ಕಳೆದ ವಾರ ಉತ್ತರ ಪ್ರದೇಶದಲ್ಲಿ ಎಂಟು ಪೊಲೀಸರನ್ನು ಹತ್ಯೆಗೈದಿದ್ದ ಕುಖ್ಯಾತ ಗ್ಯಾಂಗ್ಸ್ಟರ್ ವಿಕಾಸ್ ದುಬೆಯನ್ನು ಶುಕ್ರವಾರ ಬೆಳಗ್ಗೆ ಹೊಡೆದುರುಳಿಸಲಾಗಿದೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸಿಕ್ಕಿಬಿದ್ದ ದುಬೆಯನ್ನು ಕಾನ್ಪುರಕ್ಕೆ ಕರೆತರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರಿನಿಂದ ತಪ್ಪಿಸಿಕೊಂಡು ಪೊಲೀಸರ ಗನ್ ಸೆಳೆದು ಅವರ ಮೇಲೆ ಗುಂಡಿಕ್ಕಿ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಗುಂಡಿಕ್ಕಿ ಕೊಂದುಹಾಕಿದ್ದಾರೆ. ಪೊಲೀಸರ ಈ ನಡೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಇದೊಂದು ನಕಲಿ ಎನ್ಕೌಂಟರ್ ಎಂದು ಆರೋಪಿಸಿರುವ ಪ್ರತಿಪಕ್ಷಗಳು ಸುಪ್ರೀಂ ಕೋರ್ಟ್ ನಿಗಾದಲ್ಲಿ […]
Read More
ರಾಜ್ಯದಲ್ಲಿ ಕೊರೊನಾ ಸೋಂಕಿನ ಏರಿಕೆಯಿಂದ ಆಗಿರುವ ಹಲವು ದುಷ್ಪರಿಣಾಮಗಳ ನಡುವೆ, ವೈದ್ಯರ ಕೊರತೆಯೂ ಒಂದು ಹಾಗೂ ಹೆಚ್ಚು ಗಂಭೀರವಾದುದು. ಸರಕಾರಿ ಆಸ್ಪತ್ರೆಗಳಲ್ಲಿ ಮೊದಲೇ ವೈದ್ಯರ ಕೊರತೆಯಿದೆ. ನಿಗದಿತ ಸರಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೇವೆ ಕಡ್ಡಾಯಗೊಂಡಿರುವ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಒಂದು ವಾರ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿದರೆ ಎರಡು ವಾರ ಐಸೋಲೇಶನ್ ಆಗಬೇಕಿರುವುದರಿಂದ ವೈದ್ಯರ ಸಂಖ್ಯೆ ಸಹಜವಾಗಿಯೇ ಇಳಿಮುಖವಾಗುತ್ತದೆ. ಅದರಲ್ಲೂ ಕೆಲವು ವೈದ್ಯರಿಗೆ ಸೋಂಕು ತಗುಲಿರುವುದರಿಂದ ಕ್ವಾರಂಟೈನ್ ಆಗಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಕೆಲವೇ ಆಸ್ಪತ್ರೆಗಳು ಮಾತ್ರ […]
Read More
ಖಾಸಗಿ ಶಾಲೆಗಳು ಎಲ್ಕೆಜಿಯಿಂದ ಹತ್ತನೇ ತರಗತಿಯವರೆಗೆ ಆನ್ಲೈನ್ ಕ್ಲಾಸ್ಗಳನ್ನು ನಡೆಸುವುದಕ್ಕೆ ಸರಕಾರ ವಿಧಿಸಿರುವ ನಿರ್ಬಂಧಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ‘ಇದು ಸಂವಿಧಾನದ 21 ಹಾಗೂ 21ಎ ವಿಧಿಯಯನ್ವಯ ಪ್ರಜೆಗಳಿಗೆ ದತ್ತವಾಗಿರುವ ಬದುಕಿನ ಹಾಗೂ ಶಿಕ್ಷಣದ ಹಕ್ಕನ್ನು ನಿರಾಕರಿಸಿದಂತಾಗಿದೆ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದರಿಂದ, ಆನ್ಲೈನ್ ಕ್ಲಾಸ್ಗಳನ್ನು ನಡೆಸಲು ಮುಂದಾಗಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮುಕ್ತ ರಹದಾರಿ ದೊರೆತಂತಾಗಿದೆ. ಆದರೆ ಈ ಆದೇಶ, ಆನ್ಲೈನ್ ಶಿಕ್ಷಣದ ಹೆಸರಿನಲ್ಲಿ ಶುಲ್ಕ ವಸೂಲಿ ಮಾಡಲು ಅಥವಾ ಆನ್ಲೈನ್ ಕ್ಲಾಸುಗಳನ್ನು ಕಡ್ಡಾಯ ಮಾಡಲು […]
Read More
ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಪರಿಸ್ಥಿತಿ ಗೋಜಲಾಗಿದೆ. ಕೆಲವು ಕಡೆ ಶವಸಂಸ್ಕಾರಕ್ಕೆ ಅಡ್ಡಿಪಡಿಸಲಾಗುತ್ತಿದೆ. ಕೆಲವು ಕಡೆ ಅಮಾನವೀಯವಾಗಿ ನಾಲ್ಕಾರು ಹೆಣಗಳನ್ನು ಒಟ್ಟಿಗೇ ಗುಂಡಿಗೆಸೆದಿರುವುದು ವಿಡಿಯೋ ಚಿತ್ರೀಕೃತಗೊಂಡು ವೈರಲ್ ಆದ ಬಳಿಕ, ಜನರಲ್ಲಿ ಭೀತಿಯೂ ತಲೆದೋರಿದೆ. ಕೋವಿಡ್ ಪೀಡಿತರನ್ನು ದೂರವಿಟ್ಟು ನಡೆಸಿಕೊಳ್ಳುವುದು ಸಹಜ, ಯಾಕೆಂದರೆ ಸೋಂಕು ಹರಡುವ ಭಯವಿದೆ. ಆದರೆ ಶವಸಂಸ್ಕಾರ ಕನಿಷ್ಠ ಗೌರವಯುತವಾಗಿ ನಡೆಸಬೇಕು ಎಂಬುದು ಮಾನವೀಯ ಸಮಾಜದಲ್ಲಿ ನಂಬಿಕೆಯಿಟ್ಟಿರುವ ಎಲ್ಲರ ಕಳಕಳಿ. ಸತ್ತವರನ್ನು ಸರಿಯಾಗಿ ಕಳಿಸಿಕೊಡಲಿಲ್ಲವಲ್ಲ ಎಂಬುದು ಬಂಧುಗಳಿಗೆ ನಿರಂತರ ಶೋಕವಾಗಬಾರದು. ಕೋವಿಡ್ನಿಂದ ಮೃತರಾದವರನ್ನು ಮಣ್ಣು ಮಾಡುತ್ತಿರುವ […]
Read More
ಇತರ ಸಣ್ಣ ದೇಶಗಳನ್ನು ಸಾಲ ನೀಡಿ ವಶೀಕರಿಸಿಕೊಂಡಂತೆ ಭಾರತವನ್ನು ವಸಾಹತು ಮಾಡಿಕೊಳ್ಳಲು ಸಾಧ್ಯವಾಗದು ಎಂದು ಅರಿತಿರುವ ಚೀನಾ, ಗಡಿ ತಂಟೆಗಳ ಮೂಲಕ ಭಾರತವನ್ನು ಆಗಾಗ ಬೆದರಿಸಲು ಹಾಗೂ ವಶದಲ್ಲಿಟ್ಟುಕೊಳ್ಳಲು ಪ್ರಯತ್ನಿಸುತ್ತದೆ. ಕಳೆದ ತಿಂಗಳು ಲೇಹ್ ಸಮೀಪದ ಗಲ್ವಾನ್ ಕಣಿವೆಯಲ್ಲಿ ನಡೆದದ್ದು ಚೀನಾದ ಇಂತದೇ ಒಂದು ಪ್ರಯತ್ನ. ಚೀನಾ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಯೋಧರನ್ನು ಕಳೆದುಕೊಂಡ ಭಾರತ, ಅದಕ್ಕೆ ತಕ್ಕನಾದ ಪ್ರತಿಕ್ರಿಯೆಯನ್ನು ತೋರಿತು. ಉಲ್ಬಣಿಸಿದ ಸನ್ನಿವೇಶವನ್ನು ಸರಿಪಡಿಸಲು ಉಭಯ ಕಡೆಗಳ ಕಮಾಂಡರ್ ಮಟ್ಟದ ಹಾಗೂ ರಾಜತಾಂತ್ರಿಕ ಪ್ರತಿನಿಧಿಗಳ ಮಟ್ಟದ […]
