– ಮೊದಲ ಕಂತಿನ ಐದು ರಫೇಲ್ ಜೆಟ್ ಭಾರತದ ತೆಕ್ಕೆಗೆ – ತಂಟೆಕೋರ ಚೀನಾ-ಪಾಕ್ ಜೋಡಿ ಎದೆಯಲ್ಲಿ ನಡುಕ. ಹೊಸದಿಲ್ಲಿ/ಅಂಬಾಲಾ: ಭಾರತೀಯ ರಕ್ಷಣಾ ಸಾಮರ್ಥ್ಯವನ್ನು ಎದುರಾಳಿಗಳ ಎದೆಯಲ್ಲಿ ನಡುಕ ಹುಟ್ಟಿಸುವ ಮಟ್ಟಕ್ಕೆ ಎತ್ತರಿಸಬಲ್ಲ ಯುದ್ಧ ‘ವಿಮಾನಗಳ ರಾಜ’ ರಫೇಲ್ 5 ಜೆಟ್ಗಳು ಬುಧವಾರ ಮಧ್ಯಾಹ್ನ ಹರಿಯಾಣದ ಅಂಬಾಲಾ ವಾಯುನೆಲೆಗೆ ಬಂದಿಳಿದಿವೆ. ಒಟ್ಟು 36ರ ಪೈಕಿ ಮೊದಲ ಬ್ಯಾಚ್ನ 5 ಯುದ್ಧ ವಿಮಾನಗಳನ್ನು ಫ್ರಾನ್ಸ್ ಸರಕಾರ ಒಪ್ಪಿಸಿದೆ. ಸೋಮವಾರ ಫ್ರಾನ್ಸ್ನಿಂದ ಹಾರಿದ್ದ 5 ರಫೇಲ್ ಜೆಟ್ಗಳ ಪೈಕಿ ಮೂರು ಸಿಂಗಲ್ […]
Read More
ಫ್ರಾನ್ಸ್ನಿಂದ ಹೊರಟಿರುವ ರಫೇಲ್ ಯುದ್ಧವಿಮಾನಗಳು ಯುಎಇನಲ್ಲಿ ಸಿಂಗಲ್ ಸ್ಟಾಪ್ ನೀಡಿ, ಬುಧವಾರ ಭಾರತಕ್ಕೆ ತಲುಪಲಿವೆ. ರಫೇಲ್ ಫೈಟರ್ ಜೆಟ್ಗಳ ಫುಲ್ ಡಿಟೇಲ್ಸ್ ಇಲ್ಲಿದೆ. ಬಹುದಿನಗಳ ಕನಸು ನನಸಾಗುವ ಕ್ಷಣ ಹತ್ತಿರವಾಗಿದೆ. ಭಾರತೀಯ ವಾಯು ಪಡೆಗೆ ‘ಪವನಶಕ್ತಿ’ ನೀಡಲಿರುವ, ಅತ್ಯಾಧುನಿಕ ‘ರಫೇಲ್ ಯುದ್ಧವಿಮಾನ’ಗಳು ಬುಧವಾರ(ಜು.29) ಭಾರತಕ್ಕೆ ಬರಲಿವೆ. ವಿಶೇಷ ಎಂದರೆ, ಈ ರಫೇಲ್ಗಳನ್ನು ಲಡಾಕ್ ಸೆಕ್ಟರ್ನಲ್ಲಿ ನಿಯೋಜನೆ ಮಾಡಲು ಯೋಜಿಸಲಾಗಿದೆ! ಎಲ್ಎಸಿ(ವಾಸ್ತವಿಕ ಗಡಿ ರೇಖೆ)ಗೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ಮಧ್ಯೆ ಸಂಘರ್ಷ ಏರ್ಪಟ್ಟಿದ್ದು, ಇಂಥ ಹೊತ್ತಿನಲ್ಲಿ ರಫೇಲ್ಗಳು […]
Read More
ಒಂದೆಡೆ ಕೋವಿಡ್ ಕೇಸುಗಳು ಅನಿಯಂತ್ರತವಾಗಿ ಏರುತ್ತಿರುವಂತೆಯೇ, ಇನ್ನೊದೆಡೆ ಕೊರೊನೋತ್ತರ ಬದುಕಿನಲ್ಲಿ ಚೈತನ್ಯವನ್ನು ಇಮ್ಮಡಿಸುವ ಪ್ರಕ್ರಿಯೆಗಳು ಆರಂಭಗೊಂಡಿವೆ. ಆಗಸ್ಟ 1ರಿಂದ ಕೊರೊನಾ ಲಾಕ್ಡೌನ್ ನಿರ್ಬಂಧಗಳು ಇನ್ನಷ್ಟು ಸಡಿಲಿಕೆಯಾಗುವ ನಿರೀಕ್ಷೆ ಇದ್ದು ಥಿಯಟರ್ ಹಾಗೂ ಜಿಮ್ಗಳ ಕಾರ್ಯಾರಂಭಕ್ಕೆ ಷರತ್ತು ಬದ್ಧ ಅನುಮತಿ ಸಿಗುವ ನಿರೀಕ್ಷೆ ಇದೆ. ಗುಣಮುಖರ ಪ್ರಮಾಣ ಏರುಗತಿಯಲ್ಲಿರುವುದು ಹಾಗೂ ಅದರೊಟ್ಟಿಗೆ ಬದುಕುವುದು ಜನರಿಗೆ ಅಭ್ಯಾಸವಾಗಿರುವ ಹಿನ್ನೆಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇನ್ನು ರಾಜ್ಯದಲ್ಲಿ, ಶಾಲೆಗಳ ಆರಂಭ ಅನಿಶ್ಚಿತತೆಯಿಂದ ಕೂಡಿರುವುದರಿಂದ ಸಾರ್ವಜನಿಕ ಶಿಕ್ಷಣ ಇಲಾಖೆ, ಈ ಬಾರಿ 1ರಿಂದ […]
Read More
– ರಾಜ್ಯದಲ್ಲಿ ಪರ್ಯಾಯ ನಾಯಕತ್ವ ಇದ್ದೇ ಇದೆ, ಆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸುತ್ತಾರೆ. – ಶಶಿಧರ ಹೆಗಡೆ, ಬೆಂಗಳೂರು. ನನ್ನ ಸಾರ್ವಜನಿಕ ಜೀವನದಲ್ಲಿ 40-45 ವರ್ಷದಿಂದ ಎಂದೂ ವಿಶ್ರಾಂತಿ ತೆಗೆದುಕೊಂಡಿಲ್ಲ. ವಿಶ್ರಾಂತಿ ತೆಗೆದುಕೊಂಡರೆ ನನ್ನ ಆರೋಗ್ಯ ಕೆಟ್ಟು ಹೋಗುತ್ತದೆ. ಜೀವನದ ಕೊನೆಯ ಉಸಿರು ಇರುವವರೆಗೆ ಕರ್ತವ್ಯ ನಿರ್ವಹಿಸುತ್ತೇನೆ. ಇದಲ್ಲದೆ ಪರ್ಯಾಯ ಎನ್ನುವುದು ಇದ್ದೇ ಇರುತ್ತದೆ. ಈ ಬಗ್ಗೆ ಪ್ರಧಾನಿಯವರು ಯೋಚನೆ ಮಾಡುತ್ತಾರೆ. ರಾಜ್ಯದಲ್ಲಿ ಬಿಜೆಪಿ ಸದೃಢವಾಗಿದ್ದು, ಯಾವುದೇ ಕೊರತೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟವಾಗಿ […]
Read More
ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ಶ್ರೀರಾಮ ಮಂದಿರಕ್ಕೆ ಭೂಮಿಪೂಜೆ ನಡೆಯಲಿದೆ. ಸ್ವತಃ ಪ್ರಧಾನಿ ಭಾಗವಹಿಸುತ್ತಿದ್ದಾರೆ. ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಂದಿರ ಹೇಗಿರುತ್ತದೆ ಎಂಬ ಕುತೂಹಲ ಎಲ್ಲರಲ್ಲಿದೆ. ಈ ಬಗ್ಗೆ ಒಂದು ನೋಟ ಇಲ್ಲಿದೆ. ಹೇಗೆ ನಡೆಯಲಿದೆ ಭೂಮಿ ಪೂಜೆ? ಅಯೋಧ್ಯೆಯಲ್ಲಿ ರಾಮಲಲ್ಲಾನಿಗೆ ನಿರ್ಮಾಣವಾಗುವ ಮಂದಿರದ ಭೂಮಿಪೂಜೆ ಕಾರ್ಯಕ್ರಮ ಆ.5ರಂದು ಮಧ್ಯಾಹ್ನ 12.15ರ ಅಭಿಜಿನ್ ಮುಹೂರ್ತ ಕಾಲಕ್ಕೆ ಸರಿಯಾಗಿ ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ನೆರವೇರಲಿದೆ. ‘ಹೌಡಿ ಮೋದಿ’ ಕಾರ್ಯಕ್ರಮದಂತೆ, ದೇಶಾದ್ಯಂತ ಮತ್ತು ವಿದೇಶಗಳಲ್ಲಿಯೂ ಲೈವ್ ಪ್ರಸಾರ ಕಾಣಲಿದೆ […]
