ಪ್ರಾದೇಶಿಕ ವೈವಿಧ್ಯತೆಯನ್ನು ಕೇಂದ್ರ ಗೌರವಿಸಿದರೆ ಒಕ್ಕೂಟ ವ್ಯವಸ್ಥೆ ಬಲಿಷ್ಠ-

ಸ್ಥಳೀಯ ನಾಯಕತ್ವವನ್ನು ಮರೆತು ಹೈಕಮಾಂಡ್ ಪಾಳೇಗಾರಿಕೆ ಮೆರೆದವರು ದುಷ್ಪಲ ಉಂಡಿದ್ದಾರೆ, ನೋಡಿ ಪಾಠ ಕಲಿಯೋಣ   ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ, ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ, ಇಂಗ್ಲಿಷ್ ಭಾಷೆಗಳ ಪಾರಮ್ಯ, ದಿಲ್ಲಿಕೇಂದ್ರಿತ ಹೈಕಮಾಂಡ್ ಸಂಸ್ಕೃತಿಯಂಥ ವಿಷಯಗಳು ಚರ್ಚೆಯ ಸಂಗತಿಗಳಾಗುತ್ತಿರುವ ಹೊತ್ತಲ್ಲಿ, ಎಂದಿನಂತೆ ಪ್ರತ್ಯೇಕತೆಯ ಸೊಲ್ಲುಗಳು, ತಾರತಮ್ಯ ನೀತಿಯ ಬಗೆಗಿನ ಬೇಸರದ ಬೇಗುದಿ ಅಲ್ಲಲ್ಲಿವ್ಯಕ್ತವಾಗುತ್ತಿವೆ. ಇದು ಸಹಜ. ಆದರೆ, ಇಂಥಾ ಸಂಗತಿಗಳನ್ನು ಸೂಕ್ಷ್ಮವಾಗಿ ಗಮನಿಧಿಸಬೇಕು. ಈ ಎಲ್ಲಆಕ್ರೋಶ, ಬೇಗುದಿಗಳ ನೆಲೆ, ಅವುಗಳ ಉದ್ದೇಶ ಒಂದೇ ಆಗಿರುವುದಿಲ್ಲ. […]

Read More

ಸಹಕಾರ ಬ್ಯಾಂಕ್‌ಗಳು ಆರ್‌ಬಿಐ ಉಸ್ತುವಾರಿಗೆ

– ಹಗರಣವಾದರೆ ಠೇವಣಿದಾರರ ಹಿತರಕ್ಷಣೆಗೆ ಅನುಕೂಲ – ಸುಗ್ರೀವಾಜ್ಞೆ ತರಲು ಕೇಂದ್ರ ಸಚಿವ ಸಂಪುಟ ನಿರ್ಧಾರ. ಹೊಸದಿಲ್ಲಿ: ಠೇವಣಿದಾರರ ಹಿತ ರಕ್ಷಣೆಯ ನಿಟ್ಟಿನಲ್ಲಿ ದೇಶದಲ್ಲಿರುವ ನಗರ ಸಹಕಾರ ಬ್ಯಾಂಕ್‌ಗಳು ಹಾಗೂ ಅಂತರಾಜ್ಯ ಸಹಕಾರ ಬ್ಯಾಂಕ್‌ಗಳನ್ನು ಸುಗ್ರೀವಾಜ್ಞೆಯ ಮೂಲಕ ಆರ್‌ಬಿಐನ ಮೇಲುಸ್ತುವಾರಿ ವ್ಯಾಪ್ತಿಗೆ ತರಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದಿಸಿದೆ. ಕರ್ನಾಟಕದಲ್ಲಿ ಒಟ್ಟು 261 ನಾನ್ ಶೆಡ್ಯೂಲ್ಡ್ ನಗರ ಸಹಕಾರ ಬ್ಯಾಂಕ್‌ಗಳು ಇದ್ದು, ಇವುಗಳೂ ಸೇರಿದಂತೆ ದೇಶದ ಸಹಕಾರ ಬ್ಯಾಂಕ್‌ಗಳ ಸಂಪೂರ್ಣ ಮೇಲುಸ್ತುವಾರಿ ಆರ್‌ಬಿಐ ವ್ಯಾಪ್ತಿಗೆ ಬರಲಿದೆ. […]

Read More

ಕಠಿಣ ಕ್ರಮಗಳು ಅಗತ್ಯ – ಆದಾಯ ಹೆಚ್ಚಿಸಲು ಪರ್ಯಾಯ ಮಾರ್ಗ ಅಗತ್ಯ

ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಹೇರಲಾಗಿರುವ ‘ಲಾಕ್ಡೌನ್’ ನಿಂದಾಗಿ ಆರ್ಥಿಕ ಚಟುವಟಿಕೆಗಳೆಲ್ಲವೂ ಸ್ಥಗಿತವಾಗಿವೆ. ಪರಿಣಾಮ ಸರಕಾರದ ಬೊಕ್ಕಸವೂ ಬರಿದಾಗುತ್ತಿದೆ. ಇದು ಅನಿರೀಕ್ಷಿತವೇನಲ್ಲ. ಆದರೆ, ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳು ಯಾವ ರೀತಿ ಪರಿಣಾಮ ಬೀರಲಿವೆ ಎಂಬುದರ ಬಗ್ಗೆ ಸ್ಪಷ್ಟತೆ ಇನ್ನೂ ಸಿಕ್ಕಿಲ್ಲ. ಖಜಾನೆ ಖಾಲಿಯಾಗುತ್ತಿದೆ ಎಂದು ಹೇಳುತ್ತ ಕೂರುವುದರಲ್ಲೂ ಯಾವುದೇ ಅರ್ಥವಿಲ್ಲ. ದೀರ್ಘಕಾಲೀನ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಸಮಯೋಚಿತ ನಿರ್ಧಾರಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೈಗೊಳ್ಳಬೇಕು ಮತ್ತು ಅವುಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ಜನರ […]

