ಮೊದಲ ದಿನ ನಿರಾಳ – ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಭಾರಂಭ | 98.3% ವಿದ್ಯಾರ್ಥಿಗಳು ಹಾಜರು

ವಿಕ ಸುದ್ದಿಲೋಕ ಬೆಂಗಳೂರು.  ಕೊರೊನಾ ಆತಂಕದ ನಡುವೆ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ ಪರೀಕ್ಷೆಗಳು ಗುರುವಾರ ಯಶಸ್ವಿಯಾಗಿ ನಡೆದಿದ್ದು, ಶೇ.98.3ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ, ಪೊಲೀಸರು, ಶಿಕ್ಷಕರು, ಪೋಷಕರು ಮತ್ತು ಸಾರ್ವಜನಿಕರು ಎಲ್ಲರೂ ಸೇರಿ ದೇಶಾದ್ಯಂತ ಕುತೂಹಲ ಕೆರಳಿಸಿದ್ದ, ವ್ಯಾಪಕ ಚರ್ಚೆಗೆ ಗುರಿಯಾಗಿದ್ದ ಪರೀಕ್ಷೆಯನ್ನು ಯಾವುದೇ ದೊಡ್ಡ ಸಮಸ್ಯೆಗಳಿಲ್ಲದೆ ನಡೆಸುವಲ್ಲಿ ಯಶಸ್ವಿಯಾದರು. ರಾಜ್ಯಾದ್ಯಂತ ಒಟ್ಟು 2879 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಿತು. […]

Read More

ಇಂದಿನಿಂದ ಎಸ್ಸೆಸ್ಸೆಲ್ಸಿ ಅಗ್ನಿಪರೀಕ್ಷೆ – ಸಂಕಷ್ಟ ಕಾಲದ ಪರೀಕ್ಷೆಗೆ ಸಕಲ ಕ್ರಮ – ವಿದ್ಯಾರ್ಥಿಗಳಿಗೆ ಶುಭಾಶಯ

ವಿಕ ಸುಕದ್ದಿಲೋಕ ಬೆಂಗಳೂರು. ಕೋವಿಡ್-19 ಆತಂಕದ ನಡುವೆ ಗುರುವಾರದಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿವೆ. ಪರೀಕ್ಷೆಯ ಸುರಕ್ಷತೆ ವಿಚಾರವಾಗಿ ಮೊದಲಿದ್ದ ಆತಂಕ ದೂರವಾಗಿದೆ. ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಎದುರಿಸಲು ಸಜ್ಜಾಗಿರುವುದು ಎಲ್ಲೆಡೆ ಕಂಡು ಬಂದಿದೆ. ಪೋಷಕರು, ಶಿಕ್ಷಕರು, ಗಣ್ಯರು ಹಾಗೂ ಊರಿನ ಜನರು ವಿದ್ಯಾರ್ಥಿಗಳ ಬೆನ್ನಿಗೆ ನಿಂತು ನಿರ್ಭಯವಾಗಿ ಪರೀಕ್ಷೆ ಬರೆಯುವಂತೆ ಪ್ರೇರೇಪಿಸುತ್ತಿದ್ದಾರೆ. ಎಲ್ಲೆಡೆ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಸೇಷನ್ ಸೇರದಂತೆ ಸಕಲ ಸುರಕ್ಷತಾ ಕ್ರಮಗಳೊಂದಿಗೆ ಸಿದ್ಧತೆಗಳನ್ನು ನಡೆಸಲಾಗಿದೆ. ಕೆಲವೆಡೆ ಶಾಲೆಗಳು ತಳಿರು-ತೋರಣಗಳಿಂದ ವಿದ್ಯಾರ್ಥಿಗಳನ್ನು ಸ್ವಾಗತಿಸಲು […]

Read More

ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಲಿ – ಆತಂಕರಹಿತ ಸುರಕ್ಷತೆಯೇ ಆದ್ಯತೆ

