ಅತಿಥಿಗಳ ಕಷ್ಟಕ್ಕೆ ಕಾಯಂ ಉಪನ್ಯಾಸಕರ ಸ್ಪಂದನೆ. ವಿಕ ಸುದ್ದಿಲೋಕ ಬೆಳಗಾವಿ. ಕೊರೊನಾ ಹೊಡೆತಕ್ಕೆ ದುಡಿಮೆ ಕಳೆದುಕೊಂಡು ಅತಂತ್ರರಾಗಿರುವ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ನೆರವಿಗೆ ಕಾಯಂ ಉಪನ್ಯಾಸಕರು ಧಾವಿಸಿದ್ದಾರೆ. ತಮ್ಮ ಒಂದು ದಿನದ ವೇತನವನ್ನು ಅತಿಥಿ ಉಪನ್ಯಾಸಕರಿಗೆ ನೀಡುವುದಾಗಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಪ್ರಕಟಿಸಿದೆ. ಕೆಲ ಉಪನ್ಯಾಸಕರು ಮೂರು ತಿಂಗಳು ತಲಾ ಒಂದು ದಿನದ ವೇತನ ಕೊಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡುವ ಮೂಲಕ ಅತಿಥಿ ಉಪನ್ಯಾಸಕರ ಕಷ್ಟಕ್ಕೆ ಕೈ […]
Read More
ಪ್ರಮೋದ ಹರಿಕಾಂತ ಬೆಳಗಾವಿ/ಎನ್.ಡಿ.ತಿಪ್ಪೇಸ್ವಾಮಿ ಬಳ್ಳಾರಿ. ಹಲವು ವರ್ಷಗಳಿಂದ ಪದವಿ ಕಾಲೇಜುಗಳಲ್ಲಿ ಕಡಿಮೆ ವೇತನಕ್ಕೆ ದುಡಿಸಿಕೊಂಡಿದ್ದ ಅತಿಥಿ ಉಪನ್ಯಾಸಕರನ್ನು ರಾಜ್ಯ ಸರಕಾರ ಕೊರೊನಾ ಕಾರಣಕ್ಕೆ ಕೈ ಬಿಟ್ಟಿದ್ದರಿಂದ ಸಾವಿರಾರು ಅತಿಥಿ ಉಪನ್ಯಾಸಕರು ಅತಂತ್ರರಾಗಿದ್ದಾರೆ. ಆರ್ಥಿಕ ಸಂಕಷ್ಟ ಮತ್ತು ಮಾನಸಿಕ ಒತ್ತಡದಿಂದ ಸುಮಾರು ಎಂಟು ಅತಿಥಿ ಉಪನ್ಯಾಸಕರು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವರು ಕೂಲಿ ಕೆಲಸಕ್ಕೆ ಇಳಿದಿದ್ದಾರೆ. ಹೀಗಿರುವಾಗಲೇ ಈ ವರ್ಷ ಅತಿಥಿ ಉಪನ್ಯಾಸಕರ ಸೇವೆಯನ್ನೇ ಕಡಿತ ಮಾಡುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದು ಅತಿಥಿ ಉಪನ್ಯಾಸಕರನ್ನು ಇನ್ನಷ್ಟು […]
Read More
