ಕಳೆದ ವಾರ ಉತ್ತರ ಪ್ರದೇಶದಲ್ಲಿ ಎಂಟು ಪೊಲೀಸರನ್ನು ಹತ್ಯೆಗೈದಿದ್ದ ಕುಖ್ಯಾತ ಗ್ಯಾಂಗ್ಸ್ಟರ್ ವಿಕಾಸ್ ದುಬೆಯನ್ನು ಶುಕ್ರವಾರ ಬೆಳಗ್ಗೆ ಹೊಡೆದುರುಳಿಸಲಾಗಿದೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸಿಕ್ಕಿಬಿದ್ದ ದುಬೆಯನ್ನು ಕಾನ್ಪುರಕ್ಕೆ ಕರೆತರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರಿನಿಂದ ತಪ್ಪಿಸಿಕೊಂಡು ಪೊಲೀಸರ ಗನ್ ಸೆಳೆದು ಅವರ ಮೇಲೆ ಗುಂಡಿಕ್ಕಿ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಗುಂಡಿಕ್ಕಿ ಕೊಂದುಹಾಕಿದ್ದಾರೆ. ಪೊಲೀಸರ ಈ ನಡೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಇದೊಂದು ನಕಲಿ ಎನ್ಕೌಂಟರ್ ಎಂದು ಆರೋಪಿಸಿರುವ ಪ್ರತಿಪಕ್ಷಗಳು ಸುಪ್ರೀಂ ಕೋರ್ಟ್ ನಿಗಾದಲ್ಲಿ […]