ಶೈಕ್ಷಣಿಕ ಜೀವನದ ಅತಿ ಮಹತ್ವದ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಾಳೆಯಿಂದ ಕಟ್ಟೆಚ್ಚರದ ನಡುವೆ ಆರಂಭಗೊಳ್ಳಲಿದೆ. ಸಾಮಾನ್ಯ ಪರಿಸ್ಥಿತಿಯಲ್ಲಿಯೇ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಈ ವಾತಾವರಣದಲ್ಲಿ ಒಂದು ಬಗೆಯ ಉದ್ವಿಗ್ನತೆ ನಿರ್ಮಿಸುತ್ತವೆ. ಈಗಂತೂ ಕೊರೊನಾ ಕಾಲಘಟ್ಟದಲ್ಲಿ ಅದು ನಡೆಯುತ್ತಿರುವುದರಿಂದ, ಅದಕ್ಕೆ ಇನ್ನಷ್ಟು ಆತಂಕದ ಅವರಣ ನಿರ್ಮಾಣವಾಗಿದೆ. ಜೂನ್‌ 25ರಂದು ಪರೀಕ್ಷೆ ನಡೆಯಲಿ ಎಂದು ಸರಕಾರ ಹಾಗೂ ತಜ್ಞರು ತೀರ್ಮಾನಿಸುವಾಗ, ಕೊರೊನಾ ಕೇಸುಗಳು ಇಷ್ಟೊಂದು ಪ್ರಮಾಣದಲ್ಲಿ ವೃದ್ಧಿಯಾಗುತ್ತವೆ ಎಂಬ ನಿರೀಕ್ಷೆಯಿರಲಿಲ್ಲ. ಆದರೆ ಕಳೆದ ಒಂದು ವಾರದಿಂದ ಸೋಂಕು ಹಾಗೂ ಮರಣ ಪ್ರಮಾಣ […]

Read More

ಇದ್ದರೇನು ಕೊರೊನಾ, ಬರೆದೇ ಬಿಡುವೆವು ಪರೀಕ್ಷೆನಾ!

ಕೊರೊನಾ ಭೀತಿಯ ನಡುವೆಯೇ ರಾಜ್ಯ ಸರಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜೂನ್ 25ರಿಂದ ಆರಂಭವಾಗಲಿರುವ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗಿದೆ. ಪರೀಕ್ಷೆ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡುವುದು ಸೇರಿದಂತೆ ಕೊರೊನಾ ಸೋಂಕು ತಡೆಯಲು ಬೇಕಾಗುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳಿಗೆ ಸಾರಿಗೆ, ಹಾಸ್ಟೆಲ್, ಆರೋಗ್ಯ ತಪಾಸಣೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕೂಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಕೊರೊನಾ ಭೀತಿಯ ನಡುವೆಯೇ ರಾಜ್ಯ ಸರಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. […]

Read More

ಗೊಂದಲ ಬಿಡಿ, ಚೆನ್ನಾಗಿ ಬರೆಯಿರಿ

– ರಾಜ್ಯಾದ್ಯಂತ ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ | ಕೊರೊನಾ ರಕ್ಷಣೆಯೊಂದಿಗೆ ಪರೀಕ್ಷೆ ನಡೆಸಲು ಸಿದ್ಧತೆ. ವಿಕ ಸುದ್ದಿಲೋಕ ಬೆಂಗಳೂರು. ಕೋವಿಡ್-19 ಆತಂಕದ ನಡುವೆ ಜೂ.25ರಿಂದ ಪ್ರಾರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿ ಸಜ್ಜುಗೊಳಿಸಲಾಗಿದೆ. ಪರೀಕ್ಷೆ ವ್ಯವಸ್ಥಿತವಾಗಿ ನಡೆಯುತ್ತದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಸರಕಾರ ಅಭಯ ನೀಡಿದೆ. ರಾಜ್ಯಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆ ಮುಂದೂಡಬೇಕೆಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿಯನ್ನು ಸರಕಾರ ಸಾರಾಸಗಟಾಗಿ ತಳ್ಳಿ ಹಾಕಿದೆ. […]

