ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿ ರಾಜ್ಯ ಸರಕಾರ ಉಳಿದೆಡೆ ಲಾಕ್ಡೌನ್ ಅನ್ನು ಬಹುತೇಕ ಸಡಿಲಿಸಿದೆ. ಸೋಂಕು ಹರಡುವಿಕೆಯ ಸರಪಣಿ ಮುರಿಯಲು ಭಾನುವಾರ ಸಂಪೂರ್ಣ ಲಾಕ್ಡೌನ್ ಮಾಡಲು ನಿರ್ಧರಿಸಿದ್ದು, ಮಾಲ್, ಸಿನಿಮಾ, ಹೋಟೆಲ್ಗಳ ತೆರೆಯುವಿಕೆಗೆ ನಿರ್ಬಂಧವಿದೆ. ರಾಜ್ಯದೊಳಗಿನ ರೈಲು ಸಂಚಾರವಿದ್ದರೂ ಮೆಟ್ರೋ ಓಡಾಡುವುದಿಲ್ಲ. ಅಂತಾರಾಜ್ಯ ಪ್ರಯಾಣ ಮುಕ್ತವಲ್ಲ. ಅಂತರ್ಜಿಲ್ಲಾ ಪ್ರಯಾಣ ಮಾಡಬಹುದು. ಹವಾನಿಯಂತ್ರಿತ ಬಸ್ಗಳ ಹೊರತಾಗಿ ರಾಜ್ಯ ಸಾರಿಗೆ ಸಂಸ್ಥೆಗಳ ಎಲ್ಲ ಬಸ್ ಸಂಚಾರ ಶುರುವಾಗಲಿದೆ. ಆಟೋ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಹಾಗೂ ಖಾಸಗಿ ಬಸ್ ಓಡಾಡಲಿವೆ. ಸೆಲೂನ್ ಸಹಿತ ಎಲ್ಲಾ […]
Read More
ಇಡೀ ಜಗತ್ತನ್ನೇ ಕಂಗೆಡಿಸಿರುವ ಕೊರೊನಾ ವೈರಸ್(ಕೋವಿಡ್-19) ಕೂಡಲೇ ನಿರ್ನಾಮ ಆಗಲಿದೆಯೇ, ದೀರ್ಘಕಾಲದವರೆಗೆ ಇರಲಿದೆಯೇ ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ, ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್ಒ), ‘‘ಕೋವಿಡ್-19 ಕೂಡ ಎಚ್ಐವಿ ರೀತಿಯಲ್ಲಿ ದೀರ್ಘಕಾಲಿನ ಸೋಂಕು ರೋಗವಾಗಿ ಉಳಿಯುವ ಸಾಧ್ಯತೆ ಇದ್ದು, ಇದರ ಜತೆಗೇ ಜೀವನ ನಡೆಸುವ ವಿಧಾನಗಳನ್ನು ಕಂಡುಕೊಳ್ಳಬೇಕಿದೆ,’’ ಎಂದು ಹೇಳಿದೆ. ಇದೇ ರೀತಿಯ ಅಭಿಪ್ರಾಯವನ್ನು ಕೆಲವು ದಿನಗಳ ಹಿಂದೆ ಭಾರತ ಸರಕಾರದ ಆರೋಗ್ಯ ಇಲಾಖೆ ಕೂಡ ವ್ಯಕ್ತಪಡಿಸಿ, ‘‘ನಾವು ಕೊರೊನಾ ವೈರಾಣುವಿನೊಂದಿಗೆ ಬದುಕುವುದನ್ನು ಕಲಿಯಬೇಕಿದೆ,’’ ಎಂದು ಹೇಳಿತ್ತು. ಕೊರೊನಾ ವೈರಸ್ […]
Read More
ಹಂತಹಂತವಾಗಿ ಲಾಕ್ಡೌನ್ ಸಡಿಲಿಸುತ್ತಿರುವ ಸರಕಾರ, ಕೈಗಾರಿಕೆಗಳನ್ನು ಆರಂಭಿಸಲು ಅನುಮತಿ ನೀಡಿದೆ. ನಿಗದಿತ ಸಿಬ್ಬಂದಿಯಲ್ಲಿ ಕಾರ್ಯ ನಿರ್ವಹಿಸಲು ಸೂಚಿಸಿದೆ. ಆದರೆ ಕೈಗಾರಿಕೆಗಳು ಈ ಎರಡು ತಿಂಗಳ ಲಾಕ್ಡೌನ್ ಸೃಷ್ಟಿಸಿದ ಬಹಳ ಆಳವಾದ ಸಮಸ್ಯೆಗಳಿಂದ ನರಳುತ್ತಿವೆ. ಈ ಅವಧಿಯಲ್ಲಿ ಕೆಲಸ ನಿರ್ವಹಿಸದ ಕಾರಣದಿಂದ ಎಲ್ಲವನ್ನೂ ಹೊಸದಾಗಿ ಆರಂಭಿಸಬೇಕಿದೆ. ತಮ್ಮ ಉತ್ಪನ್ನಗಳಿಗೆ ಹೊರಗೆ ಬೇಡಿಕೆ ಯಾವ ಪ್ರಮಾಣದಲ್ಲಿದೆ ಎಂಬುದು ಗೊತ್ತಿಲ್ಲದ ಸನ್ನಿವೇಶದಲ್ಲಿ ಕೈಗಾರಿಕೆಗಳು ಕೆಲಸ ಆರಂಭಿಸಬೇಕಿದೆ. ಕಾರ್ಮಿಕರ ಕೊರತೆ ತೀವ್ರವಾಗಿದೆ. ಸಾರಿಗೆ ಸಂಪರ್ಕದ ನಿರ್ಬಂಧದಿಂದ ಕಚ್ಚಾವಸ್ತುಗಳ ಕೊರತೆ ಕಾಡುತ್ತಿದೆ. ಕಳೆದೆರಡು ತಿಂಗಳಿನಿಂದ […]
Read More
ಪೊಲೀಸರ ವಿಶ್ವಾಸಾರ್ಹತೆಗೆ ಧಕ್ಕೆ ತರುವಂಥ ಘಟನೆ ಕಲಬುರಗಿಯಲ್ಲಿ ನಡೆದಿದೆ. ಪ್ರತಿಷ್ಠಿತರು ಜೂಜಾಡಿ ಸಿಕ್ಕಿಬಿದ್ದರೂ ಅವರ ವಿರುದ್ಧ ಕೇಸು ದಾಖಲಿಸದೆ ಹಣವನ್ನು ಮಾತ್ರ ವಶಪಡಿಸಿಕೊಂಡು ಹೋಗಿರುವುದು, ಡಿವಿಆರ್ ಸಾಕ್ಷಿ ನಾಶ ಮಾಡಿರುವುದು, ಇಬ್ಬರು ಸಿಪಿಐಗಳು ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡಿರುವುದು ಗೊತ್ತಾಗಿದೆ. ಲಾಕ್ಡೌನ್ ಉಲ್ಲಂಘನೆ, ಜೂಜಾಟಗಳು ಅಪರಾಧಗಳಾದರೆ, ಪ್ರತಿಷ್ಠಿತರು ಎಂಬ ಹೆಸರಿನಲ್ಲಿ ಅದನ್ನು ಮುಚ್ಚಿಹಾಕಿರುವುದು ಮತ್ತಷ್ಟು ದೊಡ್ಡ ಅಪರಾಧ. ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಒತ್ತಡ ಬಂದಿದೆ. ಕೆಲವು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ […]
Read More
ಲಾಕ್ಡೌನ್ ಸುದೀರ್ಘ ಕಾಲಕ್ಕೆ ಮುಂದುವರಿದರೆ, ಕೊರೊನಾ ಸೊಂಕಿನಿಂದ ಸಾಯುವವರಿಗಿಂತಲೂ ಹಸಿವಿನಿಂದ ಸಾಯುವವರ ಸಂಖ್ಯೆಯೇ ಅಧಿಕವಾಗಲಿದೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಕೋಟ್ಯಂತರ ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರು, ಸ್ವಯಂ ಉದ್ಯೋಗಿಗಳು ಲಾಕ್ಡೌನ್ನಿಂದಾಗಿ ತಮ್ಮ ಜೀವನೋಪಾಯವನ್ನೇ ಕಳೆದುಕೊಂಡು ಕೂತಿದ್ದಾರೆ ಎಂದಿದ್ದಾರೆ. ಭಾರತದಲ್ಲಿ ಕೊರೊನಾ ವೈರಸ್ನಿಂದ ಸಂಭವಿಸುವ ಸಾವಿನ ದರ 0.25-0.5 ಶೇ. ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಈ ಪ್ರಮಾಣ ಅತಿ ಕಡಿಮೆ. ಆದರೆ ಭಾರತದಂತಹ ದುಡಿಯುವ ಜನ ಇರುವ […]
Read More
ದೇಶಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶಾವಕಾಶ ಕಲ್ಪಿಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಅಲ್ಪ ಸಂಖ್ಯಾತ, ಖಾಸಗಿ ಶಾಲೆಗಳಿಗೆ ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಅಂತಿಮ ಶರಾ ಬರೆದಿದೆ. ಇದರೊಂದಿಗೆ ಹಲವು ವರ್ಷಗಳಿಂದ ಈ ನಿಟ್ಟಿನಲ್ಲಿ ನಡೆದುಕೊಂಡು ಬಂದಿದ್ದ ತಾರತಮ್ಯಕ್ಕೆ ಮಂಗಳ ಹಾಡಿದಂತಾಗಿದೆ. ಇನ್ನು ಮುಂದೆ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು, ಖಾಸಗಿ ಕಾಲೇಜುಗಳು ಮತ್ತು ಡೀಮ್ಡ್ ವಿವಿಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲೂ ಪದವಿ ಮತ್ತು ಸ್ನಾತಕೋತ್ತರ […]
Read More
ಕರ್ತವ್ಯಕ್ಕೆ ಹಾಜರಾಗುವಂತೆ ಎಲ್ಲ ಸರಕಾರಿ ಇಲಾಖೆಗಳ ಕೆಳ ಹಂತದ ಸಿಬ್ಬಂದಿಗೆ ರಾಜ್ಯ ಸರಕಾರ ಸೂಚಿಸಿದೆ. ಲಾಕ್ಡೌನ್ ಸಡಿಲಿಕೆಯಿಂದಾಗಿ ಒಂದೊಂದೇ ವಲಯಗಳು ಕಾರ್ಯಾರಂಭ ಮಾಡುವುದು ಅಗತ್ಯವಾಗಿದೆ. ಅದರಲ್ಲೂ ಅಗತ್ಯ ಸೇವೆಗೆ ಸಂಬಂಧಿಸಿದ 18 ಇಲಾಖೆಗಳ ಎಲ್ಲ ವೃಂದದ ನೌಕರರು ಕೆಲಸ ಆರಂಭಿಸುವುದು, ಮುಂದಿನ ದಿನಗಳ ಜನಜೀವನ ಸುಗಮವಾಗಿರಲು ಅನಿವಾರ್ಯವಾಗಿದೆ. ಯಾರ್ಯಾರು ಬಂದು ಕೆಲಸ ನಿರ್ವಹಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಈಗಾಗಲೇ ಆದೇಶ ನೀಡಿದ್ದಾರೆ. ಆದರೆ ಇದಕ್ಕೆ ಪೂರಕವಾದ ವ್ಯವಸ್ಥೆ ಮಾಡುವುದನ್ನು ಸರಕಾರ ಮರೆತಿದೆ. ಉದಾಹರಣೆಗೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ […]
Read More
ರಾಜ್ಯದ ಮಂಗಳೂರಿನಲ್ಲಿ, ಮುಂಬಯಿ- ಚೆನ್ನೈ ಮುಂತಾದ ಹಲವು ಕಡೆ ಕೋವಿಡ್ ಕಾಯಿಲೆಗೆ ಬಲಿಯಾದವರ ಮೃತದೇಹಗಳ ಅಂತಿಮ ಸಂಸ್ಕಾರಕ್ಕೆ ಕೆಲವರು ಸ್ಥಳೀಯ ನಿವಾಸಿಗಳು ಅಡ್ಡಿಪಡಿಸಿರುವುದು ವರದಿಯಾಗಿದೆ. ಮಂಗಳೂರಿನ ಹಲವು ಕಡೆ ಗ್ರಾಮಸ್ಥರು ಪ್ರತಿರೋಧ ಮಾಡಿದ್ದು, ಕಡೆಗೂ ಒಂದು ಕಡೆ ಹೇಗೋ ಅಂತ್ಯಕ್ರಿಯೆ ನಡೆದಿದೆ. ಮುಂದೆ ನಿಂತು ಸಂಸ್ಕಾರ ನಡೆಸಬೇಕಿದ್ದ ಶಾಸಕರೊಬ್ಬರು ಸಕಾರಣವಿಲ್ಲದೆ ಅಡ್ಡಿಪಡಿಸಿದ್ದಾರೆ. ಚೆನ್ನೈಯಲ್ಲಿ ಒಂದು ಕಡೆ ಕೋವಿಡ್ಗೆ ಬಲಿಯಾದ ನರರೋಗ ವೈದ್ಯರೊಬ್ಬರ ಶವವನ್ನು ಸುಡುವುದಕ್ಕೆ ಬಿಡದೆ, ಆಂಬುಲೆನ್ಸ್ನಲ್ಲಿದ್ದ ವೈದ್ಯರು ಸೇರಿದಂತೆ ಎಲ್ಲರ ಮೇಲೂ ದಾರುಣವಾಗಿ ಹಲ್ಲೆ ನಡೆಸಿದ […]
Read More
ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಹೇರಲಾಗಿರುವ ‘ಲಾಕ್ಡೌನ್’ ನಿಂದಾಗಿ ಆರ್ಥಿಕ ಚಟುವಟಿಕೆಗಳೆಲ್ಲವೂ ಸ್ಥಗಿತವಾಗಿವೆ. ಪರಿಣಾಮ ಸರಕಾರದ ಬೊಕ್ಕಸವೂ ಬರಿದಾಗುತ್ತಿದೆ. ಇದು ಅನಿರೀಕ್ಷಿತವೇನಲ್ಲ. ಆದರೆ, ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳು ಯಾವ ರೀತಿ ಪರಿಣಾಮ ಬೀರಲಿವೆ ಎಂಬುದರ ಬಗ್ಗೆ ಸ್ಪಷ್ಟತೆ ಇನ್ನೂ ಸಿಕ್ಕಿಲ್ಲ. ಖಜಾನೆ ಖಾಲಿಯಾಗುತ್ತಿದೆ ಎಂದು ಹೇಳುತ್ತ ಕೂರುವುದರಲ್ಲೂ ಯಾವುದೇ ಅರ್ಥವಿಲ್ಲ. ದೀರ್ಘಕಾಲೀನ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಸಮಯೋಚಿತ ನಿರ್ಧಾರಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೈಗೊಳ್ಳಬೇಕು ಮತ್ತು ಅವುಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ಜನರ […]
Read More
ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಪೊಲೀಸರು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ತೊಡಗಿಸಿಕೊಂಡಿದ್ದಾರೆ. ಆದರೆ, ಕರ್ನಾಟಕವೂ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ಈ ‘ಕೊರೊನಾ ವಾರಿಯರ್ಸ್’ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿವೆ. ಆದರೆ, ಇಂಥ ಸಂದರ್ಭವನ್ನು ಎದುರಿಸುವ ಸಮರ್ಪಕ ಕಾನೂನು ಬಲ ನಮ್ಮ ಸರಕಾರಗಳಿಗೆ ಇರಲಿಲ್ಲ. ಆ ಕೊರತೆಯನ್ನು ಕೇಂದ್ರ ಮತ್ತು ಕರ್ನಾಟಕ ಸರಕಾರಗಳು ಸುಗ್ರೀವಾಜ್ಞೆಗಳ ಮೂಲಕ ತುಂಬಿಕೊಳ್ಳುತ್ತಿವೆ. ಕೊರೊನಾ ಸೇನಾನಿಗಳ ಮೇಲೆ ಹಲ್ಲೆ ಮಾಡುವವರನ್ನು ಹೆಡೆಮುರಿ […]
Read More