– ವಿಮಾನ, ರೈಲು ಸಂಚಾರದ ಆರಂಭದ ಹಿನ್ನೆಲೆಯಲ್ಲಿ ಆಹಾರ, ವಸತಿ ವ್ಯವಸ್ಥೆ ಅನಿವಾರ್ಯ – ಶೀಘ್ರವೇ ದೇಗುಲಗಳೂ ತೆರೆಯುವ ಸಾಧ್ಯತೆ | ಜನಜೀವನ ವೇಗವಾಗಿ ಮರಳಿ ಹಳಿಗೆ. – ಎಚ್.ಪಿ.ಪುಣ್ಯವತಿ, ಬೆಂಗಳೂರು. ಕೊರೊನಾ ನಡುವೆಯೇ ಬದುಕು ಕಟ್ಟಿಕೊಳ್ಳುವುದು ಅನಿವಾರ್ಯ ಎಂಬ ಸಂದೇಶಕ್ಕೆ ಪೂರಕವಾಗಿ ಜನಜೀವನ ವೇಗವಾಗಿ ಮರಳಿ ಹಳಿಗೆ ಬರುತ್ತಿದೆ. ಇದರ ಭಾಗವಾಗಿ, ರಾಜ್ಯದಲ್ಲಿ ಹೋಟೆಲ್ಗಳ ಮರು ಆರಂಭಕ್ಕೂ ಕ್ಷಣಗಣನೆ ಆರಂಭವಾಗಿದೆ. ಜತೆಗೆ ಕೆಲವೇ ದಿನಗಳಲ್ಲಿ ದೇವಾಲಯಗಳ ಬಾಗಿಲುಗಳೂ ತೆರೆಯಲಿವೆ. ಲಾಕ್ಡೌನ್ ಸಡಿಲಿಕೆ ನಂತರ ವಾಣಿಜ್ಯ ಚಟುವಟಿಕೆಗಳು […]
Read More
– ಕಾರ್ಮಿಕರ ಪುನರ್ ವಲಸೆ ಅನಿವಾರ್ಯ – ಕಾರ್ಮಿಕರ ಪುನರ್ ವಲಸೆ ಅನಿವಾರ್ಯ – ಗ್ರಾಮೀಣ ಉದ್ಯೋಗದ ಘೋಷಣೆ ಬೇರೆ, ವಾಸ್ತವವೇ ಬೇರೆ! ರಾಜ್ಯದಲ್ಲಿ ಲಕ್ಷಾಂತರ ಕಾರ್ಮಿಕರು ತವರಿನತ್ತ ವಲಸೆ ಹೋಗಿದ್ದಾರೆ. ಇವರ ಮಹಾ ವಲಸೆಯಿಂದ ಕೈಗಾರಿಕೆ, ಉದ್ಯಮ, ಮೂಲಸೌಕರ್ಯ ಕಾಮಗಾರಿ ವಲಯಗಳಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ. ಗ್ರಾಮೀಣ ಕರ್ನಾಟಕದಲ್ಲೂ ಸಾಮಾಜಿಕ ಏರುಪೇರು ಉಂಟಾಗಲಿದೆ. ಈ ಕುರಿತ ಸಮಗ್ರ ಅವಲೋಕನ. ನಗರಗಳಲ್ಲಿ ಮಾಡುತ್ತಿದ್ದ ಕೆಲಸ ಬಿಟ್ಟು ಹಳ್ಳಿಗಳಲ್ಲಿ ಉಳಿದರೆ ಪ್ರೀತಿ-ವಿಶ್ವಾಸದಿಂದ ಮನಸ್ಸು ತುಂಬಬಹುದೇ ಹೊರತು ಹೊಟ್ಟೆ ತುಂಬುವುದಿಲ್ಲ ಸರ್. ಕಲಿತಿರುವ ಕೌಶಲಕ್ಕೆ […]
Read More
ಲಾಕ್ಡೌನ್ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸಲು ಒಟ್ಟು 1 ಲಕ್ಷ ಕೋಟಿ ರೂ.ಗಳ ನಾನಾ ನೆರವಿನ ಪ್ಯಾಕೇಜ್ ಅನ್ನು ಶುಕ್ರವಾರ ಘೋಷಿಸಿದೆ. ಇದರ ಪರಿಣಾಮ ಬ್ಯಾಂಕ್ಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ ಹೆಚ್ಚಿನ ಸಾಲ ವಿತರಿಸಲು ಹಣಕಾಸು ಸಿಗಲಿದೆ. ರೈತರು, ಸಣ್ಣ ವ್ಯಾಪಾರಿಗಳು, ಉದ್ದಿಮೆದಾರರಿಗೆ ಬ್ಯಾಂಕ್ ಸಾಲ ಸೌಲಭ್ಯ ಹೆಚ್ಚಲಿದೆ. ವಿಶೇಷ ಹಣಕಾಸು ಸಂಸ್ಥೆಗಳಿಗೂ ಹಣ ನೀಡಲಾಗಿದ್ದು, ಕಾಮಗಾರಿಗಳಿಗೆ ನೆರವಾಗಲಿದೆ. ಇದು ಶ್ಲಾಘನೀಯ ಕ್ರಮ. ಇಂಥದೊಂದು ನೆರವಿನ ನಿರೀಕ್ಷೆಯಲ್ಲಿ ದೇಶದ […]
Read More
– ರಾಮಸ್ವಾಮಿ ಹುಲಕೋಡು ಕೊರೊನಾ ವೈರಸ್ ದಾಳಿಯಿಂದ ಇಡೀ ಜಗತ್ತಿನ ಆರ್ಥಿಕತೆ ಕುಸಿದು ಬಿದ್ದಿದೆ. ಹಿಂದೆಂದೂ ಕಂಡಿರದಂಥ ಪರಿಸ್ಥಿತಿ ನಿರ್ಮಾಣವಾಗಿದ್ದು, ಉದ್ಯೋಗ ಮಾರುಕಟ್ಟೆಯ ಮೇಲೂ ಇದು ನೇರ ಪರಿಣಾಮ ಬೀರಿದೆ. ಹೀಗಾಗಿ ಈಗಾಗಲೇ ಉದ್ಯೋಗದಲ್ಲಿರುವವರು, ಉದ್ಯೋಗದ ನಿರೀಕ್ಷೆಯಲ್ಲಿರುವ ಅಭದ್ರತೆಯಿಂದಲೇ ದಿನ ದೂಡುವಂತಾಗಿದೆ. ನಮ್ಮ ದೇಶದಲ್ಲಿ ನಿರುದ್ಯೋಗದ ಪ್ರಮಾಣ ಈಗ ಶೇ.30ಕ್ಕಿಂತೂ ಹೆಚ್ಚಿದೆ ಎಂದು ವಿವಿಧ ಸಮೀಕ್ಷೆಗಳು ಅಭಿಪ್ರಾಯಪಟ್ಟಿವೆ. ಮುಂದೆ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆಗಳಿವೆ. ಇಂಥ ಸಂದರ್ಭದಲ್ಲಿ ಈಗ ಉದ್ಯೋಗ ಮಾಡುತ್ತಿರುವವರು ಮತ್ತು ಉದ್ಯೋಗದ ನಿರೀಕ್ಷೆಯಲ್ಲಿರುವವರು ಏನು […]
Read More
ಎಲ್ಲ ಸರಾಗವಾಗಿ ನಡೆದುಕೊಂಡು ಹೋಗುತ್ತಿರುವಾಗ ದಿಢೀರ್ ಎದುರಾಗುವ ಸವಾಲುಗಳು ನಮ್ಮ ಮನೋಬಲವನ್ನು ಕುಂದಿಸಿ, ನಾವು ಋಣಾತ್ಮಕವಾಗಿ ಚಿಂತಿಸುವಂತೆ ಮಾಡುವುದು ಸಹಜ. ಕೊರೊನಾ ಸೃಷ್ಟಿಸಿರುವ ಆವಾಂತರವೂ ಇದಕ್ಕೆ ಹೊರತಲ್ಲ. ಈ ಆರೋಗ್ಯ ಸಂಬಂಧಿ ತುರ್ತು ಪರಿಸ್ಥಿತಿಯಿಂದಾಗಿ ನಾವು ಎಲ್ಲವನ್ನು ಕಳೆದುಕೊಂಡು ಬಿಟ್ಟೆವು; ಎಲ್ಲವೂ ಮುಗಿದೇ ಹೋಯಿತು; ಬದುಕು