Read More

ಕೊರೊನಾ ಮನೋಲೋಕ

– ರಮೇಶ್‌ ಪೋಖ್ರಿಯಾಲ್‌ ‘ನಿಶಾಂಕ್‌’ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರು. ಪರೀಕ್ಷಾ ಪೆ ಚರ್ಚಾ 3.0ರಲ್ಲಿ ಪ್ರಧಾನಿಯವರು ಒತ್ತಡ, ಆತಂಕ ಮತ್ತು ಅವುಗಳನ್ನು ನಿಭಾಯಿಸುವ ತಂತ್ರಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸುತ್ತಿರುವಾಗ, ‘‘ನಮ್ಮ ಮಾನಸಿಕ ಸ್ಥಿತಿ ಹೇಗಿರಬೇಕೆಂದರೆ, ನಾವು ಒಮ್ಮೆ ವಿಫಲವಾದರೂ, ಮತ್ತೆ ಪ್ರಯತ್ನಿಸಬೇಕು. ಜೀವನದಲ್ಲಿ ಈ ಮನೋಭಾವವು ಪ್ರತಿ ವಿದ್ಯಾರ್ಥಿಗೂ ಇರಬೇಕು,’’ ಎಂದು ಹೇಳಿದ್ದರು. ಕೋವಿಡ್‌-19 ಸಾಂಕ್ರಾಮಿಕ ರೋಗವು ವಿದ್ಯಾರ್ಥಿಗಳು ಮತ್ತು ಇತರರ ಮೇಲೆ ಪರಿಣಾಮ ಬೀರಿದೆ. ಪರಿಣಾಮವಾಗಿ ಎಲ್ಲಾ ಕಡೆಯೂ ಒತ್ತಡದ ಸಂದರ್ಭಗಳು ಸೃಷ್ಟಿಯಾಗಿವೆ. […]

Read More

ಎಸ್ಸೆಸ್ಸೆಲ್ಸಿಗೂ ಮಾದರಿ – ಯಶಸ್ವಿಯಾದ ಪಿಯುಸಿ ಪರೀಕ್ಷೆ

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಯಾವುದೇ ಆತಂಕವಿಲ್ಲದೆ, ಸುಸಜ್ಜಿತವಾಗಿ ಹಾಗೂ ಅಹಿತಕರ ಘಟನೆಗಳಿಲ್ಲದೆ ನೆರವೇರಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮತ್ತು ಹೊರಗೆ ಸಾಮಾಜಿಕ ಅಂತರ, ಆರೋಗ್ಯ ನಿಗಾಕ್ಕೆ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಗೇಟ್‌ಗಳ ಬಳಿಯೇ ವಿದ್ಯಾರ್ಥಿಗಳಿಗೆ ದೇಹದ ಉಷ್ಣಾಂಶ ಪರೀಕ್ಷೆ, ಸ್ಯಾನಿಟೈಸರ್‌ನಿಂದ ಸ್ವಚ್ಛತೆ, ಪ್ರತಿ ವಿದ್ಯಾರ್ಥಿಗೂ ಮಾಸ್ಕ್‌ ಕಡ್ಡಾಯ, ಎಲ್ಲಾ ಕೊಠಡಿಗಳು ಮತ್ತು ಪೀಠೋಪಕರಣಗಳ ಸಂಪೂರ್ಣ ಸ್ಯಾನಿಟೈಸೇಷನ್‌, ಕಂಟೈನ್ಮೆಂಟ್‌ ವಲಯದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ, ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿದ್ದವರಿಗೂ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ […]

Read More

ಬೇಕು ಹೊಸ ಆನ್‌ಲೈನ್‌ ಪ್ಲ್ಯಾನ್‌ – ಶಾಲೆ ಇಲ್ಲ, ಆನ್‌ಲೈನ್‌ ಒಲ್ಲದಿದ್ದರೆ ಮತ್ತೇನು? ಹುಡುಕಿದರೆ ಹೊಸ ದಾರಿ ಸಿಗದೇನು?

