-ಲಕ್ಷಣರಹಿತರು ಆಸ್ಪತ್ರೆ ಸೇರಬೇಕಿಲ್ಲ -ಗಂಭೀರ ರೋಗಿಗಳ ಜೀವ ರಕ್ಷಣೆಗೆ ಆದ್ಯತೆ -ತಜ್ಞರ ಸಲಹೆಗೆ ಸರಕಾರದ ಒಪ್ಪಿಗೆ -ಹೋಮ್ ಐಸೊಲೇಶನ್ ಬಗ್ಗೆ ಶೀಘ್ರ ಮಾರ್ಗಸೂಚಿ ವಿಕ ಸುದ್ದಿಲೋಕ ಬೆಂಗಳೂರು. ಬೆಂಗಳೂರಿನಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕಿತರಿಗೆ ಇನ್ನು ಮುಂದೆ ಮನೆಯಲ್ಲೇ ಚಿಕಿತ್ಸೆ ನೀಡಲು ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಗಂಭೀರ ಸಮಸ್ಯೆ ಎದುರಿಸುತ್ತಿರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಜೀವ ರಕ್ಷಣೆ ಮಾಡುವ ನಿಟ್ಟಿನಲ್ಲಿಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದ್ದು, ಆಸ್ಪತ್ರೆಗಳು ತುಂಬಿಕೊಳ್ಳುತ್ತಿವೆ. […]