-ಹೆಚ್ಚಿದ ಉತ್ಪಾದನೆ, ಕುಸಿದ ಬೇಡಿಕೆ-ಹೆಚ್ಚಿದ ಉತ್ಪಾದನೆ, ಕುಸಿದ ಬೇಡಿಕೆ-ಶಾಲೆ, ಹೋಟೆಲ್ಗಳಿಂದ ಡಿಮಾಂಡಿಲ್ಲ. ಸಂತೋಷ್ ಕಾಚಿನಕಟ್ಟೆ ಶಿವಮೊಗ್ಗ. ರಾಜ್ಯದೆಲ್ಲೆಡೆ ಜನತೆಗೆ ಕ್ಷೀರಾಮೃತ ಉಣಿಸುವ, ರೈತರು ಮತ್ತು ಹೈನುಗಾರಿಕೆ ಪಾಲಿನ ಜೀವಾಳ ಎನಿಸಿದ ರಾಜ್ಯ ಸಹಕಾರ ಹಾಲು ಉತ್ಪಾದಕರ ಒಕ್ಕೂಟ(ಕೆಎಂಎಫ್)ಕ್ಕೂ ಕೊರೊನಾ ಸಂಕಷ್ಟ ತಂದಿಟ್ಟಿದೆ. ರೈತರಿಂದ ಹಾಲನ್ನು ಸಂಗ್ರಹಿಸಿ ಪೇಟೆ, ಪಟ್ಟಣಗಳಲ್ಲಿನ ಗ್ರಾಹಕರಿಗೆ ತಲುಪಿಸುವ ಸೇತುವೆಯಾಗಿ ಕೆಲಸ ಮಾಡುವ ಹಾಲು ಒಕ್ಕೂಟಕ್ಕೆ ಕೊರೊನಾ ಆರ್ಥಿಕ ಪೆಟ್ಟು ನೀಡಿದೆ. ಒಂದೆಡೆ ಹಾಲಿನ ಉತ್ಪಾದನೆ ಹೆಚ್ಚಾದ ಸಂತಸ ಮೂಡಿಸಿದರೆ, ಮತ್ತೊಂದು ಕಡೆ ಉತ್ಪಾದನೆಯಾದ […]