ಕೋವಿಡ್ ಸೋಂಕಿನಿಂದ ಮೃತಪಟ್ಟ ಕನಕಪುರದ ವ್ಯಕ್ತಿರೊಬ್ಬರ ಅಂತ್ಯ ಸಂಸ್ಕಾರವನ್ನು ನಗರಸಭೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದೊಂದಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ತರಬೇತಿ ಪಡೆದು ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ನಡೆಸುತ್ತಿದ್ದು, ಭಾನುವಾರ ಕೂಡ ಮೂವರ ಶವಸಂಸ್ಕಾರ ನಡೆಸಿದ್ದಾರೆ. ಕೋವಿಡ್ನಿಂದ ಯಾರೇ ಮೃತಪಟ್ಟರೂ, ಅವರ ಅಂತ್ಯಸಂಸ್ಕಾರ ನಡೆಸಲು ಪ್ರತಿ […]
Read More
ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಪರಿಸ್ಥಿತಿ ಗೋಜಲಾಗಿದೆ. ಕೆಲವು ಕಡೆ ಶವಸಂಸ್ಕಾರಕ್ಕೆ ಅಡ್ಡಿಪಡಿಸಲಾಗುತ್ತಿದೆ. ಕೆಲವು ಕಡೆ ಅಮಾನವೀಯವಾಗಿ ನಾಲ್ಕಾರು ಹೆಣಗಳನ್ನು ಒಟ್ಟಿಗೇ ಗುಂಡಿಗೆಸೆದಿರುವುದು ವಿಡಿಯೋ ಚಿತ್ರೀಕೃತಗೊಂಡು ವೈರಲ್ ಆದ ಬಳಿಕ, ಜನರಲ್ಲಿ ಭೀತಿಯೂ ತಲೆದೋರಿದೆ. ಕೋವಿಡ್ ಪೀಡಿತರನ್ನು ದೂರವಿಟ್ಟು ನಡೆಸಿಕೊಳ್ಳುವುದು ಸಹಜ, ಯಾಕೆಂದರೆ ಸೋಂಕು ಹರಡುವ ಭಯವಿದೆ. ಆದರೆ ಶವಸಂಸ್ಕಾರ ಕನಿಷ್ಠ ಗೌರವಯುತವಾಗಿ ನಡೆಸಬೇಕು ಎಂಬುದು ಮಾನವೀಯ ಸಮಾಜದಲ್ಲಿ ನಂಬಿಕೆಯಿಟ್ಟಿರುವ ಎಲ್ಲರ ಕಳಕಳಿ. ಸತ್ತವರನ್ನು ಸರಿಯಾಗಿ ಕಳಿಸಿಕೊಡಲಿಲ್ಲವಲ್ಲ ಎಂಬುದು ಬಂಧುಗಳಿಗೆ ನಿರಂತರ ಶೋಕವಾಗಬಾರದು. ಕೋವಿಡ್ನಿಂದ ಮೃತರಾದವರನ್ನು ಮಣ್ಣು ಮಾಡುತ್ತಿರುವ […]
Read More
– ಕೊರೊನಾ ಸೋಂಕಿನಿಂದ ಮೃತಪಟ್ಟವರ ಬಗ್ಗೆ ಅನಗತ್ಯ ಭಯ ಬೇಡ – ಸುರಕ್ಷಿತ ಕ್ರಮದೊಂದಿಗೆ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದರೆ ಅಪಾಯವಿಲ್ಲ. ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಸೋಂಕಿನಿಂದ ದಾರುಣವಾಗಿ ಮೃತಪಡುವವರ ಅಂತಿಮ ಸಂಸ್ಕಾರ ಪ್ರಕ್ರಿಯೆ ಮತ್ತಷ್ಟು ದಯನೀಯವಾಗುತ್ತಿದೆ. ಶವ ಸಂಸ್ಕಾರದಿಂದ ರೋಗ ಹರಡಬಹುದೆಂಬ ಅನಗತ್ಯ ಭೀತಿ ಜನರಲ್ಲಿ ಆವರಿಸಿರುವುದೇ ಈ ಪರಿಸ್ಥಿತಿಗೆ ಕಾರಣವಾಗಿದೆ. ಅಂತ್ಯಸಂಸ್ಕಾರದ ವೇಳೆ ಸಮೀಪದ ಬಂಧುಗಳು ಸುರಕ್ಷಿತ ಕ್ರಮಗಳೊಂದಿಗೆ ಭಾಗವಹಿಸಬಹುದು ಎಂಬ ಅಂಶ ಕೇಂದ್ರ ಸರಕಾರದ ಮಾರ್ಗಸೂಚಿಯಲ್ಲೇ ಇದೆ. ಸುರಕ್ಷಿತ ವಿಧಾನ ಅನುಸರಿಸಿ ಸಮೀಪದ ಬಂಧುಗಳು […]
Read More