ದೇಶದ ಜನಸಂಖ್ಯೆಯ ಅರ್ಧಕ್ಕಿಂತಲೂ ಹೆಚ್ಚು ಮಂದಿ 25ಕ್ಕಿಂತ ಹೆಚ್ಚು ವಯಸ್ಸಿನವರು! ಇತಿಹಾಸದಲ್ಲೇ ವೊತ್ತ ವೊದಲ ಬಾರಿಗೆ, ಭಾರತದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆ ಈಗ 25 ವರ್ಷದವರು ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು. ಪುರುಷ- ಸ್ತ್ರೀ ಎಂಬ ವ್ಯತ್ಯಾಸವಿಲ್ಲದೆ, ನಗರ- ಹಳ್ಳಿ ಎಂಬ ವ್ಯತ್ಯಾಸವಿಲ್ಲದ ಸರಾಸರಿ ಚಿತ್ರಣ ಹೀಗಿದೆ. ಭಾರತೀಯ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಕಮಿಷನರ್ ನಡೆಸಿದ ಮಾದರಿ ನೋಂದಣಿ ವ್ಯವಸ್ಥೆ-2018ರ ವರದಿಯಲ್ಲಿ ಈ ವಿಚಾರ ಕಂಡುಬಂದಿದೆ. ಇದರಿಂದ ಏನು ತಿಳಿಯಬಹುದು? ಏನೆಂದರೆ, ಭಾರತದ ಜನಸಂಖ್ಯೆ ಹೆಚ್ಚು […]
Read More
ಕರ್ನಾಟಕದಲ್ಲಿ ಕೃಷಿಕರಲ್ಲದವರಿಗೆ ಕೃಷಿಭೂಮಿ ಕೊಳ್ಳಲು ಅನುಕೂಲವಾಗುವಂತೆ 1961ರ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ರಾಜ್ಯ ಸರಕಾರ ಇತ್ತೀಚಿಗೆ ನಿರ್ಧರಿಸಿದೆ. ಈ ಬೆಳವಣಿಗೆ ಸಂಚಲನ ಸೃಷ್ಟಿಸಿರುವ ಸಂದರ್ಭ ದೇಶದ ಇತರ ರಾಜ್ಯಗಳ ಭೂ ಸುಧಾರಣೆ ನೀತಿಗಳ ಅವಲೋಕನ ಇಲ್ಲಿದೆ. 1. ತಮಿಳುನಾಡು ತಮಿಳುನಾಡಿನಲ್ಲಿ 1961ರ ಭೂಸುಧಾರಣೆ ಕಾಯಿದೆಗೆ ಹಲವಾರು ಸಲ ತಿದ್ದುಪಡಿಗಳಾಗಿದೆ. ಕೃಷಿಕರಲ್ಲದವರೂ ಕೃಷಿ ಭೂಮಿ ಖರೀದಿಸಬಹುದು. ಕೃಷಿ ಉದ್ದೇಶಕ್ಕಾಗಿಯೇ ಕೊಳ್ಳುವುದಿದ್ದರೆ ಕುಟುಂಬವೊಂದು ಗರಿಷ್ಠ 59.95 ಎಕರೆಯಷ್ಟು ಪಡೆಯಬಹುದು. ಬಂಜರು ಭೂಮಿಯಾಗಿದ್ದರೆ ಜಿಲ್ಲಾಧಿಕಾರಿ ಅನುಮೋದನೆ ಪಡೆದು ಕೃಷಿಯೇತರ […]
Read More
ಕರ್ನಾಟಕ ಭೂಸುಧಾರಣಾ ಕಾಯಿದೆ-1974ನ್ನು ತಿದ್ದುಪಡಿ ಮಾಡಲು ರಾಜ್ಯ ಸರಕಾರ ಮುಂದಾಗಿದ್ದು, ಸಂಪುಟ ಸಭೆ ಈ ಕುರಿತು ತೀರ್ಮಾನ ಕೈಗೊಂಡಿದೆ. ಇದರ ಮುಖ್ಯಾಂಶವೆಂದರೆ, ಕೃಷಿಕರಲ್ಲದವರೂ ಇನ್ನು ಮುಂದೆ ಕೃಷಿ ಭೂಮಿ ಖರೀದಿಸಬಹುದು. ಇದುವರೆಗೆ ಕೃಷಿಕ ಕುಟುಂಬದ ಹಿನ್ನೆಲೆ ಹೊಂದಿದವರು ಮಾತ್ರ ಕೃಷಿಭೂಮಿ ಖರೀದಿಸುವ ಅವಕಾಶವಿತ್ತು. ಈಗ ಕೃಷಿಯಲ್ಲಿ ಆಸಕ್ತಿ ಹೊಂದಿರುವ, ಆದರೆ ಕೃಷಿಭೂಮಿ ದಾಖಲೆಗಳನ್ನು ಹೊಂದಿಲ್ಲದವರು ಕೂಡ ಜಮೀನು ಖರೀದಿಸಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು ಮತ್ತು ಉದ್ಯಮಿಗಳೂ ಖರೀದಿಸಬಹುದು ಎಂಬುದು ಈ ಕಾಯಿದೆಯ ಅತ್ಯಂತ ಧನಾತ್ಮಕ ಅಂಶ. ಯಾಕೆಂದರೆ, […]
Read More
– ಸುರಕ್ಷತಾ ಕ್ರಮಗಳೊಂದಿಗೆ ಎಕ್ಸಾಮ್: ಸುರೇಶ್ ಕುಮಾರ್. – ತಮಿಳುನಾಡು, ಪುದುಚೆರಿ, ತೆಲಂಗಾಣದಲ್ಲಿ ಪರೀಕ್ಷೆ ರದ್ದು. ವಿಕ ಸುದ್ದಿಲೋಕ ಉಡುಪಿ/ಬೆಂಗಳೂರು. ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಸುರಕ್ಷತಾ ಕ್ರಮಗಳೊಂದಿಗೆ ಖಚಿತವಾಗಿ ನಡೆಸುತ್ತೇವೆ, ಈ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗಬಾರದು ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿ ಸುಳ್ಳು ವದಂತಿ ಹರಡುವ ಕಿಡಿಗೇಡಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ತಮಿಳುನಾಡು, ಪುದುಚೆರಿ ಮತ್ತು ತೆಲಂಗಾಣ […]
Read More
ಕೊರೊನಾ ವೈರಸ್(ಕೋವಿಡ್ 19) ಸೃಷ್ಟಿಸಿರುವ ತಲ್ಲಣಕ್ಕೆ ಇಡೀ ಜಗತ್ತೇ ಸ್ತಬ್ಧವಾಗಿದೆ. ಚೀನಾ, ಅಮೆರಿಕ, ಇಟಲಿ, ಜರ್ಮನಿ ಹಾಗೂ ಸ್ಪೇನ್ನಂಥ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಕೋವಿಡ್ 19 ಎದುರಿಸಲಾಗಿದೇ ಮಕಾಡೆ ಮಲಗಿವೆ. ಈ ದೇಶಗಳಲ್ಲಿ ಸೋಂಕಿಗೆ ಒಳಗಾಗುವವರು ಮತ್ತು ಸೋಂಕಿನಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ಲಕ್ಷ ಮತ್ತು ಸಾವಿರ ಲೆಕ್ಕದಲ್ಲಿದೆ. ಆದರೆ, ಅಭಿವೃದ್ಧಿಶೀಲ ರಾಷ್ಟ್ರವಾದ ಭಾರತದಲ್ಲಿ ಈ ಕೊರೊನಾ ಉಪಟಳವನ್ನು ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಗ್ಗೂಡಿ ಹೋರಾಡುತ್ತಿದ್ದು, ಅದರ ಫಲ ಈಗ ನಿಚ್ಚಳವಾಗುತ್ತಿದೆ. ಲಾಕ್ಡೌನ್ ಹೆಚ್ಚು ಪರಿಣಾಮಕಾರಿಯಾಗುತ್ತಿದೆ […]
Read More