Read More
ಕಳೆದ ಒಂದು ವಾರದಿಂದ ರಾಜ್ಯದಲ್ಲಿ, ಮುಖ್ಯವಾಗಿ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಾಬರಿಯಾಗುವಷ್ಟು ಏರುತ್ತಿದೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲೇ ಹೊಸ ರೋಗಿಗಳ ಸಂಖ್ಯೆ ಪ್ರತಿದಿನ ಒಂದು ಸಾವಿರಕ್ಕಿಂತಲೂ ಹೆಚ್ಚು ವರದಿಯಾಗುತ್ತಿದೆ. ಭಾನುವಾರ ರಾಜ್ಯದಲ್ಲಿ ಕೋವಿಡ್ನಿಂದ 37 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ 20 ಸಾವಿರದ ಗಡಿ ದಾಟಿದೆ. ಇದು ಆರೋಗ್ಯ ತುರ್ತು ಪರಿಸ್ಥತಿಯೇ ಸರಿ. ಇತ್ತೀಚೆಗೆ ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರದಿಂದ ಶ್ಲಾಘನೆ ಪಡೆದ ರಾಜ್ಯದಲ್ಲಿ, ವಾಸ್ತವ ಸ್ಥಿತಿ ಹಾಗಿಲ್ಲ ಎಂಬುದು ರುಜುವಾತಾಗಿದೆ. ಕೊರೊನಾದ ರುದ್ರ […]
Read More
ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಯಶಸ್ವಿಯಾಗಿ ಮುಕ್ತಾಯಗೊಂಡಿವೆ. ಕೊರೊನಾ ವೈರಸ್ನ ಆತಂಕಕಾರಿ ಹಬ್ಬುವಿಕೆಯ ನಡುವೆಯೂ ಜೂನ್ 25ರಿಂದ ಆರಂಭಗೊಂಡಿದ್ದ ಪರೀಕ್ಷೆ ಶುಕ್ರವಾರ ಪೂರ್ಣಗೊಂಡಿದೆ. ಸುಮಾರು 8.50 ಲಕ್ಷ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಶುಕ್ರವಾರ ನಡೆದ ತೃತೀಯ ಭಾಷಾ ವಿಷಯಗಳ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಶೇ.98.10ರಷ್ಟಿತ್ತು. ಪ್ರತಿ ಪರೀಕ್ಷೆಗೂ ಶೇ.98 ವಿದ್ಯಾರ್ಥಿಗಳು ವೈರಾಣುವಿನ ಭಯ ಮೀರಿ ಹಾಜರಾಗಿದ್ದರು. 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಇದು ಪರೀಕ್ಷಾ ಕೇಂದ್ರಗಳಿಂದ ಬಂದದ್ದಲ್ಲ ಎಂದು ಸರಕಾರ ಹೇಳಿದೆ. ಇವರೂ ಸೇರಿದಂತೆ, ಕ್ವಾರಂಟೈನ್ನಲ್ಲಿರುವ […]
Read More
