ಮೌಲ್ಯಗಳಿಗೆ ಬಿಜೆಪಿ ಮಣೆ ನಿಷ್ಠೆ, ಸೇವೆಯೇ ಆದರ್ಶ ಎಂದ ಹೈಕಮಾಂಡ್

ರಾಜ್ಯದಿಂದ ತೆರವಾಗಿರುವ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಅಭ್ಯರ್ಥಿಗಳ ಹೆಸರು ಬಹುತೇಕ ಅಂತಿಮಗೊಂಡಿದೆ. ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್‌ನಿಂದ ಎಚ್‌.ಡಿ.ದೇವೇಗೌಡರು ಅಭ್ಯರ್ಥಿಗಳಾಗಿರುವುದರಲ್ಲಿ ಏನೂ ಅಚ್ಚರಿಯಿಲ್ಲ. ಈಗಾಗಲೇ ಇವರ ಪ್ರಾತಿನಿಧ್ಯವನ್ನು ಜನ ದಶಕಗಳಿಂದ ಕಂಡಿದ್ದಾರೆ. ಬಿಜೆಪಿಯಿಂದಲೂ ಬಲಾಢ್ಯರಾದ ಹಲವು ವ್ಯಕ್ತಿಗಳ ಹೆಸರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೇಳಿಬಂದಿತ್ತು. ಆದರೆ ಅಚ್ಚರಿ ಎನ್ನುವಂತೆ ಅನಾಮಿಕರಾದ ಇಬ್ಬರ ಆಯ್ಕೆಯಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ ಗಸ್ತಿ ಅವರಿಗೆ ಟಿಕೆಟ್‌ ಪ್ರಕಟಿಸಿ ಬಿಜೆಪಿ […]

Read More

ಚೀನಾದ ಜೊತೆ ಮಾತುಕತೆ ಭಾರತ ಸ್ನೇಹಕ್ಕೆ ಬದ್ಧ, ಸಮರಕ್ಕೂ ಸಿದ್ಧ

ಚೀನಾದ ಜೊತೆಗೆ ಲಡಾಕ್‌ ಗಡಿಭಾಗದಲ್ಲಿ ತಲೆದೋರಿದ ಬಿಕ್ಕಟ್ಟನ್ನು ದ್ವಿಪಕ್ಷೀಯ ಮಾತಕತೆ ಮೂಲಕ ಶಾಂತಿಯುತ ರೀತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಲು ಉಭಯ ದೇಶಗಳ ಮಿಲಿಟರಿ ಮಟ್ಟದ ಸಂಧಾನ ಸಭೆ ತೀರ್ಮಾನಿಸಿದೆ. ಒಂದು ತಿಂಗಳಿಂದ ಎರಡು ರಾಷ್ಟ್ರಗಳ ನಡುವೆ ಉದ್ಭವಿಸಿರುವ ಸಂಘರ್ಷ ಸ್ಥಿತಿ ಶಮನಕ್ಕಾಗಿ ಶನಿವಾರ ಎರಡೂ ದೇಶಗಳ ಉನ್ನತ ಸೇನಾಧಿಕಾರಿಗಳ ಸಭೆ ನಡೆದಿದ್ದು, ಅದರಲ್ಲಿ ಈ ನಿರ್ಧಾರವಾಗಿದೆ. ಇದೇ ವೇಳೆಗೆ ‘‘ಸಂಘರ್ಷದಿಂದ ಸಮಸ್ಯೆ ಇತ್ಯರ್ಥಗೊಳ್ಳುವುದಿಲ್ಲ. ಇದನ್ನು ಚೀನಾ ಅರ್ಥ ಮಾಡಿಕೊಳ್ಳಬೇಕು. ಅನಗತ್ಯ ಹಸ್ತಕ್ಷೇಪ ಹಾಗೂ ಶಕ್ತಿಪ್ರದರ್ಶನಕ್ಕೆ ಮುಂದಾದರೆ ನಾವು ಕೈಕಟ್ಟಿ ಕೂಡುವುದಿಲ್ಲ,’’ […]

