ಪ್ರಮೋದ ಹರಿಕಾಂತ ಬೆಳಗಾವಿ/ಎನ್.ಡಿ.ತಿಪ್ಪೇಸ್ವಾಮಿ ಬಳ್ಳಾರಿ. ಹಲವು ವರ್ಷಗಳಿಂದ ಪದವಿ ಕಾಲೇಜುಗಳಲ್ಲಿ ಕಡಿಮೆ ವೇತನಕ್ಕೆ ದುಡಿಸಿಕೊಂಡಿದ್ದ ಅತಿಥಿ ಉಪನ್ಯಾಸಕರನ್ನು ರಾಜ್ಯ ಸರಕಾರ ಕೊರೊನಾ ಕಾರಣಕ್ಕೆ ಕೈ ಬಿಟ್ಟಿದ್ದರಿಂದ ಸಾವಿರಾರು ಅತಿಥಿ ಉಪನ್ಯಾಸಕರು ಅತಂತ್ರರಾಗಿದ್ದಾರೆ. ಆರ್ಥಿಕ ಸಂಕಷ್ಟ ಮತ್ತು ಮಾನಸಿಕ ಒತ್ತಡದಿಂದ ಸುಮಾರು ಎಂಟು ಅತಿಥಿ ಉಪನ್ಯಾಸಕರು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವರು ಕೂಲಿ ಕೆಲಸಕ್ಕೆ ಇಳಿದಿದ್ದಾರೆ. ಹೀಗಿರುವಾಗಲೇ ಈ ವರ್ಷ ಅತಿಥಿ ಉಪನ್ಯಾಸಕರ ಸೇವೆಯನ್ನೇ ಕಡಿತ ಮಾಡುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದು ಅತಿಥಿ ಉಪನ್ಯಾಸಕರನ್ನು ಇನ್ನಷ್ಟು […]