ಕೋಟ್ಯಂತರ ಭಕ್ತರ ಹಲವು ವರ್ಷಗಳ ಕನಸು ಈಡೇರುವ ಗಳಿಗೆ ಹತ್ತಿರವಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬುಧವಾರ(ಜೂ.10)ರಂದು ಶಿಲಾನ್ಯಾಸ ನಡೆಯಲಿದೆ. ರಾಮಜನ್ಮಭೂಮಿ ವ್ಯಾಪ್ತಿಯಲ್ಲೇ ಇರುವ ‘ಕುಬೇರ ತಿಲ’ ಮಂದಿರದಲ್ಲಿ ಶಿವನಿಗೆ ರುದ್ರಾಭಿಷೇಕ ಮಾಡುವುದರೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ. ‘‘ಲಂಕಾ ಮೇಲಿನ ದಾಳಿಗೂ ಮುನ್ನ ಶ್ರೀರಾಮಚಂದ್ರನು ಶಿವನನ್ನು ಪ್ರಾರ್ಥಿಸಿದ್ದ. ಅದೇ ಸಂಪ್ರದಾಯವನ್ನು ಈಗ ಪಾಲಿಸುತ್ತಿದ್ದೇವೆ. ರುದ್ರಾಭಿಷೇಕದ ಬಳಿಕವೇ ರಾಮ ಮಂದಿರ ಶಿಲಾನ್ಯಾಸದ ಕಾರ್ಯಕ್ರಮಗಳು ಆರಂಭವಾಗಲಿವೆ,’’ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಕ್ತಾರರಾದ ಮಹಾಂತ ಕಮಲನಯನ ದಾಸ್ […]
Read More
ಎಸ್ಎಸ್ಎಲ್ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಭವಿಷ್ಯದ ಶಿಕ್ಷಣದ ಅಡಿಪಾಯವನ್ನು ಹಾಕುತ್ತದೆ. ಆದರೆ, ಕೊರೊನಾ ಎಫೆಕ್ಟ್ನಿಂದ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಬೇಕೆ, ಬೇಡವೆ ಎಂದು ತೀರ್ಮಾನಿಸವುದರಲ್ಲಿ ಕಾಲ ಕಳೆದುಹೋಯಿತು. ಕೊನೆಗೂ ಜೂ.25ರಿಂದ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಯಿತು. ಯಾವುದೇ ಕಾರಣಕ್ಕೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ಕುಮಾರ್ ಹೇಳಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ನಡೆಸುವುದು ಒಳ್ಳೆಯ ಬೆಳವಣಿಗೆಯೇ ಸರಿ. […]
Read More
