– ಪರೀಕ್ಷೆ ಆಕಾಂಕ್ಷಿಗಳಿಗೆ ಸೂಕ್ತ ಸಲಹೆ, ಮಾರ್ಗದರ್ಶನ. ವಿಕ ಸುದ್ದಿಲೋಕ ಬೆಂಗಳೂರು. ‘‘ಸತತ ಪ್ರಯತ್ನ, ಕಠಿಣ ಪರಿಶ್ರಮ, ನಿರಂತರ ಅಭ್ಯಾಸದಿಂದಾಗಿ ಐಎಎಸ್, ಐಪಿಎಸ್, ಐಎಫ್ಎಸ್, ಐಆರ್ಎಸ್ ಸೇರಿದಂತೆ ಇತರ ಹುದ್ದೆಗಳ ಭರ್ತಿಗೆ ‘ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ)’ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಬಹುದೇ ಹೊರತು, ಬಡತನ, ಕನ್ನಡ ಮಾಧ್ಯಮ, ಗ್ರಾಮೀಣ ಪ್ರದೇಶ ಹಾಗೂ ಇತರೆ ಯಾವುದೇ ಸಮಸ್ಯೆಗಳು ಸಾಧನೆಗೆ ಅಡ್ಡಿ ಬರುವುದಿಲ್ಲ,’’ ಎಂಬುದು ಈ ಬಾರಿ ಯುಪಿಎಸ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿರುವ ರಾಜ್ಯದ ಅಗ್ರ ಶ್ರೇಯಾಂಕಿತರ […]
Read More
ಕರ್ನಾಟಕ ಸರಕಾರ ಇಂಜಿನಿಯರಿಂಗ್ ಹಾಗೂ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ನಡೆಸುವ ಸಿಇಟಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿದೆ. ಗುರುವಾರ ಹಾಗೂ ಶುಕ್ರವಾರ ಸುಮಾರು 497 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 1.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪಿಯುಸಿ ಇಂಗ್ಲಿಷ್ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಲಾಕ್ಡೌನ್ ಸಂದರ್ಭದಲ್ಲಿಯೇ ಯಶಸ್ವಿಯಾಗಿ ನಡೆಸಿದ್ದ ಸರಕಾರ, ಈಗ ಸಿಇಟಿಯನ್ನೂ ನೆರವೇರಿಸಿ ಸೈ ಎನ್ನಿಸಿಕೊಂಡಿದೆ. ಇದರಲ್ಲಿ 63 ಮಂದಿ ಕೋವಿಡ್ ಸೋಂಕಿತರೂ ಇದ್ದುದು ವಿಶೇಷ. ಈ ವಿದ್ಯಾರ್ಥಿಗಳು ಪರೀಕ್ಷೆಗಳಿಂದ ವಂಚಿತರಾಗದಂತೆ ನೋಡಿಕೊಂಡ ಪರೀಕ್ಷಾ ಪ್ರಾಧಿಕಾರದ […]
Read More
