ಹದಿನೈದು ದಿನಗಳ ಹಿಂದೆ ಕಾಳಗಕ್ಕೆ ಸಜ್ಜಾದಂತೆ ಹೂಂಕರಿಸುತ್ತಿದ್ದ, ‘ಗಲ್ವಾನ್ ಪ್ರಾಂತ್ಯ ನಮ್ಮದೇ’ ಎಂದಿದ್ದ ಚೀನಾ ಇದ್ದಕ್ಕಿದ್ದಂತೆ ತಣ್ಣಗಾಗಿ, ಘರ್ಷಣೆ ನಡೆದ ಜಾಗದಿಂದ ಎರಡು ಕಿಲೋಮೀಟರ್ ಹಿಂದೆ ಸರಿದಿದ್ದೇಕೆ? ಇದರ ಹಿಂದಿದ್ದ ಭಾರತದ ಒತ್ತಡ ತಂತ್ರಗಳ್ಯಾವುವು? ಗಲ್ವಾನ್ ನದಿಯ ತೀರವನ್ನು ಪೂರ್ತಿಯಾಗಿ ಕಬಳಿಸುವ ಯೋಜನೆಯೇ ಚೀನಾಕ್ಕೆ ಇತ್ತು. ಆದರೆ ಘರ್ಷಣೆ ಪಡೆದುಕೊಂಡ ಸ್ವರೂಪ, ಭಾರತ ಪ್ರಯೋಗಿಸಿದ ಒತ್ತಡ ತಂತ್ರಗಳು, ಅಂತಾರಾಷ್ಟ್ರೀಯವಾಗಿ ಈ ನಡೆ ತನಗೆ ರಿವರ್ಸ್ ಹೊಡೆಯಬಹುದಾದ ಸಾಧ್ಯತೆ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಚೀನಾ ಈಗ ಎರಡು ಕಿಲೋಮೀಟರ್ನಷ್ಟು ಹಿಂದೆ […]
Read More
ಇತರ ಸಣ್ಣ ದೇಶಗಳನ್ನು ಸಾಲ ನೀಡಿ ವಶೀಕರಿಸಿಕೊಂಡಂತೆ ಭಾರತವನ್ನು ವಸಾಹತು ಮಾಡಿಕೊಳ್ಳಲು ಸಾಧ್ಯವಾಗದು ಎಂದು ಅರಿತಿರುವ ಚೀನಾ, ಗಡಿ ತಂಟೆಗಳ ಮೂಲಕ ಭಾರತವನ್ನು ಆಗಾಗ ಬೆದರಿಸಲು ಹಾಗೂ ವಶದಲ್ಲಿಟ್ಟುಕೊಳ್ಳಲು ಪ್ರಯತ್ನಿಸುತ್ತದೆ. ಕಳೆದ ತಿಂಗಳು ಲೇಹ್ ಸಮೀಪದ ಗಲ್ವಾನ್ ಕಣಿವೆಯಲ್ಲಿ ನಡೆದದ್ದು ಚೀನಾದ ಇಂತದೇ ಒಂದು ಪ್ರಯತ್ನ. ಚೀನಾ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಯೋಧರನ್ನು ಕಳೆದುಕೊಂಡ ಭಾರತ, ಅದಕ್ಕೆ ತಕ್ಕನಾದ ಪ್ರತಿಕ್ರಿಯೆಯನ್ನು ತೋರಿತು. ಉಲ್ಬಣಿಸಿದ ಸನ್ನಿವೇಶವನ್ನು ಸರಿಪಡಿಸಲು ಉಭಯ ಕಡೆಗಳ ಕಮಾಂಡರ್ ಮಟ್ಟದ ಹಾಗೂ ರಾಜತಾಂತ್ರಿಕ ಪ್ರತಿನಿಧಿಗಳ ಮಟ್ಟದ […]
Read More
– ಭಾರತ ಒತ್ತಡಕ್ಕೆ ಮಣಿದ ಡ್ರ್ಯಾಗನ್ – ದೋವಲ್-ವಾಂಗ್ ಮಾತುಕತೆ ಯಶಸ್ವಿ. ಹೊಸದಿಲ್ಲಿ: ಭಾರತದ ಹಲವು ಬಗೆಯ ಒತ್ತಡ ಹಾಗೂ ಅಂತಾರಾಷ್ಟ್ರೀಯ ಸಮುದಾಯದ ಎಚ್ಚರಿಕೆಗೆ ಮಣಿದ ಚೀನಾವು ಗಲ್ವಾನ್ ಕಣಿವೆಯಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡಿದೆ. ಇದರಿಂದಾಗಿ ಎರಡು ತಿಂಗಳಿಂದ ಕದನ ಭೀತಿಯಿಂದ ಕುದಿಯುತ್ತಿದ್ದ ವಾಸ್ತವ ಗಡಿ ನಿಯಂತ್ರಣ ರೇಖೆಯ ಗಲ್ವಾನ್ ವ್ಯಾಲಿ ಶಾಂತವಾಗುವ ಲಕ್ಷಣಗಳು ಗೋಚರಿಸಿವೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಜತೆ ದೂರವಾಣಿ ಸುಮಾರು ಎರಡು […]
Read More
ಐಎಸ್ಐ ಮೂಲಕ ಖಲಿಸ್ತಾನ್ ಭಯೋತ್ಪಾದನೆಗೆ ಮರುಜೀವ. ಜಮ್ಮು- ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಟ್ಟೆಚ್ಚರದಿಂದ ವಿಚಲಿತವಾಗಿರುವ ಪಾಕಿಸ್ತಾನದ ಗೂಢಚರ ಸಂಸ್ಥೆ ಐಎಸ್ಐ, ಭಾರತದಲ್ಲಿ ಹೇಗಾದರೂ ಭಯ ಸೃಷ್ಟಿಸುವ ಯತ್ನದಲ್ಲಿ ಪಂಜಾಬ್ನ ಖಲಿಸ್ತಾನ್ ಭಯೋತ್ಪಾದನೆಗೆ ಜೀವ ತುಂಬಲು ಯತ್ನಿಸುತ್ತಿದ್ದಾರೆ. ಅವರ ಯೋಜನೆಗಳೇನು, ಎಲ್ಲಿಂದ ಅನುಷ್ಠಾನಗೊಳ್ಳುತ್ತಿದೆ ಎಂಬ ವಿವರಗಳು ಇಲ್ಲಿವೆ. ಪಂಜಾಬ್ನಲ್ಲಿ ಬಹುತೇಕ ಅಳಿದೇ ಹೋಗಿದ್ದ ಖಲಿಸ್ತಾನ್ ಚಳವಳಿ ಹಾಗೂ ಭಯೋತ್ಪಾದನೆಗೆ ಮತ್ತೆ ಮರುಜೀವ ಬಂದಿದೆ. ಪಂಜಾಬ್ನ ಅಲ್ಲಲ್ಲಿ ಬಾಂಬ್ ಸ್ಫೋಟ, ಗುಂಡಿನ ದಾಳಿ ನಡೆಸಲು ಉಗ್ರರು ಸಂಚು ನಡೆಸುತ್ತಿದ್ದು, ಇದು […]
Read More
ಸ್ಥಳೀಯ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಯಲ್ಲಿ ಉನ್ನತ ಶಿಕ್ಷ ಣ ಸಂಸ್ಥೆಗಳ ಪಾತ್ರವೇನು? – ಪ್ರೊ. ನಾಗೇಶ್ವರ ರಾವ್. ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷ ನ್ 69ಎ ಅಡಿಯಲ್ಲಿರುವ ತನ್ನ ಅಧಿಕಾರವನ್ನು ಬಳಸಿ 59 ಚೀನೀ ಮೊಬೈಲ್ ಅಪ್ಲಿಕೇಶನ್ಗಳನ್ನು ನಿಷೇಧಿಸಿದೆ. ಅವುಗಳು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ರಕ್ಷಣೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿರುವ ಮಾಹಿತಿಯನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ನಿಷೇಧಿತ 59 ಆ್ಯಪ್ಗಳ […]
