ಕೊರೊನಾದಿಂದ ಅಸ್ತವ್ಯಸ್ತಗೊಂಡಿರುವ ಜನಜೀವನವನ್ನು ಮತ್ತೆ ಮೊದಲಿನ ಸ್ಥಿತಿಗೆ ತರುವ ಸಂಬಂಧ ‘ಅನ್ಲಾಕ್’ ಪ್ರಕ್ರಿಯೆ ಜಾರಿಯಲ್ಲಿದೆ. ಅದೇ ರೀತಿ, ಶಾಲೆಗಳನ್ನು ಆರಂಭಿಸಬೇಕೇ, ಬೇಡವೇ ಎಂಬ ಬಗ್ಗೆ ಚರ್ಚೆಗಳೂ ನಡೆಯುತ್ತಿವೆ. ಶಾಲೆ ಆರಂಭದ ವಿಷಯದಲ್ಲಿ ಪೋಷಕರ ಆತಂಕವೂ ಸಹಜವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಅವರು ಸಮಾಜದ ಎಲ್ಲವರ್ಗದ ತಜ್ಞರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಅದರಂತೆ, ಸೋಮವಾರ ಸಚಿವರು ‘ವಿಜಯ ಕರ್ನಾಟಕ’ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳ ಸಂಪಾದಕರ ಜತೆ ಚರ್ಚಿಸಿದ್ದಾರೆ. ಕೊರೊನಾ ಮಧ್ಯೆಯೂ […]