– ಲಾಕ್ಡೌನ್ ಸಡಿಲಿಕೆ ಬಳಿಕ ಹಿಂದಿಗಿಂತಲೂ ಹೆಚ್ಚು ಡಿಮ್ಯಾಂಡ್ – ಚಿನ್ನ, ಬೆಳ್ಳಿ ಈಗ ಸಿಕ್ಕಾಪಟ್ಟೆ ಖರೀದಿ. ಎಚ್ ಪಿ ಪುಣ್ಯವತಿ, ಬೆಂಗಳೂರು : ಲಾಕ್ಡೌನ್ ಸಡಿಲಿಕೆ ನಂತರ ಚಿನ್ನಾಭರಣಗಳ ಉದ್ಯಮ ನಿರೀಕ್ಷೆಗೂ ಮೀರಿ ಚೇತರಿಕೆ ಕಂಡಿದೆ. ಲಾಕ್ಡೌನ್ಗೆ ಮೊದಲು ರಾಜ್ಯದಲ್ಲಿ ತಿಂಗಳಿಗೆ ಗರಿಷ್ಠ 850 ಕೆಜಿ ಚಿನ್ನ ಮಾರಾಟವಾಗುತ್ತಿದ್ದರೆ, ಜೂನ್ 1ರಿಂದ 7ರವರೆಗಿನ ಒಂದೇ ವಾರದಲ್ಲಿ 280 ಕೆಜಿ ಚಿನ್ನ ವ್ಯಾಪಾರ ಆಗಿದೆ. ಅಂದರೆ, ಚಿನ್ನ, ಬೆಳ್ಳಿ ಆಭರಣಗಳ ಖರೀದಿ ಪ್ರಮಾಣ ಹಿಂದಿಗಿಂತಲೂ ಶೇ. 40-45ರಷ್ಟು ಏರಿಕೆಯಾಗಿದೆ. […]
Read More
– ವಿನುತಾ ಗೌಡ. ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹ ಮುಕುಂದರು ಆತ್ಮನಿರ್ಭರತೆಯ ಬಗೆಗಿನ ವೆಬಿನಾರ್ ಒಂದರಲ್ಲಿ ಮಾತನಾಡುತ್ತಾ ಅಪರೂಪದ ಸಂಗತಿಯೊಂದನ್ನು ಪ್ರಸ್ಥಾಪಿಸಿದ್ದರು. ಕೃಷಿ, ಕೈಗಾರಿಕೆ, ಉದ್ದಿಮೆ ಮತ್ತು ರಕ್ಷ ಣಾ ಬಲಗಳಲ್ಲಿ ಆತ್ಮನಿರ್ಭರತೆಯ ಅನುಷ್ಠಾನ ಹೇಗೆ, ಎತ್ತ ಮುಂತಾದ ಚರ್ಚೆಗಳ ನಡುವೆಯೂ ಆತ್ಮನಿರ್ಭರಕ್ಕೆ ಒಂದು ವಿಭಿನ್ನ ದೃಷ್ಟಿಕೋನವಿದೆ ಎಂಬುದನ್ನು ಅವರು ತಿಳಿಸಿದ್ದರು. ಸ್ವಾವಲಂಬನೆ ಮತ್ತು ಆತ್ಮನಿರ್ಭರ ಪದಗಳಿಗಿರುವ ತೀರಾ ಹತ್ತಿರದ ಸಂಬಂಧಗಳನ್ನು ವಿವರಿಸುತ್ತಾ, ‘‘ಆತ್ಮನಿರ್ಭರ- ಸ್ವಾವಲಂಬನೆ ಎನ್ನುವುದು ಕೇವಲ ಆರ್ಥಿಕ ದೃಷ್ಟಿಕೋನಕ್ಕೆ ಸಂಬಂಧಿಸಿದ ಸಂಗತಿಯಲ್ಲ. ಅದಕ್ಕೂ […]
Read More
ಇಂದಿನಿಂದ ಟೆಂಪಲ್, ಮಾಲ್, ಹೋಟೆಲ್ ಓಪನ್ | ಷರತ್ತುಗಳು ಅನ್ವಯ. ಎರಡೂವರೆ ತಿಂಗಳ ಬಳಿಕ ಸೃಷ್ಟಿಯಾಗಲಿದೆ ಸಂಚಲನ | ಪ್ರವಾಸಿ ತಾಣಗಳೂ ರೆಡಿ. ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾದಿಂದಾಗಿ ಅಸ್ತವ್ಯಸ್ತಗೊಂಡಿದ್ದ ವಾಣಿಜ್ಯ ಕ್ಷೇತ್ರ ಮತ್ತು ಜನಜೀವನವನ್ನು ಮರಳಿ ಹಳಿಗೆ ತರುವ ಅತಿ ದೊಡ್ಡ ಕ್ರಮವಾಗಿ ಸೋಮವಾರದಿಂದ ರಾಜ್ಯಾದ್ಯಂತ ದೇವಾಲಯಗಳು, ಹೋಟೆಲ್ಗಳು ಮತ್ತು ವಾಣಿಜ್ಯ ಮಾಲ್ಗಳನ್ನು ಮತ್ತೆ ತೆರೆಯಲಾಗುತ್ತಿದೆ. ಇದರೊಂದಿಗೆ ಸುಮಾರು ಎರಡುವರೆ ತಿಂಗಳಿನಿಂದ ಸ್ಥಗಿತಗೊಂಡಿದ್ದ ಆತಿಥ್ಯ ಕ್ಷೇತ್ರ, ಧಾರ್ಮಿಕ ಮತ್ತು ವ್ಯಾಪಾರಿ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಲಿದೆ. […]
