾಗಬೇಕಿಲ್ಲ. ಕೊರೊನಾ ಬಿಕ್ಕಟ್ಟು ಹಲವು […]
Read More