ಲಾಕ್ಡೌನ್ ಬಹುತೇಕ ತೆರವಾಗಿದ್ದು ಜನಜೀವನ ಸಹಜ ಸ್ಥಿತಿಯತ್ತ ಮರಳಲು ಕಾತರಿಸುತ್ತಿದೆ. ಸಹಜ ಸ್ಥಿತಿಗೆ ಬರಬೇಕೆಂದರೆ ಬದುಕಲು ಅಗತ್ಯವಾದ ದಿನಸಿ ವಸ್ತುಗಳ ಬೆಲೆ ಸಹಜ ಸ್ವರೂಪಕ್ಕೆ ಬರಬೇಕು. ಹಾಗೆಯೇ ರೈತರ ಉತ್ಪನ್ನಗಳು ಲಾಭಕರ ಬೆಲೆಗೆ ಮಾರಾಟವಾಗಬೇಕು, ಅವರೂ ಕೂಡ ಅಗತ್ಯ ವಸ್ತುಗಳಿಗೆ ವೆಚ್ಚ ಮಾಡಲು ಸಾಧ್ಯವಾಗಬೇಕು. ಆದರೆ ಲಾಕ್ಡೌನ್ ತೆರವಾಗುತ್ತಿರುವಂತೆ ಮಾರುಕಟ್ಟೆಯಲ್ಲಿ ಕಾಣಿಸುತ್ತಿರುವ ಸ್ಥಿತಿ ಭಿನ್ನವಾಗಿದೆ. ಸಿಮೆಂಟ್, ಕಬ್ಬಿಣ ಇತ್ಯಾದಿ ನಿರ್ಮಾಣ ಸಾಮಗ್ರಿಗಳು, ಮೊಬೈಲ್ ಇತ್ಯಾದಿ ಎಲೆಕ್ಟ್ರಾನಿಕ್ ಸಾಮಗ್ರಿಗಳ ಬೆಲೆಗಳು ಹೆಚ್ಚಿವೆ. ಕಟ್ಟಡ ಸಾಮಗ್ರಿಗಳ ಬೆಲೆ ಬಹುತೇಕ ದುಪ್ಪಟ್ಟು […]
Read More
ಸೋಮವಾರ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿ, 20 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್ ಅನ್ನು ಘೋಷಿಸಿದ್ದಾರೆ. ಕೊರೊನಾ ಲಾಕ್ಡೌನ್ನಿಂದ ಉಂಟಾಗಿರುವ ಆರ್ಥಿಕ ಬೇಗುದಿಯನ್ನು ತಕ್ಕಮಟ್ಟಿಗೆ ತಣಿಸಲು ಈ ಪ್ಯಾಕೇಜ್ ನೆರವಾಗಬಹುದು ಎಂದು ಆಶಿಸಬಹುದು. ಇದು ಜಿಡಿಪಿಯ ಶೇ.10ರಷ್ಟಿದ್ದು, ಗಣನೀಯ ಪ್ರಮಾಣದ ನೆರವೇ ಆಗಿದೆ. ರೈತರು, ಸಣ್ಣ ಹಾಗೂ ಕಿರು ಉದ್ಯಮಗಳು, ಕೈಗಾರಿಕೆ, ಮಧ್ಯಮ ವರ್ಗದವರಿಗೆ ಈ ಪ್ಯಾಕೇಜ್ ಸಲ್ಲಲಿದೆ ಎಂದು ಪ್ರಧಾನಿ ಹೇಳಿದ್ದಾರೆ. ಕೊರೊನಾ ಸಮರವನ್ನು […]
Read More
ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ರೈಲ್ವೆ ಹಳಿಯ ಹಾದಿ ಹಿಡಿದು ಕಾಲ್ನಡಿಗೆಯಲ್ಲಿ ತಮ್ಮೂರಿಗೆ ವಾಪಸ್ ಹೊರಟಿದ್ದ ವಲಸೆ ಕಾರ್ಮಿಕರಲ್ಲಿ 16 ಮಂದಿ, ರೈಲಿಗೆ ಸಿಕ್ಕಿ ಸತ್ತು ಹೋಗಿದ್ದಾರೆ. ಲಾಕ್ಡೌನ್ನಿಂದ ಉದ್ಯೋಗ ಕಳೆದುಕೊಂಡ ಕಾರ್ಮಿಕರು ಔರಂಗಾಬಾದ್ ಜಿಲ್ಲೆಯ ಜಲ್ನಾದಿಂದ ತಮ್ಮ ತವರು ರಾಜ್ಯ ಮಧ್ಯಪ್ರದೇಶಕ್ಕೆ ಕಾಲ್ನಡಿಗೆ ಮೂಲಕ ಹೊರಟಿದ್ದರು. ನಡೆದು ದಣಿದು ರೈಲು ಹಳಿಗೆ ತಲೆ ಆನಿಸಿ ಮಲಗಿದ್ದವರು ರೈಲು ಹರಿದು ಸತ್ತಿದ್ದಾರೆ. ವಿಪರ್ಯಾಸ ಎಂದರೆ, ಇವರು ರಸ್ತೆಯ ಮೂಲಕ ನಡೆದು ಹೋದರೆ ಪೊಲೀಸರು ತಡೆಯುತ್ತಾರೆಂಬ ಭಯದಿಂದ ರೈಲು ಹಳಿಯಲ್ಲಿ […]