ಕೊರೊನಾ ಹಿನ್ನೆಲೆಯಲ್ಲಿ ಅಡಕತ್ತರಿಯಲ್ಲಿ ಸಿಲುಕಿರುವ ವ್ಯವಸ್ಥೆಗಳಲ್ಲಿ ಶಿಕ್ಷಣವೂ ಪ್ರಮುಖವಾಗಿದೆ. ಮಕ್ಕಳು, ಪೋಷಕರು, ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲ ಸ್ವತಃ ಸರಕಾರವೂ ಶಿಕ್ಷಣದ ಮುಂದಿನ ಹೆಜ್ಜೆಗಳನ್ನು ನಿರ್ಧರಿಸಲು ಹೆಣಗಾಡುತ್ತಿದೆ. ಏರುತ್ತಿರುವ ಸೋಂಕಿನಿಂದಾಗಿ ಶಾಲೆಗಳನ್ನು ಸದ್ಯೋಭವಿಷ್ಯದಲ್ಲಿ ತೆರೆಯುವ ಸ್ಥಿತಿ ಇಲ್ಲ. ಸರಕಾರವೇ ಶಾಲೆ ತೆರೆಯಲು ಮುಂದಾದರೂ ಪೋಷಕರು ಕಳುಹಿಸಿಕೊಡುವ ಮನೋಸ್ಥಿತಿಯಲ್ಲಿಲ್ಲ. ಈ ನಡುವೆ, ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‌ಲೈನ್‌ ಪಾಠದ ಮೂಲಕ ತಮ್ಮ ವ್ಯವಸ್ಥೆಯನ್ನು ಮುಂದುವರಿಸಲು ಪ್ರಯತ್ನಿಸಿದವು. ಆದರೆ, ಸರಕಾರ ಅದಕ್ಕೂ ಕಡಿವಾಣ ಹಾಕಿದೆ. ಎಲ್‌ಕೆಜಿಯಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ಆನ್‌ಲೈನ್‌ […]

Read More

ಎಲ್ಲರೂ ಬರಲಿ ಆನ್‌ಲೈನ್‌ಗೆ

– 8ರಿಂದ 10ನೇ ಕ್ಲಾಸ್‌ಗೆ ಅಂತರ್ಜಾಲ ಶಿಕ್ಷಣ ಓಕೆ ಎಂಬ ಅಭಿಮತ – ಖಾಸಗಿಯಂತೆ ಸರಕಾರಿ ಶಾಲೆ ಮಕ್ಕಳಿಗೂ ಸಿಗಲಿ ಆನ್‌ಲೈನ್‌ ಶಿಕ್ಷಣ. – ವಿಕ ಫೋಕಸ್‌. ಜಯಂತ್‌ ಗಂಗವಾಡಿ, ಬೆಂಗಳೂರು. ಎಲ್‌ಕೆಜಿಯಿಂದ 5ನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣ ನೀಡುವುದಕ್ಕೆ ಸರಕಾರ ನಿರ್ಬಂಧ ವಿಧಿಸಿರುವ ಬಗ್ಗೆ ಸಾರ್ವತ್ರಿಕ ಬೆಂಬಲ ವ್ಯಕ್ತವಾಗಿರುವ ನಡುವೆಯೇ, ಎಂಟರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಈ ಮಾದರಿಯಲ್ಲಿ ಶಿಕ್ಷಣ ನೀಡಲು ತಕ್ಷಣ ವ್ಯವಸ್ಥೆ ರೂಪಿಸಬೇಕು ಎಂಬ ಆಗ್ರಹ ಕೇಳಿಬಂದಿದೆ. ಈ ಶಿಕ್ಷಣ ಕೇವಲ ಖಾಸಗಿ […]

Read More

ಆನ್‌ಲೈನ್‌ ಕ್ಲೋಸ್

– ಎಲ್‌ಕೆಜಿಯಿಂದ 5ನೇ ತರಗತಿವರೆಗಿನ ಆನ್‌ಲೈನ್‌ ಪಾಠಕ್ಕೆ ಸರಕಾರ ತಡೆ – ಆನ್‌ಲೈನ್‌ ಹೆಸರಲ್ಲಿ ಶುಲ್ಕ ಪಡೆದರೆ ಕ್ರಮ | ಶೈಕ್ಷಣಿಕ ಶುಲ್ಕ ಹೆಚ್ಚಳವೂ ಬೇಡ ವಿಕ ಸುದ್ದಿಲೋಕ, ಬೆಂಗಳೂರು. ಎಲ್‌ಕೆಜಿ-ಯುಕೆಜಿಯಿಂದ 5ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ‘ಆನ್‌ಲೈನ್‌ ತರಗತಿ’ ನಡೆಸಬಾರದು ಎಂದು ಸರಕಾರ ಆದೇಶಿಸಿದೆ ಮತ್ತು ಈಗ ಖಾಸಗಿ ಶಾಲೆಗಳು ನಡೆಸುತ್ತಿರುವ ತರಗತಿಗಳನ್ನು ನಿಲ್ಲಿಸುವಂತೆ ಸೂಚಿಸಿದೆ. ನಗರದ ಸಮಗ್ರ ಶಿಕ್ಷಣ ಅಭಿಯಾನದ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top