ದೇಶದ 30% ಸೋಂಕಿಗೆ ತಬ್ಲಿಘಿ ಸಮಾವೇಶ ಲಿಂಕ್ – ದೇಶಾದ್ಯಂತ ಪತ್ತೆಯಾದ ಒಟ್ಟು ಕೊರೊನಾ ಪ್ರಕರಣಗಳು 14,378 – ತಬ್ಲಿಘಿ ಜಮಾತ್ ಸಮಾವೇಶದ ನಂಟಿರುವ ಸೋಂಕಿತರು 4,291 – ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಧಿಕೃತ ಮಾಹಿತಿ ಏಜೆನ್ಸೀಸ್ ಹೊಸದಿಲ್ಲಿ ದೇಶದಲ್ಲಿ ದಾಖಲಾದ ಕೊರೊನಾ ಸೋಂಕು ಪ್ರಕರಣಗಳಲ್ಲಿ ಶೇಕಡಾ 30ಕ್ಕೆ ತಬ್ಲಿಕ್ ಜಮಾತ್ ಸಮಾವೇಶದ ನಂಟು ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ‘‘ದೇಶಾದ್ಯಂತ ಶನಿವಾರ ಮಧ್ಯಾಹ್ನದವರೆಗಿನ ವರದಿ ಪ್ರಕಾರ ಒಟ್ಟು 14,378 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, […]
Read More
ತಬ್ಲಿಘಿ ನಂಜೇ ಸಾವಿರ! – 17 ರಾಜ್ಯಗಳಲ್ಲಿನ 1023 ಕೇಸಿಗೆ ನಿಜಾಮುದ್ದೀನ್ ನಂಟು – 22 ಸಾವಿರ ಜನರು ಕ್ವಾರಂಟೈನ್ – ಶತಕದ ಬಾಗಿಲಿಗೆ ಬಂದ ಸಾವಿನ ಸಂಖ್ಯೆ – ರಾಜ್ಯದಲ್ಲೂ16 ಹೊಸ ಕೇಸ್ ಪತ್ತೆ ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಮೂರು ಸಾವಿರದ ಗಡಿ ದಾಟಿದೆ. ಆದರೆ, ಸೋಂಕಿನ ಪ್ರಮಾಣದಲ್ಲಿ ಸಿಂಹಪಾಲು ಪ್ರಕರಣಗಳು ನೇರವಾಗಿ ದಿಲ್ಲಿಯಲ್ಲಿ ನಡೆದ ತಬ್ಲಿಘಿ ಸಮಾವೇಶದೊಂದಿಗೆ ನಂಟು ಹೊಂದಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ, ತಮಿಳುನಾಡು, […]
Read More
ದಿಲ್ಲಿಯ ನಿಜಾಮುದ್ದೀನ್ ತಬ್ಲಿಘ್-ಇ-ಜಮಾತ್ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿರುವುದು ದೇಶದ ಆತಂಕಕ್ಕೆ ಕಾರಣವಾಗಿದೆ. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಇತರ ರಾಜ್ಯಗಳಿಗೆ ಸೇರಿದ ಸಾವಿರಾರು ಮಂದಿ ಜಮಾತ್ ಸಭೆಯಲ್ಲಿ ಭಾಗವಹಿಸಿ ವಾಪಸಾಗಿ ನಾನಾ ಕಡೆ ಸಂಚರಿಸಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ. ತಬ್ಲಿಘ್-ಇ-ಜಮಾತ್ ಸಭೆಯಲ್ಲಿ ಭಾಗವಹಿಸಿ ವಾಪಸಾದ ಕರ್ನಾಟಕದ ಸಿರಾದ ವೃದ್ಧ, ಆಂಧ್ರ ಮತ್ತು ತೆಲಂಗಾಣದ ತಲಾ ಓರ್ವರು ಸೇರಿ ಒಟ್ಟು ಹತ್ತಕ್ಕೂ […]
Read More