Read More
ದೇಶದ ಜನಸಂಖ್ಯೆಯ ಅರ್ಧಕ್ಕಿಂತಲೂ ಹೆಚ್ಚು ಮಂದಿ 25ಕ್ಕಿಂತ ಹೆಚ್ಚು ವಯಸ್ಸಿನವರು! ಇತಿಹಾಸದಲ್ಲೇ ವೊತ್ತ ವೊದಲ ಬಾರಿಗೆ, ಭಾರತದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆ ಈಗ 25 ವರ್ಷದವರು ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು. ಪುರುಷ- ಸ್ತ್ರೀ ಎಂಬ ವ್ಯತ್ಯಾಸವಿಲ್ಲದೆ, ನಗರ- ಹಳ್ಳಿ ಎಂಬ ವ್ಯತ್ಯಾಸವಿಲ್ಲದ ಸರಾಸರಿ ಚಿತ್ರಣ ಹೀಗಿದೆ. ಭಾರತೀಯ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಕಮಿಷನರ್ ನಡೆಸಿದ ಮಾದರಿ ನೋಂದಣಿ ವ್ಯವಸ್ಥೆ-2018ರ ವರದಿಯಲ್ಲಿ ಈ ವಿಚಾರ ಕಂಡುಬಂದಿದೆ. ಇದರಿಂದ ಏನು ತಿಳಿಯಬಹುದು? ಏನೆಂದರೆ, ಭಾರತದ ಜನಸಂಖ್ಯೆ ಹೆಚ್ಚು […]
Read More
– ಲಡಾಖ್ ಮುಂಚೂಣಿ ಸೇನಾ ನೆಲೆಗೆ ಮೋದಿ ಭೇಟಿ | ಸೈನಿಕರಿಗೆ ಹುರುಪು – ಆಕ್ರಮಣದ ಬುದ್ಧಿ ಬಿಡದಿದ್ದರೆ ಸರ್ವನಾಶವಾಗ್ತೀರಿ: ಮೋದಿ ಕಟು ಎಚ್ಚರಿಕೆ. ಲೆಹ್/ಹೊಸದಿಲ್ಲಿ: ಪೂರ್ವ ಲಡಾಖ್ ಸಂಘರ್ಷದ ಬಳಿಕ ಭಾರತದಿಂದ ಒಂದರ ನಂತರ ಒಂದು ಪೆಟ್ಟು ತಿನ್ನುತ್ತಿರುವ ಚೀನಾಗೆ ಶುಕ್ರವಾರ ಮತ್ತೊಂದು ಆಘಾತ ತಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪೂರ್ವ ಲಡಾಖ್ನ ಲೆಹ್ನಲ್ಲಿರುವ ಮುಂಚೂಣಿ ಸೇನಾ ನೆಲೆಗೆ ದಿಢೀರ್ ಭೇಟಿ ನೀಡುವ ಮೂಲಕ ನೆರೆ ರಾಷ್ಟ್ರಕ್ಕೆ ನೇರ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಚೀನಾ ಜತೆ ಗಡಿ ಹಂಚಿಕೊಂಡಿರುವ […]
Read More