Read More
ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ರಹಸ್ಯ ಗ್ರೂಪ್ ರಚಿಸಿಕೊಂಡು ಸಹಪಾಠಿ ವಿದ್ಯಾರ್ಥಿನಿಯರನ್ನು ಗ್ಯಾಂಗ್ ರೇಪ್ ಮಾಡುವ ಬಗ್ಗೆ ಹೊಂಚು ಹಾಕುತ್ತಿದ್ದ ದಿಲ್ಲಿಯ ಪ್ರತಿಷ್ಠಿತ ವರ್ಗದ ವಿದ್ಯಾರ್ಥಿಗಳ ಬಳಗವೊಂದನ್ನು ದಿಲ್ಲಿ ಪೊಲೀಸರು ಭೇದಿಸಿದ್ದಾರೆ. ಇದರ ಅಡ್ಮಿನ್ನನ್ನು ಬಂಧಿಸಿದ್ದು, ಆತ ಸೇರಿದಂತೆ ಇತರ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. 18ರ ಹರೆಯದ ಈ ಅಡ್ಮಿನ್ನ್ನ ಗ್ರೂಪ್ನಲ್ಲಿ ಹಲವು ಅಪ್ರಾಪ್ತ ವಯಸ್ಕರೂ ಇದ್ದಾರೆ. ಈ ಪ್ರಕರಣವನ್ನು ಒಬ್ಬಾಕೆ ವಿದ್ಯಾರ್ಥಿನಿ ಬಯಲಿಗೆಳೆದಿದ್ದಳು. ಈ ವಿದ್ಯಾರ್ಥಿನಿಯ ಫೋಟೋವನ್ನೂ ತಿದ್ದಿ ನಗ್ನಚಿತ್ರಕ್ಕೆ ಜೋಡಿಸಿ ಈ ಗ್ರೂಪ್ನಲ್ಲಿ ಹಂಚಿಕೊಳ್ಳಲಾಗಿತ್ತು. ಈ […]
Read More
ಕೊರೊನಾ ವೈರಸ್(ಕೋವಿಡ್ 19) ಹರಡುವುದನ್ನು ತಡೆಯಲು ಹೇರಲಾಗಿದ್ದ ಲಾಕ್ಡೌನ್ ಭಾಗಶಃ ತರೆವಿನೊಂದಿಗೆ ದೇಶ ಸಹಜ ಸ್ಥಿತಿಯತ್ತ ಮರಳುವ ಯತ್ನದಲ್ಲಿದೆ. ಇಷ್ಟೆಲ್ಲ ಬಿಗಿ ಕ್ರಮಗಳ ನಂತರವೂ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 50 ಸಾವಿರದ ಗಡಿಯನ್ನು ತಲುಪುತ್ತಿದೆ. ಕೊರೊನಾದಿಂದ 1500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಸೋಂಕಿತರ ಪ್ರಮಾಣ ಏರುಗತಿಯಲ್ಲಿರುವಾಗಲೇ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರುವ ಪ್ರಯತ್ನಕ್ಕೆ ಸರಕಾರ ಮುಂದಾಗಿರುವುದು ಎಲ್ಲೆಡೆ ಮತ್ತೊಂದು ಸುತ್ತಿನ ಆತಂಕ ಸೃಷ್ಟಿಸಿದೆ. ಸರಕಾರ ನೀಡಿರುವ ಮಾಹಿತಿಯ ಪ್ರಕಾರ ಮೊದಲ ಹಂತದಲ್ಲಿ 14,800 ಜನರನ್ನು […]
