
ಕೊರೊನಾ ಸೋಂಕನ್ನು ಎದುರಿಸಲು ರಾಜ್ಯಾಡಳಿತ ಸಮರೋಪಾದಿಯಲ್ಲಿ ಸಜ್ಜಾಗಿದೆ. ಸರಕಾರದ ಈ ಸನ್ನದ್ಧತೆಯನ್ನು ನಾವು ಶ್ಲಾಘಿಸಲೇಬೇಕು. ಆರೋಗ್ಯ ಸೇವೆ, ಗೃಹ ಸಚಿವಾಲಯ ಎಲ್ಲವೂ ಕೊರೊನಾ ಸೋಂಕಿನ ಹಿಂದೆ ಬಿದ್ದಿವೆ. ಒಟ್ಟಾರೆ ಆಡಳಿತವೇ ಕೋವಿಡ್ ಕೇಂದ್ರಿತವಾಗಿದೆ ಎಂದರೂ ತಪ್ಪಿಲ್ಲ. ಈ ಮಧ್ಯೆ ಇನ್ನೊಂದು ಮುಖ್ಯ ವಿಚಾರ ಹಿನ್ನೆಲೆಗೆ ಸರಿದಿದೆ – ಕುಡಿಯುವ ನೀರು. ಪ್ರತಿಬಾರಿ ಬೇಸಿಗೆ ಬಂದಾಗಲೂ ಈ ವಿಚಾರ ಮುನ್ನೆಲೆಗೆ ಬರುತ್ತದೆ. ಯಾಕೆಂದರೆ ಸಮಸ್ಯೆ ಬಿಗಡಾಯಿಸುವುದೇ ಆಗ. ಈ ಬಾರಿ ಪೂರ್ವಸಿದ್ಧತೆ ಇಲ್ಲದ ಕಾರಣ ಬಿರುಬೇಸಿಗೆಯ ಕುಡಿಯುವ ನೀರಿನ […]