-ಮಿಗ್ ವಿಮಾನ, ಸುಖೋಯಿ ಜೆಟ್ ಸೇರಿ 39,800 ಕೋಟಿ ರೂ. ವೆಚ್ಚದ ಶಸ್ತ್ರಾಸ್ತ್ರಗಳ ಖರೀದಿಗೆ ಒಪ್ಪಿಗೆ. ಭಾರತ ಎಂದಿಗೂ ತಾನಾಗೇ ಯುದ್ಧ ಮಾಡುವುದಿಲ್ಲ. ಆದರೆ, ದಾಳಿ ಮಾಡಿದರೆ ಸುಮ್ಮನೆ ಇರುವುದಿಲ್ಲ ಎಂಬ ನೀತಿಯನ್ನು ದಶಕಗಳಿಂದ ಅನುಸರಿಸಿಕೊಂಡು ಬಂದಿದೆ. ಕಳೆದ ಆರು ವರ್ಷದಲ್ಲಿ ಈ ನೀತಿಗೇನೂ ಭಂಗ ಬಂದಿಲ್ಲ. ಆದರೆ, ಸೇನೆಯ ಆಕ್ರಮಣಶೀಲತೆ ಮಾತ್ರ ಎದ್ದು ಕಾಣುತ್ತಿದೆ. ಭಾರತದ ಮುಟ್ಟಿದರೆ ತಟ್ಟೇ ಬಿಟ್ಟೇನು ಎಂಬ ನೀತಿ ಪಾಕಿಸ್ತಾನ ಮತ್ತು ಚೀನಾಗಳ ಗಡಿ ವಿಷಯದಲ್ಲಿ ನಿಜವಾಗುತ್ತಿದೆ. ಈ ಹಂತದಲ್ಲಿ ಸೇನೆ […]
Read More
ವಿಶ್ವದ ತಂತ್ರಜ್ಞಾನ ವಲಯದ ಕಿಂಗ್ ಅನಿಸಿಕೊಳ್ಳುವ ಚಿಂತನೆ ಚೀನಾದ್ದಾಗಿತ್ತು. ಆದರೆ 59 ಆ್ಯಪ್ಗಳನ್ನು ನಿಷೇಧ ಮಾಡುವ ಮೂಲಕ ಭಾರತ ಚೀನಾವನ್ನು ಮಣಿಸುವ ಕ್ರಿಯೆಗಳ ಸರಪಟಾಕಿಗೆ ಬೆಂಕಿ ಹಚ್ಚಿದೆ. ಇದು ಚೀನಾದ ಕನಸಿಗೆ ಕೊಳ್ಳಿ ಇಡುವ ಕಾರ್ಯದ ಆರಂಭ ಅಷ್ಟೇ. ಕಳಪೆ ಮಾಲುಗಳ ಕಿಂಗ್ 1980 ಹಾಗೂ 90ರ ದಶಕದಲ್ಲಿ ಅಮೆರಿಕ, ಜಗತ್ತಿನ ಟೆಕ್ನಾಲಜಿ ಕಿಂಗ್ ಎನಿಸಿಕೊಂಡಿತ್ತು. ನಂತರದ ದಶಕಗಳಲ್ಲಿ ಚೀನಾ ಆ ಸ್ಥಾನಕ್ಕೆ ಲಗ್ಗೆ ಹಾಕಿತು. ಅಮೆರಿಕ ಮುಂತಾದ ಮುಂದುವರಿದ ದೇಶಗಳಿಂದ ತಂತ್ರಜ್ಞಾನವನ್ನು ಅಪಹರಿಸಿ ಅಥವಾ ಅನುಕರಿಸಿ […]
Read More
ಚೀನಾ ಮೂಲದ 59 ಆ್ಯಪ್ಗಳನ್ನು ಭಾರತ ಸರಕಾರ ನಿರ್ಬಂಧಿಸಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೂ ಚೀನಾ ಮೂಲದ ವೀಬೋ ಸಾಮಾಜಿಕ ಜಾಲತಾಣದಿಂದ ಹೊರಬಂದಿದ್ದು, ಅದರಲ್ಲಿದ್ದ ತಮ್ಮ ಖಾತೆಯನ್ನು ಅಳಿಸಿಹಾಕಿದ್ದಾರೆ. ದೇಶದ ಭದ್ರತೆ, ಸಾರ್ವಭೌಮತೆ, ಸಂಸ್ಕೃತಿಗಳಿಗೆ ಹಾನಿಕಾರಕವಾದ ಅಂಶಗಳನ್ನು ಹೊಂದಿರುವುದರಿಂದ ಈ ಆ್ಯಪ್ಗಳನ್ನು ನಿಷೇಧಿಸುತ್ತಿರುವುದಾಗಿ ಸರಕಾರ ತಿಳಿಸಿದೆ. ಈ 59 ಆ್ಯಪ್ಗಳಲ್ಲಿ ಟಿಕ್ಟಾಕ್ನಂಥ ಜನಪ್ರಿಯ ವಿಡಿಯೋ ಬ್ಲಾಗಿಂಗ್ ಆ್ಯಪ್ಗಳೂ ಇದ್ದು, ಇದನ್ನು ದೇಶದಲ್ಲಿ 20 ಲಕ್ಷಕ್ಕಿಂತಲೂ ಅಧಿಕ ಮಂದಿ ಡೌನ್ಲೋಡ್ ಮಾಡಿಕೊಂಡು ಬಳಸುತ್ತಿದ್ದರು. ಕಳೆದ ತಿಂಗಳು ಭಾರತದ […]
Read More