Read More
ಗಡಿಯಲ್ಲಿ ಚೀನಾ ಬೆದರಿಕೆ, ಗಡಿಯೊಳಕ್ಕೆ ಕೊರೊನಾ ವೈರಸ್ ಹಾವಳಿ ಉಂಟು ಮಾಡಿರುವ ನಕಾರಾತ್ಮಕ ಪರಿಣಾಮಗಳ ನಡುವೆಯೇ ಭಾರತದ ಆರ್ಥಿಕತೆಗೆ ಹೊಸ ಹುಮ್ಮಸ್ಸು ತರುವ ಬೆಳವಣಿಗೆ ಕಂಡು ಬಂದಿದೆ. ಜಗತ್ತಿನ ಅತಿದೊಡ್ಡ ಟೆಕ್ ಕಂಪನಿ ಗೂಗಲ್ ಮುಂಬರುವ 5ರಿಂದ 7 ವರ್ಷಗಳಲ್ಲಿ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ಘೋಷಣೆ ಮಾಡಿದೆ. ಸೋಮವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಮೂಲದವರೇ ಆದ ಗೂಗಲ್ ಸಿಇಒ ಸುಂದರ್ ಪಿಚೈ ಜೊತೆ ನಡೆಸಿದ ಮಾತುಕತೆಯ ಬೆನ್ನೆಲ್ಲೇ ಆ […]
Read More
ಮೋದಿಯವರ ಅಷ್ಟೊಂದು ವಿದೇಶ ಪ್ರವಾಸಗಳ ಪರಿಣಾಮ ಈಗ ತಿಳಿಯತೊಡಗಿದೆ – ರಮೇಶ್ ಕುಮಾರ್ ನಾಯಕ್. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದಾ ವಿದೇಶ ಪ್ರವಾಸದ ಶೋಕಿ. ಬೆನ್ನುಬೆನ್ನಿಗೆ ಫಾರಿನ್ ಟೂರ್ ಮಾಡುವ ಮೂಲಕ ಖಜಾನೆಯ ದುಡ್ಡಿನ ದುಂದು ವೆಚ್ಚ ಮಾಡುತ್ತಿದ್ದಾರೆ. ದೇಶದ ಕೋಟ್ಯಂತರ ಜನ ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿರುವಾಗ ಈ ಪ್ರಧಾನಿ ದಿನ ಬೆಳಗಾದರೆ ವಿಶೇಷ ವಿಮಾನ ಏರಿ ದೇಶ ಸುತ್ತುವುದೇಕೆ? ಆಗಾಗ ಅಮೆರಿಕ, ರಷ್ಯಾ, ಜಪಾನ್, ಜರ್ಮನಿ, ಫ್ರಾನ್ಸ್, ಭೂತಾನ್ ಎಂದೆಲ್ಲ ರಾಜತಾಂತ್ರಿಕ ಭೇಟಿ […]
Read More
– ಕಾರ್ಯಕರ್ತರನ್ನು ಹುರಿದುಂಬಿಸಿದ ಪ್ರಧಾನಿ – ಪ್ರಧಾನಿಗೆ ಮೋದಿ, ಅಧ್ಯಕ್ಷ ನಡ್ಡಾಗೆ ರಾಜ್ಯದ ಕೊರೊನಾ ಮಾಹಿತಿ ನೀಡಿದ ರವಿಕುಮಾರ್. ಹೊಸದಿಲ್ಲಿ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿಜನರ ನೆರವಿಗೆ ಧಾವಿಸಿರುವ ಬಿಜೆಪಿ ಕಾರ್ಯಕರ್ತರ ಗುಣಗಾನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಹೆಚ್ಚಿನ ಸೇವೆಗೆ ಅನುಕೂಲವಾಗುವ ದಿಸೆಯಲ್ಲಿ ಕಾರ್ಯಕರ್ತರಿಗೆ ಸಪ್ತ ಸೂತ್ರಗಳನ್ನು ನೀಡಿದ್ದಾರೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಕಾರ್ಯಕರ್ತರು ಯಾವ ರೀತಿ ಜನರ ನೆರವಿಗೆ ಧಾವಿಸಿದ್ದಾರೆ ಎಂಬ ಕುರಿತು ‘ಸೇವಾ ಹಿ ಸಂಘಟನಾ ಅಭಿಯಾನ್’ ವರ್ಚುವಲ್ ಸಭೆಯಲ್ಲಿ ಮಾಹಿತಿ ಪಡೆದ ಬಳಿಕ […]
Read More
– ಲಡಾಖ್ ಮುಂಚೂಣಿ ಸೇನಾ ನೆಲೆಗೆ ಮೋದಿ ಭೇಟಿ | ಸೈನಿಕರಿಗೆ ಹುರುಪು – ಆಕ್ರಮಣದ ಬುದ್ಧಿ ಬಿಡದಿದ್ದರೆ ಸರ್ವನಾಶವಾಗ್ತೀರಿ: ಮೋದಿ ಕಟು ಎಚ್ಚರಿಕೆ. ಲೆಹ್/ಹೊಸದಿಲ್ಲಿ: ಪೂರ್ವ ಲಡಾಖ್ ಸಂಘರ್ಷದ ಬಳಿಕ ಭಾರತದಿಂದ ಒಂದರ ನಂತರ ಒಂದು ಪೆಟ್ಟು ತಿನ್ನುತ್ತಿರುವ ಚೀನಾಗೆ ಶುಕ್ರವಾರ ಮತ್ತೊಂದು ಆಘಾತ ತಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪೂರ್ವ ಲಡಾಖ್ನ ಲೆಹ್ನಲ್ಲಿರುವ ಮುಂಚೂಣಿ ಸೇನಾ ನೆಲೆಗೆ ದಿಢೀರ್ ಭೇಟಿ ನೀಡುವ ಮೂಲಕ ನೆರೆ ರಾಷ್ಟ್ರಕ್ಕೆ ನೇರ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಚೀನಾ ಜತೆ ಗಡಿ ಹಂಚಿಕೊಂಡಿರುವ […]
Read More
-ಮಿಗ್ ವಿಮಾನ, ಸುಖೋಯಿ ಜೆಟ್ ಸೇರಿ 39,800 ಕೋಟಿ ರೂ. ವೆಚ್ಚದ ಶಸ್ತ್ರಾಸ್ತ್ರಗಳ ಖರೀದಿಗೆ ಒಪ್ಪಿಗೆ. ಭಾರತ ಎಂದಿಗೂ ತಾನಾಗೇ ಯುದ್ಧ ಮಾಡುವುದಿಲ್ಲ. ಆದರೆ, ದಾಳಿ ಮಾಡಿದರೆ ಸುಮ್ಮನೆ ಇರುವುದಿಲ್ಲ ಎಂಬ ನೀತಿಯನ್ನು ದಶಕಗಳಿಂದ ಅನುಸರಿಸಿಕೊಂಡು ಬಂದಿದೆ. ಕಳೆದ ಆರು ವರ್ಷದಲ್ಲಿ ಈ ನೀತಿಗೇನೂ ಭಂಗ ಬಂದಿಲ್ಲ. ಆದರೆ, ಸೇನೆಯ ಆಕ್ರಮಣಶೀಲತೆ ಮಾತ್ರ ಎದ್ದು ಕಾಣುತ್ತಿದೆ. ಭಾರತದ ಮುಟ್ಟಿದರೆ ತಟ್ಟೇ ಬಿಟ್ಟೇನು ಎಂಬ ನೀತಿ ಪಾಕಿಸ್ತಾನ ಮತ್ತು ಚೀನಾಗಳ ಗಡಿ ವಿಷಯದಲ್ಲಿ ನಿಜವಾಗುತ್ತಿದೆ. ಈ ಹಂತದಲ್ಲಿ ಸೇನೆ […]
Read More