Read More

ಇಎಂಐ ವಿನಾಯಿತಿ ಅಲ್ಲ – ಗ್ರಾಹಕನಿಗೆ ಇನ್ನಷ್ಟು ಹಣಕಾಸಿನ ಹೊರೆ

ಸಾಲ ಮರುಪಾವತಿಯ ಅವಧಿ ಮುಂದೂಡಿಕೆಗೆ ಅವಕಾಶ ನೀಡಿರುವ ಆರ್‌ಬಿಐ, ಈ ಅವಧಿಯ ಬಡ್ಡಿ ಮನ್ನಾ ಮಾಡದಿರುವುದಕ್ಕೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾಲದ ಇಎಂಐ ಕಟ್ಟಲು ಅವಧಿಯನ್ನು ಮಾರ್ಚ್‌ನಿಂದ ಆಗಸ್ಟ್‌ವರೆಗೆ, ಆರು ತಿಂಗಳ ಕಾಲ ಮುಂದೂಡಿದೆ. ಆದರೆ ಇದೇ ಅವಧಿಯಲ್ಲಿ ಸಾಲಕ್ಕೆ ಬಡ್ಡಿ ಸಂಗ್ರಹಿಸಲು ಬ್ಯಾಂಕ್‌ಗಳಿಗೆ ಅವಕಾಶ ನೀಡಿದೆ. ಇದು ಅನಿವಾರ್ಯ ಎಂದು ಕೋರ್ಟ್‌ಗೆ ನೀಡಿದ ವಿವರಣೆಯಲ್ಲಿ ಆರ್‌ಬಿಐ  ಹೇಳಿದೆ. ಆರ್‌ಬಿಐ ನೀಡಿರುವ ಈ ಸೌಲಭ್ಯವೇ ಒಂದು ಬಗೆಯಲ್ಲಿ ವಿಚಿತ್ರ. ಇದನ್ನು ಒಂದೇ ಮಾತಿನಲ್ಲಿ […]

Read More

ಹೊಸ ಗೆಳೆಯ ಆಸ್ಪ್ರೇಲಿಯ – ಕಿರಿಕಿರಿಯ ನೆರೆಹೊರೆಗೊಂದು ಎಚ್ಚರಿಕೆ

ಭಾರತವು ಆಸ್ಪ್ರೇಲಿಯದ ಜೊತೆ ಮಹತ್ವದ ಒಂದು ಒಪ್ಪಂದಕ್ಕೆ ಗುರುವಾರ ಸಹಿ ಹಾಕಿದೆ. ಇನ್ನು ಮುಂದೆ ಭಾರತ ಹಾಗೂ ಆಸ್ಪ್ರೇಲಿಯ ಪರಸ್ಪರರ ನೆಲಗಳನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಬಹುದು. ಉಭಯ ದೇಶಗಳ ನಡುವೆ ನಡೆದ ಉನ್ನತ ಮಟ್ಟದ ‘ಆನ್‌ಲೈನ್‌ ಶೃಂಗಸಭೆ’ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಪ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಪಾಲ್ಗೊಂಡು, ರಕ್ಷಣೆ ಸೇರಿ ಏಳು ಕ್ಷೇತ್ರಗಳ ಸಹಕಾರ ಒಪ್ಪಂದಕ್ಕೆ ಸಹಿ ಹಾಕಿದರು. ಈ ‘ಮ್ಯೂಚುವಲ್‌ ಲಾಜಿಸ್ಟಿಕ್ಸ್‌ ಸಪೋರ್ಟ್‌ ಅಗ್ರಿಮೆಂಟ್‌’ ಕ್ರಾಂತಿಕಾರಕವಾಗಿದ್ದು ಯುದ್ಧ ವಿಮಾನಗಳ ದುರಸ್ತಿ, ಇಂಧನ ಮರುಪೂರಣ […]

Read More

ಶಾಲಾರಂಭದ ತೊಡಕು – ಪಾಲಕರಿಗೆ ಯಾವುದೇ ಆತಂಕ ಬೇಡ

ಜುಲೈ 1ನೇ ತಾರೀಕಿನಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಆರಂಭಿಸುವ ಚಿಂತನೆ ಮುನ್ನೆಲೆಗೆ ಬಂದಿದೆ. ರಾಜ್ಯದ ಎಲ್ಲ ಸರಕಾರಿ ಶಾಲೆಗಳ ಕಚೇರಿ ಸಿಬ್ಬಂದಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಜೂನ್ 5ರಿಂದಲೇ ಕಚೇರಿ ಕರ್ತವ್ಯಕ್ಕೆ ಹಾಜರಾಗಬೇಕು ಹಾಗೂ ಜೂನ್ 8ರಿಂದ ದಾಖಲಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಜೂನ್ 10ರಿಂದ 15ರವರೆಗೆ ಎಸ್‌ಡಿಎಂಸಿ ಸಭೆಗಳು ನಡೆಯಬೇಕು, ಜೂನ್ 15ರಿಂದ 20ರವರೆಗೆ ಶಾಲೆಯಿಂದ ಹೊರಗುಳಿದವರಿಗಾಗಿ ದಾಖಲಾತಿ ಆಂದೋಲನ ನಡೆಯಲಿದೆ ಎಂದೂ ಆಯುಕ್ತರು ನಿರ್ದೇಶಿಸಿದ್ದಾರೆ. […]

