– ಸ್ವಾತಂತ್ರ್ಯವೀರನ ನಾಮಕರಣಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ – ಕ್ಯಾಂಟೀನ್ಗೆ ಇಂದಿರಾ ಗಾಂಧಿ ಹೆಸರಿಟ್ಟಿರಲಿಲ್ಲವೇ ಎಂದ ಬಿಜೆಪಿ. ವಿಕ ಸುದ್ದಿಲೋಕ ಬೆಂಗಳೂರು : ಬೆಂಗಳೂರಿನ ಯಶವಂತಪುರ ಮಾರ್ಗವಾಗಿ ಯಲಹಂಕ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಫ್ಲೈಓವರ್ಗೆ ಸ್ವಾತಂತ್ರ್ಯ ಯೋಧ ವೀರ ಸಾವರ್ಕರ್ ಹೆಸರಿಡುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ತೀವ್ರ ಜಟಾಪಟಿ ನಡೆದಿದೆ. ಈ ವಾದ-ವಿವಾದದ ನಡುವೆಯೇ, ಮೇಲ್ಸೇತುವೆ ಉದ್ಘಾಟನೆ ಸಮಾರಂಭವನ್ನು ರಾಜ್ಯ ಸರಕಾರ ಮುಂದೂಡಿದೆ.ಫ್ಲೈಓವರ್ಗೆ ವೀರ ಸಾವರ್ಕರ್ ಹೆಸರಿಡಲು ಫೆಬ್ರವರಿಯಲ್ಲಿ ಬಿಬಿಎಂಪಿ ಸಭೆಯಲ್ಲಿ ನಿರ್ಣಯಿಸಲಾಗಿತ್ತು. […]