ರವಿ ಕಾಣದ್ದನ್ನು ಕವಿ ಕಾಣುತ್ತಾನೆ! ತನ್ನ ಕಲ್ಪನಾಶಕ್ತಿಯಿಂದ. ಹಾಗೆಯೇ ಕವಿ ಕಾಣದ್ದನ್ನು ನಮ್ಮ ದೇಶದ ನವೋದ್ಯಮಿಗಳು ಕಂಡಿದ್ದಾರೆ. ಕಳೆದ 15 ವರ್ಷಗಳಲ್ಲಿ ಅವರು ಹುಟ್ಟಿಹಾಕಿರುವ ಸಾವಿರಾರು ಉದ್ಯಮಗಳು ಈ ಕೊರೊನಾ ಕಾಲದಲ್ಲಿ ನಮ್ಮನ್ನು ಕಾಯುತ್ತಿವೆ. ಕವಿಗೆ ಕಲ್ಪನೆ ಹೇಗೋ, ನವೋದ್ಯಮಿ / ಆಂತ್ರಪ್ರನರ್ಗೆ ‘ವಿಷನ್’ ಅಂದರೆ ಹಾಗೆ! ಸಣ್ಣ ಕಿಚ್ಚಿನ ಕಿಡಿಯಿಂದ ಆರಂಭಗೊಂಡು ಇಂದು ಬೃಹತ್ ಉದ್ಯಮಗಳಾಗಿ ಬೆಳೆದಿರುವ ಅದೆಷ್ಟೋ ನವೋದ್ಯಮಗಳೊಂದಿಗೆ ಅವುಗಳ ಆರಂಭಾವಸ್ಥೆಯಿಂದಲೇ ಸಲಹೆಗಾರನಾಗಿ ಕೆಲಸ ಮಾಡುವ ಸೌಭಾಗ್ಯ ನನಗೂ ನನ್ನ ಸಂವಹನ ಸಲಹಾ ಸಂಸ್ಥೆಗೂ […]