ಕೊರೊನಾದಿಂದ ಅಸ್ತವ್ಯಸ್ತಗೊಂಡಿರುವ ಜನಜೀವನವನ್ನು ಮತ್ತೆ ಮೊದಲಿನ ಸ್ಥಿತಿಗೆ ತರುವ ಸಂಬಂಧ ‘ಅನ್ಲಾಕ್’ ಪ್ರಕ್ರಿಯೆ ಜಾರಿಯಲ್ಲಿದೆ. ಅದೇ ರೀತಿ, ಶಾಲೆಗಳನ್ನು ಆರಂಭಿಸಬೇಕೇ, ಬೇಡವೇ ಎಂಬ ಬಗ್ಗೆ ಚರ್ಚೆಗಳೂ ನಡೆಯುತ್ತಿವೆ. ಶಾಲೆ ಆರಂಭದ ವಿಷಯದಲ್ಲಿ ಪೋಷಕರ ಆತಂಕವೂ ಸಹಜವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಅವರು ಸಮಾಜದ ಎಲ್ಲವರ್ಗದ ತಜ್ಞರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಅದರಂತೆ, ಸೋಮವಾರ ಸಚಿವರು ‘ವಿಜಯ ಕರ್ನಾಟಕ’ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳ ಸಂಪಾದಕರ ಜತೆ ಚರ್ಚಿಸಿದ್ದಾರೆ. ಕೊರೊನಾ ಮಧ್ಯೆಯೂ […]
Read More
ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಸಂಕಷ್ಟ ಸಮಯದಲ್ಲೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ತಂತ್ರಜ್ಞಾನ ಸೇರಿದಂತೆ ಲಭ್ಯ ಇರುವ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಶೈಕ್ಷಣಿಕ ಚಟುವಟಿಕೆಯನ್ನು ಶೀಘ್ರದಲ್ಲೇ ಆರಂಭಿಸಬೇಕು. ಈ ಸಂಬಂಧ ರಾಜ್ಯ ಸರಕಾರ ಸರಕಾರ ದೃಢ ನಿಲುವು ತೆಗೆದುಕೊಳ್ಳಬೇಕು ಎಂದು ಕನ್ನಡದ ಪ್ರಮುಖ ಪತ್ರಿಕೆಗಳ ಸಂಪಾದಕರು ಸರಕಾರಕ್ಕೆ ಸಲಹೆ ನೀಡಿದರು. ಕೋವಿಡ್ ಸಂದರ್ಭದಲ್ಲಿ ಆನ್ಲೈನ್ ಶಿಕ್ಷ ಣ ಮತ್ತು ಶಾಲಾ ಚಟುವಟಿಕೆಗಳನ್ನು ಯಾವಾಗ ಪ್ರಾರಂಭಿಸಬೇಕು ಕುರಿತು ಅಭಿಪ್ರಾಯ ಸಂಗ್ರಹಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಣ ಸಚಿವ ಎಸ್. […]
Read More
– ಆನ್ಲೈನ್ನಲ್ಲೇ ಉಚಿತ ಅರ್ಜಿ ವಿತರಣೆ ಮಾಡಲು ಡಿಸಿಎಂ ಸೂಚನೆ – ಸೆಪ್ಟೆಂಬರ್ 1ರಿಂದಲೇ ಆನ್ಲೈನ್ ಪಾಠ | ಅಕ್ಟೋಬರ್ನಿಂದ ರೆಗ್ಯುಲರ್ ಕ್ಲಾಸ್? ವಿಕ ಸುದ್ದಿಲೋಕ ಬೆಂಗಳೂರು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪದವಿ ಹಾಗೂ ಇತರೆ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆ ತಕ್ಷಣದಿಂದಲೇ ಆರಂಭವಾಗಲಿದೆ. ಪದವಿ ಕಾಲೇಜುಗಳಲ್ಲಿ ಸೆಪ್ಟೆಂಬರ್ 1ರಿಂದಲೇ ಆನ್ಲೈನ್ ತರಗತಿ ಆರಂಭವಾಗಲಿದೆ. ಕೊರೊನಾ ನಿಯಂತ್ರಣಕ್ಕೆ ಬಂದರೆ ಅಕ್ಟೋಬರ್ನಲ್ಲಿ ರೆಗ್ಯುಲರ್ ತರಗತಿಗಳು ನಡೆಯಲಿವೆ. ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶುಕ್ರವಾರ […]
Read More
ಕೊರೊನಾ ಸೋಂಕಿನ ಆತಂಕದಿಂದ ಸ್ಥಗಿತಗೊಂಡಿರುವ ಶೈಕ್ಷಣಿಕ ರಂಗಕ್ಕೆ ಮರುಜೀವ ತುಂಬುದು ನಿಜಕ್ಕೂ ಒಂದು ಸವಾಲಿನ ಕೆಲಸ. ಈ ಬಗ್ಗೆ ‘ವಿಜಯ ಕರ್ನಾಟಕ’ ನಡೆಸಿದ ವೆಬಿನಾರ್ನಲ್ಲಿ ಮಹತ್ವದ ಅಭಿಪ್ರಾಯಗಳು ಹಾಗೂ ಭರವಸೆಯ ಆಶಾಕಿರಣಗಳು ಮೂಡಿಬಂದಿವೆ. ಆನ್ಲೈನ್ ಮತ್ತು ಆಫ್ಲೈನ್ ಬೆಸೆದ ಸಂಯೋಜಿತ ಶಿಕ್ಷಣ ಭವಿಷ್ಯದ ದೃಷ್ಟಿಯಿಂದಲೂ ಅನಿವಾರ್ಯವಾಗಿರುವುದರಿಂದ ಎರಡಕ್ಕೂ ಒತ್ತು ನೀಡುವ ಹೊಸ ಸಂಯೋಜನೆಯನ್ನು ರೂಪಿಸಬೇಕು ಎಂಬುದು ಈ ಕಾರ್ಯಕ್ರಮದಲ್ಲಿ ಮೂಡಿಬಂದ ಮುನ್ನೋಟ. ಆನ್ಲೈನ್ ಶಿಕ್ಷಣ ಹಳ್ಳಿ ಹಳ್ಳಿಗೆ ತಲುಪಬೇಕೆಂದರೆ, ಇನ್ನಷ್ಟು ಇಂಟರ್ನೆಟ್ ಕ್ರಾಂತಿ ಆಗಬೇಕಾದುದು ಅಗತ್ಯ. ಅದಕ್ಕೆ […]
Read More
ಖಾಸಗಿ ಶಾಲೆಗಳು ಎಲ್ಕೆಜಿಯಿಂದ ಹತ್ತನೇ ತರಗತಿಯವರೆಗೆ ಆನ್ಲೈನ್ ಕ್ಲಾಸ್ಗಳನ್ನು ನಡೆಸುವುದಕ್ಕೆ ಸರಕಾರ ವಿಧಿಸಿರುವ ನಿರ್ಬಂಧಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ‘ಇದು ಸಂವಿಧಾನದ 21 ಹಾಗೂ 21ಎ ವಿಧಿಯಯನ್ವಯ ಪ್ರಜೆಗಳಿಗೆ ದತ್ತವಾಗಿರುವ ಬದುಕಿನ ಹಾಗೂ ಶಿಕ್ಷಣದ ಹಕ್ಕನ್ನು ನಿರಾಕರಿಸಿದಂತಾಗಿದೆ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದರಿಂದ, ಆನ್ಲೈನ್ ಕ್ಲಾಸ್ಗಳನ್ನು ನಡೆಸಲು ಮುಂದಾಗಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮುಕ್ತ ರಹದಾರಿ ದೊರೆತಂತಾಗಿದೆ. ಆದರೆ ಈ ಆದೇಶ, ಆನ್ಲೈನ್ ಶಿಕ್ಷಣದ ಹೆಸರಿನಲ್ಲಿ ಶುಲ್ಕ ವಸೂಲಿ ಮಾಡಲು ಅಥವಾ ಆನ್ಲೈನ್ ಕ್ಲಾಸುಗಳನ್ನು ಕಡ್ಡಾಯ ಮಾಡಲು […]
Read More
ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಹಿನ್ನೆಲೆಯಲ್ಲಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದೆ ಚಿಂತಿತರಾಗಿದ್ದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಯಾನಂದ ಸಾಗರ್ ವಿಶ್ವವಿದ್ಯಾಲಯ ಸಿಇಟಿ, ನೀಟ್ ಮತ್ತು ಡಿಎಸ್ಎಟಿಗೆ ಸಿದ್ಧತೆ ಮಾಡಿಕೊಳ್ಳಲು ಉಚಿತ ಆನ್ಲೈನ್ ತರಗತಿಗಳನ್ನು ‘ವಿಜಯ ಕರ್ನಾಟಕ’ ಸಹಯೋಗದಲ್ಲಿ ಪ್ರಾರಂಭಿಸಿದೆ. ನಗರದ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಆನ್ಲೈನ್ ತರಗತಿಗಳಿಗೆ ಚಾಲನೆ ನೀಡಿದರು. ‘‘ಕೊರೊನಾ ವೈರಸ್ ಸೋಂಕಿನ ಭೀತಿಯಿಂದ ತರಬೇತಿ […]
Read More
– ಡಾ.ರೋಹಿಣಾಕ್ಷ ಶಿರ್ಲಾಲು. ಸಾಹಿತ್ಯ ನಿಂತ ನೀರಲ್ಲ. ಕಾಲ ಉರುಳಿದಂತೆ ಸಾಹಿತ್ಯ ಕೃತಿಗಳ ಆಶಯ, ಅಭಿವ್ಯಕ್ತಿ, ಶೈಲಿ, ವಸ್ತು ಹೀಗೆ ಎಲ್ಲವೂ ಬದಲಾಗುತ್ತಾ ಹೋಗುತ್ತದೆ. ಇದು ದೋಷವಲ್ಲ. ಜೀವಂತಿಕೆಯ ಲಕ್ಷಣ. ಹೀಗಾಗಿ ಯಾವುದೇ ಭಾಷೆಯ ಕಳೆದ ಒಂದು ನೂರು ವರ್ಷದ ಸಾಹಿತ್ಯಚರಿತ್ರೆಯನ್ನು ಅಭ್ಯಾಸ ಮಾಡಲು ಹೊರಟರೆ ನಮಗೆ ಈ ವೈವಿಧ್ಯಮಯ ಬೆಳವಣಿಗೆಯ ದರ್ಶನವಾಗುತ್ತದೆ. ಅಲ್ಲಿ ಸಾಹಿತ್ಯದ ಛಂದೋವಿನ್ಯಾಸ ಬದಲಾಗಿದೆ. ಭಾಷೆಯ ಶೈಲಿ ಬದಲಾಗಿದೆ. ಪ್ರಕಾರಗಳು ಬದಲಾಗಿದೆ. ವಸ್ತು ವಿನ್ಯಾಸಗಳಲ್ಲಿ ಬದಲಾಗಿದೆ ಎನ್ನುವುದು ಕೇವಲ ಬದಲಾವಣೆಗಾಗಿ ನಡೆದ ಬದಲಾವಣೆ […]
Read More
– ವಿನುತಾ ಗೌಡ. ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹ ಮುಕುಂದರು ಆತ್ಮನಿರ್ಭರತೆಯ ಬಗೆಗಿನ ವೆಬಿನಾರ್ ಒಂದರಲ್ಲಿ ಮಾತನಾಡುತ್ತಾ ಅಪರೂಪದ ಸಂಗತಿಯೊಂದನ್ನು ಪ್ರಸ್ಥಾಪಿಸಿದ್ದರು. ಕೃಷಿ, ಕೈಗಾರಿಕೆ, ಉದ್ದಿಮೆ ಮತ್ತು ರಕ್ಷ ಣಾ ಬಲಗಳಲ್ಲಿ ಆತ್ಮನಿರ್ಭರತೆಯ ಅನುಷ್ಠಾನ ಹೇಗೆ, ಎತ್ತ ಮುಂತಾದ ಚರ್ಚೆಗಳ ನಡುವೆಯೂ ಆತ್ಮನಿರ್ಭರಕ್ಕೆ ಒಂದು ವಿಭಿನ್ನ ದೃಷ್ಟಿಕೋನವಿದೆ ಎಂಬುದನ್ನು ಅವರು ತಿಳಿಸಿದ್ದರು. ಸ್ವಾವಲಂಬನೆ ಮತ್ತು ಆತ್ಮನಿರ್ಭರ ಪದಗಳಿಗಿರುವ ತೀರಾ ಹತ್ತಿರದ ಸಂಬಂಧಗಳನ್ನು ವಿವರಿಸುತ್ತಾ, ‘‘ಆತ್ಮನಿರ್ಭರ- ಸ್ವಾವಲಂಬನೆ ಎನ್ನುವುದು ಕೇವಲ ಆರ್ಥಿಕ ದೃಷ್ಟಿಕೋನಕ್ಕೆ ಸಂಬಂಧಿಸಿದ ಸಂಗತಿಯಲ್ಲ. ಅದಕ್ಕೂ […]
Read More