Read More
ಲಾಕ್ಡೌನ್ನಿಂದ ಕೃಷಿಕರಿಗೆ ಸಂಕಷ್ಟವಾದ ಸಂದರ್ಭದಲ್ಲಿ, ಕೃಷಿಕರಿಗೆ ಕೃಷಿ ಚಟುವಟಿಕೆಗಳಿಗೆ ಹಾಗೂ ತಾವು ಬೆಳೆದ ಬೆಳೆಗಳ ಮಾರಾಟಕ್ಕೆ ಮುಕ್ತ ವಾತಾವರಣ ಕಲ್ಪಿಸುವುದಾಗಿ ಸರಕಾರ ಭರವಸೆ ನೀಡಿತ್ತು. ಆದರೆ ಈ ಭರವಸೆ ಸಕಾಲದಲ್ಲಿ ಈಡೇರದೆ ಇರುವುದರಿಂದ ರೈತರು ಇನ್ನಷ್ಟು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಮತ್ತು ಮಾರಾಟ ವ್ಯವಸ್ಥೆ ಸಿಗದೆ ಕೃಷಿಕರ ಸಂಕಟ ಮುಂದುವರಿದಿದೆ. ಸಾವಿರಾರು ರೈತರು ಸರಿಯಾದ ಬೆಲೆ ಇಲ್ಲ ಎಂಬ ಕಾರಣದಿಂದ ನಿಂಬೆ ಹಣ್ಣು, ಕಲ್ಲಂಗಡಿ ಸೇರಿದಂತೆ ಹಲವು ಬೆಳೆಗಳನ್ನು ಗದ್ದೆಯಲ್ಲೇ ಬಿಟ್ಟಿದ್ದಾರೆ. ಈರುಳ್ಳಿ […]
Read More
ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿದ್ದ ದೊಡ್ಡ ಸಂಖ್ಯೆಯ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಭಾನುವಾರ ಒಂದೇ ದಿನ ಸುಮಾರು 12 ಸಾವಿರ ಕಾರ್ಮಿಕರು ತಮ್ಮೂರುಗಳಿಗೆ ತೆರಳಿದ್ದು, ಮುಂದಿನ ಕೆಲ ದಿನಗಳಲ್ಲಿ ಒಂದು ಲಕ್ಷದಷ್ಟು ಮಂದಿ ಊರು ಬಿಡಬಹುದು ಎಂಬ ಅಂದಾಜಿದೆ. ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಎಲ್ಲಿ ನೋಡಿದರೂ ಕಾರ್ಮಿಕರು ತಮ್ಮ ಹೆಂಡತಿ, ಮಕ್ಕಳೊಂದಿಗೆ ಬಂದು ಕೂತಿದ್ದಾರೆ. ಇವರನ್ನು ಯಾವುದೇ ಗೊಂದಲ, ಗದ್ದಲಗಳಿಲ್ಲದೆ ಊರಿಗೆ ಕಳುಹಿಸಲು ಸರಕಾರ ಹರಸಾಹಸ ಪಡುತ್ತಿದೆ. ಹಲವು ಸಂಸ್ಥೆಗಳು ಇವರಿಗೆ ಉಚಿತ […]
Read More
ಕೊರೊನಾ ಸೋಂಕಿನ ಕಾರಣವಾಗಿ ಚೀನಾದಿಂದ ಅನೇಕ ಬಹುರಾಷ್ಟ್ರೀಯ ಕಂಪನಿಗಳು ಭಾರತಕ್ಕೆ ಸ್ಥಳಾಂತರವಾಗುವ ನಿರೀಕ್ಷೆ ಇದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತೆ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ರಾಜ್ಯಗಳಿಗೆ ಇವುಗಳ ಹೂಡಿಕೆಯನ್ನು ಆಕರ್ಷಿಸಲು ಸಮಗ್ರ ಯೋಜನೆಯನ್ನು ರೂಪಿಸಬೇಕು ಎಂದು ಮೋದಿಯವರು ತಿಳಿಸಿದ್ದಾರೆ. ಇದು ಒಂದು ಪೂರ್ವ ಸೂಚನೆ ಅಷ್ಟೇ. ಹೀಗಾಗುವ ಸಾಧ್ಯತೆ ನಿಚ್ಚಳವಾಗಿ ಕಾಣಿಸುತ್ತಿದೆ. ಯಾಕೆಂದರೆ ಇತ್ತೀಚೆಗೆ ಅಮೆರಿಕ, ಜಪಾನ್ ಮತ್ತಿತರ ರಾಷ್ಟ್ರಗಳು ಚೀನಾದ ಅವಲಂಬನೆಯನ್ನು ಗಣನೀಯವಾಗಿ ತಗ್ಗಿಸಲು ನಿರ್ಧರಿಸಿವೆ. ಜಪಾನ್ ಈಗಾಗಲೇ ಇದಕ್ಕಾಗಿ ಪ್ರತ್ಯೇಕ ಯೋಜನೆಯನ್ನು […]
Read More
ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ವಿಧಿಸಲಾದ ಮೂರು ವಾರಗಳ ಮೊದಲ ಲಾಕ್ಡೌನ್ ಮುಗಿದು ಈಗ ಮೇ.3ರವರೆಗೆ ಎರಡನೇ ಹಂತದ ನಿರ್ಬಂಧ ವಿಧಿಸಲಾಗಿದೆ. ಕೊರೊನಾ ಸೋಂಕು ಹರಡಿರುವ ಇತರ ಹಲವು ದೇಶಗಳಿಗೆ ಹೋಲಿಸಿದರೆ, ಲಾಕ್ಡೌನ್ ಅವಧಿಯಲ್ಲಿ ಸೋಂಕಿನ ಪ್ರಮಾಣವನ್ನು ಸಾಕಷ್ಟು ಪರಿಣಾಮಕಾರಿಯಾಗಿಯೇ ತಡೆಗಟ್ಟಲಾಗಿದೆ. ಸೋಂಕುಗಳು ಮಿತಿ ಮೀರಿ ಹೋಗದಂತೆ ಇದು ಸಹಕರಿಸಿದೆ. ಆದರೆ ಈ ಲಾಕ್ಡೌನ್ ದುಷ್ಪರಿಣಾಮವಾಗಿ ಆರ್ಥಿಕತೆ ದೊಡ್ಡ ಹೊಡೆತ ತಿಂದಿದೆ. ಇದನ್ನು ಸರಿದೂಗಿಸಿಕೊಂಡು ಹೋಗಲು ಮುಂದಿನ ಅವಧಿಯಲ್ಲಿ ಲಾಕ್ಡೌನ್ನ ಕೆಲವು ಉಪಕ್ರಮಗಳನ್ನು ಸಡಿಲಗೊಳಿಸುವ ಚಿಂತನೆಗೆ ಕೇಂದ್ರ […]
Read More
ವಾಸ್ತವದಲ್ಲಿ ನಾವೆಲ್ಲರೂ ಮುಷ್ಕರ, ಹರತಾಳ ಮತ್ತು ಬಂದ್ನಂಥ ಪ್ರವೃತ್ತಿಗಳನ್ನು ವಿರೋಧಿಸುವ ಮನಸ್ಥಿತಿ ಉಳ್ಳವರು ನಿಜ. ಈ ನೆಲದ ನ್ಯಾಯಾಲಯಗಳೂ ಬಂದ್ಗೆ ಸಮ್ಮತಿಯನ್ನು ನೀಡುವುದಿಲ್ಲ; ಬಂದ್ ವೇಳೆ ಉಂಟಾಗುವ ನಷ್ಟವನ್ನು ಆಯೋಜಕರಿಂದಲೇ ವಸೂಲಿ ಮಾಡಬೇಕೆಂಬ ಐತಿಹಾಸಿಕ ಆದೇಶಗಳನ್ನು ನೀಡಿವೆ. ಪರಿಸ್ಥಿತಿ ಹೀಗಿರುವಾಗ ನಾವೆಲ್ಲ ಈ ಲಾಕ್ಡೌನ್ ಎಂಬ 21 ದಿನಗಳ ಅಜ್ಞಾತವಾಸವನ್ನು ಒಪ್ಪಿಕೊಂಡಿದ್ದೆವೆ. ಯಾಕೆಂದರೆ, ಇಡೀ ಮನುಕುಲಕ್ಕೆ ಅಪಾಯ ತಂದೊಡ್ಡಿರುವ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಇರುವ ಸದ್ಯದ ಏಕೈಕ ಪರಿಹಾರ ಎಂಬ ಕಾರಣಕ್ಕಾಗಿ. ವಿಶೇಷ ಎಂದರೆ, […]
Read More