Read More

ಪರ್ಯಾಯ ಕೀಟನಾಶಕಗಳು ಬೇಕು

ಆಯ್ದ ಕೀಟನಾಶಕಗಳ ನಿಷೇಧಕ್ಕೆ ಕೇಂದ್ರ ಸರಕಾರ ನಿರ್ಧಾರ ಮಾಡಿದ್ದು, ಈ ಕುರಿತ ಕರಡು ಪ್ರಸ್ತಾವನೆಯನ್ನು ಸಾರ್ವಜನಿಕ ಚರ್ಚೆಗೆ ಬಿಟ್ಟಿದೆ. ಸರಕಾರದ ಒಲವು ಇವುಗಳ ನಿಷೇಧದತ್ತಲೇ ಇರುವಂತಿದೆ. ಇಲ್ಲಿ ಆತಂಕಕ್ಕೆ ಕಾರಣವಾಗಿರುವುದು, ಪ್ರಸ್ತಾವಿತ 27 ಕೀಟನಾಶಕಗಳು ಹಲವು ದಶಕಗಳಿಂದ ರೈತರು ಹೆಚ್ಚಾಗಿ ಬಳಸುತ್ತಿರುವ, ಕಡಿಮೆ ಅಪಾಯಕಾರಿಯಾಗಿರುವ, ಪರಿಣಾಮಕಾರಿ ಫಲಿತಾಂಶ ನೀಡುತ್ತಿರುವ ಹಾಗೂ ಅಗ್ಗದ ಜನರಿಕ್‌ ಕೀಟನಾಶಕಗಳಾಗಿವೆ. ಒಂದೆಡೆ ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ, ಕೊರೊನಾ ಕಾಲದ ಲಾಕ್‌ಡೌನ್‌ ಮತ್ತು ‘ಕೃಷಿ ಒಳಸುರಿ’ಗಳ ಬೆಲೆಯೇರಿಕೆಗಳಿಂದ ಹೈರಾಣಾಗಿರುವ ರೈತರು ಪರ್ಯಾಯ […]

Read More

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿ – ಮಕ್ಕಳ ಸುರಕ್ಷತೆ ಆದ್ಯತೆಯಾಗಿರಲಿ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಪರೀಕ್ಷೆಗಳನ್ನು ಯಾವಾಗ ನಡೆಸಬೇಕು, ನಡೆಸಬೇಕೋ ಬೇಡವೋ, ನಡೆಸಿದರೆ ಹೇಗೆ, ನಡೆಸದಿದ್ದರೆ ಏನು ತೊಂದರೆ ಮುಂತಾದ ಚರ್ಚೆಗಳು ಸಾರ್ವಜನಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ನಡೆಯುತ್ತಿವೆ. ಜೂನ್ 25ರಿಂದ ಜುಲೈ 4ರವರೆಗೆ ಸರಕಾರ ಪರೀಕ್ಷೆ ನಿಗದಿಪಡಿಸಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವಾಗ ಪರೀಕ್ಷೆಯ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸುವುದು ಅವರನ್ನು ಕೊರೊನಾ ಆತಂಕಕ್ಕೆ ತಳ್ಳಿದಂತಾಗಬಹುದು ಮತ್ತು ಒತ್ತಡ ಸೃಷ್ಟಿಗೆ ಕಾರಣವಾಗಬಹುದು. ಇದರಿಂದ ಅವರು ಪರೀಕ್ಷೆಯನ್ನೂ ಸರಿಯಾಗಿ ಬರೆಯಲಾಗದೆ ಹೋಗಬಹುದು ಎಂಬ ವಾದದಲ್ಲಿ ಭಾಗಶಃ ಸತ್ಯವಿದೆ. […]

Read More

ಕ್ವಾರಂಟೈನ್ ಬಗ್ಗೆ ಭಯ ಬೇಡ – ತಪ್ಪು ಕಲ್ಪನೆ ನಿವಾರಿಸಲು ಕೌನ್ಸೆಲಿಂಗ್ ಬೇಕು

ದಾವಣಗೆರೆಯಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇಶದಲ್ಲಿ ಅಲ್ಲಲ್ಲಿ ಹೀಗೆ ಕ್ವಾರಂಟೈನ್‌ನಲ್ಲಿರುವ ಕೆಲವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು ವಿರಳವಾಗಿಯಾದರೂ ವರದಿಯಾಗಿವೆ. ಕ್ವಾರಂಟೈನ್‌ನಲ್ಲಿದ್ದವರು ಓಡಿಹೋದ ಪ್ರಕರಣಗಳು ಸಾಕಷ್ಟಿವೆ. ಇನ್ನು ಹಲವರು ಅಂತಾರಾಜ್ಯ ವಿಮಾನ ಪ್ರಯಾಣ ಮಾಡಬೇಕಿದ್ದವರು, ತಾವು ತಲುಪಿದ ರಾಜ್ಯದಲ್ಲಿ ಕಡ್ಡಾಯ ಕ್ವಾರಂಟೈನ್‌ಗೆ ಒಳಗಾಗಬೇಕು ಎಂಬ ಶರತ್ತಿಗೆ ಒಪ್ಪದೆ ಹಾಗೇ ಮರಳಿದ ಘಟನೆಯೂ ನಡೆದಿದೆ. ಈ ಆತ್ಮಹತ್ಯೆಗಳು, ತಮಗೆ ಕೋವಿಡ್ ಇರಬಹುದು ಎಂಬ ಆತಂಕದಿಂದ ನಡೆದಿವೆ ಎಂದಾದರೆ ಇವರು ಅಜ್ಞಾನಕ್ಕೆ ಬಲಿಯಾಗಿದ್ದಾರೆ ಎಂದೇ ಹೇಳಬೇಕಾಗುತ್ತದೆ. […]