ಚೀನಾ ಮೂಲದ 59 ಆ್ಯಪ್ಗಳನ್ನು ಭಾರತ ಸರಕಾರ ನಿರ್ಬಂಧಿಸಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೂ ಚೀನಾ ಮೂಲದ ವೀಬೋ ಸಾಮಾಜಿಕ ಜಾಲತಾಣದಿಂದ ಹೊರಬಂದಿದ್ದು, ಅದರಲ್ಲಿದ್ದ ತಮ್ಮ ಖಾತೆಯನ್ನು ಅಳಿಸಿಹಾಕಿದ್ದಾರೆ. ದೇಶದ ಭದ್ರತೆ, ಸಾರ್ವಭೌಮತೆ, ಸಂಸ್ಕೃತಿಗಳಿಗೆ ಹಾನಿಕಾರಕವಾದ ಅಂಶಗಳನ್ನು ಹೊಂದಿರುವುದರಿಂದ ಈ ಆ್ಯಪ್ಗಳನ್ನು ನಿಷೇಧಿಸುತ್ತಿರುವುದಾಗಿ ಸರಕಾರ ತಿಳಿಸಿದೆ. ಈ 59 ಆ್ಯಪ್ಗಳಲ್ಲಿ ಟಿಕ್ಟಾಕ್ನಂಥ ಜನಪ್ರಿಯ ವಿಡಿಯೋ ಬ್ಲಾಗಿಂಗ್ ಆ್ಯಪ್ಗಳೂ ಇದ್ದು, ಇದನ್ನು ದೇಶದಲ್ಲಿ 20 ಲಕ್ಷಕ್ಕಿಂತಲೂ ಅಧಿಕ ಮಂದಿ ಡೌನ್ಲೋಡ್ ಮಾಡಿಕೊಂಡು ಬಳಸುತ್ತಿದ್ದರು. ಕಳೆದ ತಿಂಗಳು ಭಾರತದ […]
Read More
ರಾಜ್ಯದಲ್ಲಿ ಕೊರೊನಾ ಸೋಂಕಿತರಾಗಿ ಸಣ್ಣಪುಟ್ಟ ಲಕ್ಷಣಗಳಿಂದ ಗುಣಮುಖರಾಗುವ ಹಾಗೂ ಪಾಸಿಟಿವ್ ಆಗಿದ್ದೂ ಯಾವುದೇ ಲಕ್ಷಣಗಳನ್ನು ತೋರಿಸದ ರೋಗಿಗಳು ಸಾಕಷ್ಟಿದ್ದಾರೆ. ಇಂಥವರನ್ನೂ ಪತ್ತೆ ಹಚ್ಚಿ ಈಗ ನಿಗದಿತ ಸರಕಾರಿ ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಈಗಿನ ಪರಿಸ್ಥಿತಿ ಹೇಗಿದೆಯೆಂದರೆ, ಎಲ್ಲ ಕಡೆಯೂ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಭರ್ತಿಯಾಗುತ್ತಿವೆ ಹಾಗೂ ವೈದ್ಯ ಸಿಬ್ಬಂದಿಯ ಸಂಖ್ಯೆಯೂ ಸಾಕಷ್ಟಿಲ್ಲ. ಇದರಿಂದಾಗಿ, ಕೋವಿಡ್ ರೋಗಿಗಳ ಪರಿಸ್ಥಿತಿ ಉಲ್ಬಣಗೊಂಡರೆ ಗತಿಯೇನು ಎಂಬ ಆತಂಕ ಆ ರೋಗಿಗಳನ್ನೂ, ಅವರ ಸಂಬಂಧಿಕರನ್ನೂ ಹಾಗೂ ಇತರರನ್ನೂ ಕಾಡುತ್ತಿದೆ. ಇದನ್ನು […]
Read More
ಕೈಗಾರಿಕೆಗಳನ್ನು ಆರಂಭಿಸುವುದಕ್ಕೆ ಉತ್ತೇಜನ ನೀಡಲು ಕ್ರಾಂತಿಕಾರಕವಾದ ಕ್ರಮಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಉದ್ಯಮಿಗಳು ಮೊದಲು ಕೈಗಾರಿಕೆ ಆರಂಭಿಸಿ ಬಳಿಕ ಸಂಬಂಧಿತ ಅನುಮೋದನೆ ಪಡೆಯುವ ಪ್ರಕ್ರಿಯೆಗೆ ಮುಂದಾಗಬಹುದು. ಈ ಸಂಬಂಧ ಕರ್ನಾಟಕ ಇಂಡಸ್ಟ್ರಿಯಲ್ ಫೆಸಿಲಿಟೇಷನ್ ಕಾಯಿದೆ- 2002ಕ್ಕೆ ತಿದ್ದುಪಡಿ ತರುವ ತೀರ್ಮಾನವನ್ನು ಸಂಪುಟ ಸಭೆ ಕೈಗೊಂಡಿದೆ. ರಾಜ್ಯದ ಉನ್ನತಾಧಿಕಾರ ಸಮಿತಿ ಅನುಮೋದನೆ ಪಡೆದ ಉದ್ಯಮಿಗಳು ಗುರುತಿಸಲಾದ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಚಟುವಟಿಕೆ ಆರಂಭಿಸಬಹುದು. ನಂತರದ 3 ವರ್ಷಗಳಲ್ಲಿ ಕಟ್ಟಡ ನಿರ್ಮಾಣ, ಪರಿಸರ ಮಂಡಳಿ ನಿರಾಕ್ಷೇಪಣ ಪತ್ರ ಸೇರಿ ಸಂಬಂಧಿಸಿದ […]
Read More