Read More
– ಹರೀಶ್ ಕೇರ. ಶಾಲೆಗಳು ಯಾವಾಗ ಆರಂಭ? ಗೊತ್ತಿಲ್ಲ. ಕೊರೊನಾ ಸೋಂಕಿನ ಗ್ರಾಫ್ ಯಾವಾಗ ಇಳಿಯುತ್ತದೆ? ಗೊತ್ತಿಲ್ಲ. ಮತ್ತೆ ನಾವೆಲ್ಲ ಯಾವಾಗ ಕೈ ಕುಲುಕಬಹುದು? ಯಾವಾಗ ಅಪ್ಪಿಕೊಳ್ಳಬಹುದು? ಊರಿಗೆ ಹೋದವರು ಯಾವಾಗ ಹಿಂದಿರುಗಬಹುದು? ಪರದೇಶಗಳಲ್ಲಿರುವವರು ಯಾವಾಗ ಬರಬಹುದು? ಐಸಿಯುನಲ್ಲಿರುವವರು ಮನೆಗೆ ಮರಳಬಹುದೇ? ಮಾಸ್ಕ್ ಹಾಕಿದ ಮುಖಗಳ ಹಿಂದೆ ಯಾರಿದ್ದಾರೆ? ಕೊರೊನಾ ಹೋದ ಮೇಲೆ ಬದುಕುಳಿದವರ ಜೀವನ ಹೇಗಿರುತ್ತದೆ? ಆಗಲೂ ಸಣ್ಣಪುಟ್ಟ ಸಂಗತಿಗಳಿಗೆ ನಕ್ಕು ಹಗುರಾಗುವಷ್ಟು ಶಕ್ತಿ ನಮ್ಮಲ್ಲಿ ಉಳಿದಿರಬಹುದಾ? ಯಾವುದೂ ಗೊತ್ತಿಲ್ಲ. ಕತೆ, ಕಾದಂಬರಿ ಬರೆಯುವವರು ಮೊದಲ […]
Read More
– ಲಾಕ್ ಓಪನ್ ಬಳಿಕ ಭಾರಿ ಚೇತರಿಕೆ ಕಂಡ ಆಟೊಮೊಬೈಲ್ ಉದ್ಯಮ – ಕಾರು, ದ್ವಿಚಕ್ರ ವಾಹನ ಖರೀದಿಗೆ ಎಲ್ಲೆಡೆ ಉತ್ಸಾಹ | ನೋಂದಣಿ ಹೆಚ್ಚಳ – ನಾಗಪ್ಪ ನಾಗನಾಯಕನಹಳ್ಳಿ ಬೆಂಗಳೂರು. ಲಾಕ್ಡೌನ್ ಸಡಿಲಿಕೆ ಬಳಿಕ ಆಟೊಮೊಬೈಲ್ ಮಾರುಕಟ್ಟೆ ಭಾರಿ ಚೇತರಿಕೆ ಕಂಡಿದೆ. ರಾಜ್ಯಾದ್ಯಂತ ಹೊಸ ವಾಹನಗಳ ಖರೀದಿಯ ಉತ್ಸಾಹ ಕಾಣಿಸುತ್ತಿರುವುದು ಉದ್ಯಮ ವಲಯದಲ್ಲಿ ಆಶಾವಾದ ಮೂಡಿಸಿದೆ. ಆರ್ಥಿಕ ಸಂಕಷ್ಟ , ಸಂಬಳ ಕಡಿತ, ಉದ್ಯೋಗ ನಷ್ಟ ಮೊದಲಾದ ಕಾರಣದಿಂದ ಜನರು ವಾಹನ ಖರೀದಿಗೆ ಹಿಂದೇಟು ಹಾಕಬಹುದು […]
Read More
– ಸೋಮವಾರ ದೇಗುಲ ತೆರೆದರೂ ಹೆಚ್ಚಿನೆಡೆ ದರುಶನಕ್ಕೆ ಸೀಮಿತ – ಸೇವೆ ಆರಂಭ ಸ್ವಲ್ಪ ವಿಳಂಬ | ಜನದಟ್ಟಣೆ ತಪ್ಪಿಸುವುದು ಉತ್ತಮ ವಿಕ ಸುದ್ದಿಲೋಕ ಬೆಂಗಳೂರು. ಸೋಮವಾರದಿಂದ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲು ರಾಜ್ಯದ ಹೆಚ್ಚಿನ ದೇವಾಲಯಗಳಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಆದರೆ, ಬಹುತೇಕ ದೇವಾಲಯಗಳಲ್ಲಿ ಸದ್ಯಕ್ಕೆ ದರ್ಶನಕ್ಕೆ ಮಾತ್ರ ಅವಕಾಶ ನೀಡುವ ಚಿಂತನೆ ನಡೆದಿದ್ದು, ದೇವರ ಸೇವೆಗಳು ಕೆಲವು ದಿನ ಬಿಟ್ಟು ಆರಂಭಗೊಳ್ಳಲಿವೆ. ಕೇಂದ್ರ ಸರಕಾರ ವಿಧಿಸಿರುವ ಮಾರ್ಗದರ್ಶಿ ಸೂತ್ರಗಳ ಅಡಿಯಲ್ಲಿ ದೇವಾಲಯಗಳು ಭಕ್ತರಿಗೆ ಅವಕಾಶ […]
Read More
ಪರೀಕ್ಷೆಯೇ ಸವಾಲು | ಆಸ್ಪತ್ರೆಗಳನ್ನು ಇನ್ನಷ್ಟು ಸುಸಜ್ಜಿತಗೊಳಿಸುವ ತುರ್ತು | ಕೆಲವೆಡೆ ಲಾಕ್ಡೌನ್ ಅನಿವಾರ್ಯ. ವಿಕ ಬ್ಯೂರೊ, ಬೆಂಗಳೂರು. ವಲಸೆ ಕಾರ್ಮಿಕರ ಆಗಮನದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇದಿನೆ ಏರುತ್ತಿದೆ. ಬಂದವರೆಲ್ಲ ಕ್ವಾರಂಟೈನ್ನಲ್ಲಿದ್ದಾರೆ ನಿಜ. ಆದರೆ ಈ ವ್ಯವಸ್ಥೆ ಅಷ್ಟೇನು ಪ್ರಬಲವಾಗಿಲ್ಲ. ಇದನ್ನು ಸಬಲಗೊಳಿಸದೆ ಇದ್ದರೆ ಇಡೀ ರಾಜ್ಯ ಅಪಾಯಕ್ಕೆ ಸಿಲುಕಿಕೊಳ್ಳುತ್ತದೆ. ಸೋಂಕು ಸಮುದಾಯದ ಹಂತಕ್ಕೆ ಹಬ್ಬಿಕೊಳ್ಳುತ್ತದೆ. ಇಲ್ಲಿರುವ ವಿವರಗಳು ರಾಜ್ಯ ಇನ್ನಷ್ಟು ಶಕ್ತಿ ಮತ್ತು ಸಂಪನ್ಮೂಲಗಳನ್ನು ಹೆಚ್ಚಿಸುವ ತುರ್ತನ್ನು ಹೇಳುತ್ತಿವೆ. ಪರೀಕ್ಷಾ ಪ್ರಕ್ರಿಯೆ ಮತ್ತು ವರದಿ […]
Read More
ಜುಲೈ 1ನೇ ತಾರೀಕಿನಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಆರಂಭಿಸುವ ಚಿಂತನೆ ಮುನ್ನೆಲೆಗೆ ಬಂದಿದೆ. ರಾಜ್ಯದ ಎಲ್ಲ ಸರಕಾರಿ ಶಾಲೆಗಳ ಕಚೇರಿ ಸಿಬ್ಬಂದಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಜೂನ್ 5ರಿಂದಲೇ ಕಚೇರಿ ಕರ್ತವ್ಯಕ್ಕೆ ಹಾಜರಾಗಬೇಕು ಹಾಗೂ ಜೂನ್ 8ರಿಂದ ದಾಖಲಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಜೂನ್ 10ರಿಂದ 15ರವರೆಗೆ ಎಸ್ಡಿಎಂಸಿ ಸಭೆಗಳು ನಡೆಯಬೇಕು, ಜೂನ್ 15ರಿಂದ 20ರವರೆಗೆ ಶಾಲೆಯಿಂದ ಹೊರಗುಳಿದವರಿಗಾಗಿ ದಾಖಲಾತಿ ಆಂದೋಲನ ನಡೆಯಲಿದೆ ಎಂದೂ ಆಯುಕ್ತರು ನಿರ್ದೇಶಿಸಿದ್ದಾರೆ. […]
Read More