Read More

ರೆಪೊ ದರ ಇಳಿಕೆ ಯಾರಿಗೆ ಲಾಭ? – ಗ್ರಾಹಕನಿಗೆ ಲಾಭವಿಲ್ಲದ ಬಡ್ಡಿದರ ವ್ಯರ್ಥ

ಕೊರೊನಾ ಹಾವಳಿ ಮತ್ತು ಲಾಕ್‌ಡೌನ್‌ನ ಪರಿಣಾಮ ಕಳೆದ ಎರಡು ತಿಂಗಳಿನಿಂದ ನಿಶ್ಚೇತನಗೊಂಡಿರುವ ಆರ್ಥಿಕ ಚಟುವಟಿಕೆಗಳಿಗೆ ಚೈತನ್ಯ ತುಂಬಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಅಲ್ಪಾವಧಿಯ ಸಾಲದ ಬಡ್ಡಿ ದರವನ್ನು (ರೆಪೊ) ಶೇ.4.4ರಿಂದ ಶೇ.4ಕ್ಕೆ ಕಡಿತಗೊಳಿಸಿದೆ. ಮಾರ್ಚ್‌ನಲ್ಲೂ ರೆಪೊ ದರ ಕಡಿತಗೊಳಿಸಲಾಗಿತ್ತು. 2019 ಮತ್ತು ಈ ವರ್ಷದ ಅವಧಿಯಲ್ಲಿ ಒಟ್ಟಾರೆ ಎಂಟಕ್ಕೂ ಅಧಿಕ ಬಾರಿ ರೆಪೊ ದರ ಇಳಿಸಲಾಗಿದೆ. ಇದರ ಜೊತೆಗೆ ಸಾಲ ಕಂತು ಪಾವತಿಯ ಮುಂದೂಡಿಕೆಯ ಐಚ್ಛಿಕ ಸೌಲಭ್ಯವನ್ನೂ ಆರ್‌ಬಿಐ ವಿಸ್ತರಿಸಿದೆ. ರೆಪೊ ದರ ಇಳಿಕೆಯ […]

Read More

ಹೊಣೆ ಮರೆತ ವರ್ತನೆ – ಜನಪ್ರತಿನಿಧಿಗಳು ಸಂಯಮದಿಂದ ವರ್ತಿಸಲಿ

ರಾಜ್ಯ ಕಾನೂನು ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಕೋಲಾರದಲ್ಲಿ ಸಮಸ್ಯೆ ಹೇಳಿಕೊಳ್ಳಲು ಬಂದ ರೈತ ಮಹಿಳೆಯರಿಗೆ ಅವಾಚ್ಯ ಪದ ಬಳಸಿ ನಿಂದಿಸಿ ಸುದ್ದಿಯಾಗಿದ್ದಾರೆ. ಇದು ರಾಜ್ಯ ರೈತ ಸಂಘದವರ ಪ್ರತಿಭಟನೆ, ಪ್ರತಿಪಕ್ಷಗಳ ತೀವ್ರ ಟೀಕೆಗಳಿಗೂ ಕಾರಣವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಮಾಧುಸ್ವಾಮಿಯವರ ನಡೆಯನ್ನು ಖಂಡಿಸಿದ್ದಾರೆ. ತದನಂತರ ಮಾಧುಸ್ವಾಮಿ ಅವರು ಕ್ಷಮೆ ಕೇಳಿದ್ದು, ಅಲ್ಲೂಕೂಡ ತಮ್ಮ ವರ್ತನೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ಅವರು ಕೆಲವು ಒರಟು ಮಾತನಾಡಿದ ಉದಾಹರಣೆ ಇವೆ. ಒಟ್ಟಾರೆಯಾಗಿ ಇದು ಜವಾಬ್ದಾರಿಯುತ ಜನ ಪ್ರತಿನಿಧಿಯೊಬ್ಬರು ನಡೆದುಕೊಳ್ಳಬೇಕಾದ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top