ಹಾಳಾಯಿತು ಎಂದು ಭಾವಿಸಲು ಕಾರಣವಿಲ್ಲ. ನಮ್ಮನ್ನು ನಾವು ಮತ್ತು ನಮ್ಮ ಶಕ್ತಿಯನ್ನು ಮರುಪೂರಣಗೊಳಿಸಿಕೊಳ್ಳಲು ಸೃಷ್ಟಿಯಾಗಿರುವ ಅವಕಾಶ ಎಂದು ಏಕೆ ತಿಳಿಯಬಾರದು. ಸಕಾರಾತ್ಮಕ ದೃಷ್ಟಿಕೋನದಿಂದ ಈಗಿನ ಪರಿಸ್ಥಿತಿಯನ್ನು ನೋಡಿದರೆ, ಮುಂಬರುವ ದಿನಗಳು […]
Read More
ಡೋಂಟ್ ವರಿ, ಎಲ್ಲ ಬಾಗಿಲುಗಳೂ ಮುಚ್ಚಿಲ್ಲ! ಲಾಕ್ಡೌನ್ ನಡುವೆಯೂ ಹಲವು ವಲಯಗಳಲ್ಲಿ ಚುರುಕಿನ ವಹಿವಾಟು ಕೊರೊನಾಘಾತದ ನಡುವೆಯೂ ಆಶಾಕಿರಣ ನಾನಾ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಸೃಷ್ಟಿ ದಿನ ಬಳಕೆ ವಸ್ತು ತಯಾರಿ ಕಂಪನಿಗಳ ಷೇರು ವೌಲ್ಯ ವೃದ್ಧಿ, ಔಷಧ ರಫ್ತಿನಿಂದ ಭಾರಿ ಲಾಭ – ಕೇಶವ ಪ್ರಸಾದ್ ಬಿ. ಬೆಂಗಳೂರು ಕೊರೊನಾ ವೈರಸ್ ದೇಶದ ಆರ್ಥಿಕತೆ ಮೇಲೆ ಭಾರಿ ಪ್ರಹಾರ ಮಾಡಿದೆ. ಸುದೀರ್ಘ ಲಾಕ್ಡೌನ್ನಿಂದಾಗಿ ಕೈಗಾರಿಕೋದ್ಯಮಕ್ಕೆ ಗರ ಬಡಿದಂತಾಗಿರುವುದು ನಿಜ. ಹಾಗಂತ ಪೂರ್ಣ ನಿರಾಶರಾಗಬೇಕಿಲ್ಲ. ಕೊರೊನಾ ಬಿಕ್ಕಟ್ಟು ಹಲವು […]
Read More
– ಮುಂದುವರಿದ ಕೊರೊನಾ ಸೋಂಕು, ಸಾವಿನ ಸರಣಿ ಅರ್ಥ ವ್ಯವಸ್ಥೆಗೇ ಆಪತ್ತು – ಉದ್ಯೋಗ ನಷ್ಟ ಇಲ್ಲವೇ ಸಂಬಳ ಕಡಿತ ಸಾಧ್ಯತೆ – ಬಡ ಮತ್ತು ಮಧ್ಯಮ ವರ್ಗದ ಜನರ ಜೀವನ ನಿರ್ವಹಣೆಗೆ ಎದುರಾಗಲಿದೆ ಸವಾಲು – ಕಠಿಣ ಬಜೆಟ್ ಸೂತ್ರವೇ ಸದ್ಯಕ್ಕಿರುವ ದಾರಿ – ಎ ಕೃಷ್ಣ ಭಟ್, ಬೆಂಗಳೂರು ಮಹಾಮಾರಿ ಕೊರೊನಾದ ಹೊಡೆತಕ್ಕೆ ಇಡೀ ಜಗತ್ತೇ ತತ್ತರಿಸಿದೆ. ಕೊರೊನಾ ಕೇವಲ ಆರೋಗ್ಯ ಸಮಸ್ಯೆಯಲ್ಲ. ಅರ್ಥ ವ್ಯವಸ್ಥೆಯನ್ನು ಬುಡಮೇಲುಗೊಳಿಸಿರುವ ಈ ರೋಗ ಸಾಮಾಜಿಕವಾಗಿಯೂ ಹಲವು ಸವಾಲುಗಳನ್ನು […]
Read More