ಲಾಕ್ಡೌನ್ನಿಂದ ಕೃಷಿಕರಿಗೆ ಸಂಕಷ್ಟವಾದ ಸಂದರ್ಭದಲ್ಲಿ, ಕೃಷಿಕರಿಗೆ ಕೃಷಿ ಚಟುವಟಿಕೆಗಳಿಗೆ ಹಾಗೂ ತಾವು ಬೆಳೆದ ಬೆಳೆಗಳ ಮಾರಾಟಕ್ಕೆ ಮುಕ್ತ ವಾತಾವರಣ ಕಲ್ಪಿಸುವುದಾಗಿ ಸರಕಾರ ಭರವಸೆ ನೀಡಿತ್ತು. ಆದರೆ ಈ ಭರವಸೆ ಸಕಾಲದಲ್ಲಿ ಈಡೇರದೆ ಇರುವುದರಿಂದ ರೈತರು ಇನ್ನಷ್ಟು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಮತ್ತು ಮಾರಾಟ ವ್ಯವಸ್ಥೆ ಸಿಗದೆ ಕೃಷಿಕರ ಸಂಕಟ ಮುಂದುವರಿದಿದೆ. ಸಾವಿರಾರು ರೈತರು ಸರಿಯಾದ ಬೆಲೆ ಇಲ್ಲ ಎಂಬ ಕಾರಣದಿಂದ ನಿಂಬೆ ಹಣ್ಣು, ಕಲ್ಲಂಗಡಿ ಸೇರಿದಂತೆ ಹಲವು ಬೆಳೆಗಳನ್ನು ಗದ್ದೆಯಲ್ಲೇ ಬಿಟ್ಟಿದ್ದಾರೆ. ಈರುಳ್ಳಿ […]
Read More
ನಮ್ಮ ನೆರೆಯ ಕೇರಳ ರಾಜ್ಯವು ಕೊರೊನಾ ಸೋಂಕು ನಿಯಂತ್ರಣದಲ್ಲೀಗ ಮುಂದಿದೆ. ದೇಶದ ಬಹುತೇಕ ರಾಜ್ಯಗಳಲ್ಲಿ ಕೊರೊನಾ ಪೀಡಿತರ ಗ್ರಾಫ್ ಏರುಮುಖದಲ್ಲಿದ್ದರೆ, ಕೇರಳದಲ್ಲಿ ಅದು ಮಟ್ಟಸವಾಗಿದೆ. ಜೊತೆಗೆ, ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವ ಪ್ರಮಾಣವೂ ಹೆಚ್ಚಿದೆ. ಹಾಗಾದರೆ, ಕೇರಳ ಈ ನಿಯಂತ್ರಣ ಕಂಡುಕೊಂಡಿದ್ದು ಹೇಗೆ ಎಂಬುದು ನೋಡೋಣ ಬನ್ನಿ. ಇಡೀ ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು ‘ದೇವರ ನಾಡು’ ಕೇರಳದಲ್ಲಿ. ಅದೇ ಕೇರಳ ಇದೀಗ ಕೊರೊನಾ ಹಿಮ್ಮೆಟಿಸುವ ವ್ಯವಸ್ಥೆಗೆ ಇಡೀ ದೇಶಕ್ಕೆ ಮಾದರಿಯಾಗುತ್ತಿದೆ. ನೆರೆಯ ಬಾಂಗ್ಲಾದೇಶ ಕೂಡ […]
Read More
ಕೊರೊನಾ ವೈರಸ್ ವಿರುದ್ಧ ಹೋರಾಡಲು ಇಡೀ ದೇಶವನ್ನು ಲಾಕ್ಡೌನ್ ಮಾಡಿದ ನಂತರ ಸ್ಥಳೀಯವಾಗಿ ಹಲವು ಬೆಳವಣಿಗೆಗಳು ಆಗುತ್ತಿವೆ. ಉದಾಹರಣೆಗೆ, ಕರ್ನಾಟಕದಲ್ಲಿ ಲಾಕ್ಡೌನ್ ಅನ್ನು ಪೊಲೀಸರು ನಿರ್ವಹಿಸಿದ ರೀತಿ ಸರಿಯಾಗಲಿಲ್ಲ ಎಂಬ ಆಕ್ಷೇಪ ಕೇಳಿಬಂತು. ಕೆಲವೆಡೆ ಬೀದಿಗಿಳಿದ ಜನರ ಮೇಲೆ ಪೊಲೀಸರು ಲಾಠಿ ಬೀಸಿದ ಸುದ್ದಿ, ದೃಶ್ಯಗಳು ಇದಕ್ಕೆ ಪೂರಕವಾಗಿ ಕಂಡುಬಂದವು. ವಿರೋಧ ಕಂಡುಬಂದ ಹಿನ್ನೆಲೆಯಲ್ಲಿ, ಪೊಲೀಸರು ಲಾಠಿ ಎತ್ತದೆ ಕಾರ್ಯ ನಿರ್ವಹಿಸುವಂತೆಯೂ ಪೊಲೀಸ್ ಮುಖ್ಯಸ್ಥರು ನಿರ್ದೇಶನ ನೀಡಿದ್ದಾರೆ. ಇನ್ನೊಂದು ಬೆಳವಣಿಗೆಯೆಂದರೆ, ಕೋವಿಡ್-19 ಸಂಬಂಧಿತ ನಾನಾ ಬಗೆಯ ವದಂತಿಗಳಿಗೆ […]
Read More