Read More

ಸಮರ್ಪಕ ಜಾರಿ ಅಗತ್ಯ – ಹಲ್ಲೆ ತಪ್ಪಿಸಲು ಕೇಂದ್ರ, ರಾಜ್ಯದಿಂದ ಸುಗ್ರೀವಾಜ್ಞೆ

ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಪೊಲೀಸರು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ತೊಡಗಿಸಿಕೊಂಡಿದ್ದಾರೆ. ಆದರೆ, ಕರ್ನಾಟಕವೂ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ಈ ‘ಕೊರೊನಾ ವಾರಿಯರ್ಸ್’ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿವೆ. ಆದರೆ, ಇಂಥ ಸಂದರ್ಭವನ್ನು ಎದುರಿಸುವ ಸಮರ್ಪಕ ಕಾನೂನು ಬಲ ನಮ್ಮ ಸರಕಾರಗಳಿಗೆ ಇರಲಿಲ್ಲ. ಆ ಕೊರತೆಯನ್ನು ಕೇಂದ್ರ ಮತ್ತು ಕರ್ನಾಟಕ ಸರಕಾರಗಳು ಸುಗ್ರೀವಾಜ್ಞೆಗಳ ಮೂಲಕ ತುಂಬಿಕೊಳ್ಳುತ್ತಿವೆ. ಕೊರೊನಾ ಸೇನಾನಿಗಳ ಮೇಲೆ ಹಲ್ಲೆ ಮಾಡುವವರನ್ನು ಹೆಡೆಮುರಿ […]

Read More

ಇದು ವಿಜಯ ಕರ್ನಾಟಕ ಹೇಳಿದ್ದಲ್ಲ, ಕೇಂದ್ರ‌ ಸರಕಾರ‌ ಬಿಡುಗಡೆ ಮಾಡಿದ ಮಾಹಿತಿ…

ದೇಶದ 30% ಸೋಂಕಿಗೆ ತಬ್ಲಿಘಿ ಸಮಾವೇಶ ಲಿಂಕ್‌ – ದೇಶಾದ್ಯಂತ ಪತ್ತೆಯಾದ ಒಟ್ಟು ಕೊರೊನಾ ಪ್ರಕರಣಗಳು 14,378 – ತಬ್ಲಿಘಿ ಜಮಾತ್‌ ಸಮಾವೇಶದ ನಂಟಿರುವ ಸೋಂಕಿತರು 4,291 – ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಧಿಕೃತ ಮಾಹಿತಿ ಏಜೆನ್ಸೀಸ್‌ ಹೊಸದಿಲ್ಲಿ ದೇಶದಲ್ಲಿ ದಾಖಲಾದ ಕೊರೊನಾ ಸೋಂಕು ಪ್ರಕರಣಗಳಲ್ಲಿ ಶೇಕಡಾ 30ಕ್ಕೆ ತಬ್ಲಿಕ್‌ ಜಮಾತ್‌ ಸಮಾವೇಶದ ನಂಟು ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ‘‘ದೇಶಾದ್ಯಂತ ಶನಿವಾರ ಮಧ್ಯಾಹ್ನದವರೆಗಿನ ವರದಿ ಪ್ರಕಾರ ಒಟ್ಟು 14,378 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, […]

Read More

ಕೇಂದ್ರದ ತಾರತಮ್ಯ ಸಲ್ಲದು: ಹೆಚ್ಚಿನ ಮೊತ್ತದ ಸಿಎಸ್‌ಆರ್‌ ರಾಜ್ಯಗಳಿಗೂ ಸಿಗಲಿ

ರಾಜ್ಯ ಮತ್ತು ಕೇಂದ್ರ ಸರಕಾರಗಳು ಪ್ರತ್ಯೇಕ ಅಸ್ತಿತ್ವ ಪಡೆದುಕೊಳ್ಳಲಿ ಎಂಬ ಕಾರಣಕ್ಕೆ ಭಾರತವು ‘ಒಕ್ಕೂಟ ವ್ಯವಸ್ಥೆ’ಯನ್ನು ಅನುಸರಿಸುತ್ತಿದೆ. ರಕ್ಷಣೆ, ಸಂವಹನ, ವಿದೇಶಾಂಗ ವ್ಯವಹಾರದಂಥ ಪ್ರಮುಖ ವಲಯಗಳನ್ನು ಹೊರತುಪಡಿಸಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ತಮ್ಮದೇ ಅಧಿಕಾರ ವ್ಯಾಪ್ತಿಯನ್ನು ಹೊಂದಿವೆ. ಸಂವಿಧಾನವೂ ಅಧಿಕಾರ ಹಂಚಿಕೆ ಸಂಬಂಧ ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ಸ್ಪಷ್ಟ ಗೆರೆ ಎಳೆದಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಆ ಗೆರೆ ಮಸುಕಾಗುತ್ತಿದೆ. ಕೊರೊನಾ ಸಂಕಟದ ಸಮಯದಲ್ಲಿಅದು ಇನ್ನಷ್ಟು ಬಹಿರಂಗವಾಗುತ್ತಿದೆ. ಕೊರೊನಾ ಮಹಾಮಾರಿಯಿಂದಾಗಿ ಎಲ್ಲ ರಾಜ್ಯಗಳ ಆರ್ಥಿಕ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top